ತೆಲಂಗಾಣ ನೆರೆ ನಿಧಿಗೆ ಬಾಹುಬಲಿ ಪ್ರಭಾಸ್ ದೇಣಿಗೆ
ವರುಣನ ಆರ್ಭಟದಿಂದಾಗಿ ಪ್ರವಾಹ ಪರಿಸ್ಥಿತಿ ಉಂಟಾಗಿ ಜನಜೀವನ ಅಸ್ತವ್ಯಸ್ತವಾಗಿದೆ. ಈ ಹಿನ್ನೆಲೆಯಲ್ಲಿ ‘ಬಾಹುಬಲಿ’ ಖ್ಯಾತಿಯ ನಟ ಪ್ರಭಾಸ್ 1.5 ಕೋಟಿ ರು. ಹಣವನ್ನು ಕೊಡುಗೆ ನೀಡಿದ್ದಾರೆ
ಹೈದರಾಬಾದ್ (ಅ.22): ತೆಲಂಗಾಣದಲ್ಲಿ ವರುಣನ ಆರ್ಭಟದಿಂದಾಗಿ ಪ್ರವಾಹ ಪರಿಸ್ಥಿತಿ ಉಂಟಾಗಿ ಜನಜೀವನ ಅಸ್ತವ್ಯಸ್ತವಾಗಿದೆ.
ಈ ಹಿನ್ನೆಲೆಯಲ್ಲಿ ‘ಬಾಹುಬಲಿ’ ಖ್ಯಾತಿಯ ನಟ ಪ್ರಭಾಸ್ 1.5 ಕೋಟಿ ರು. ಹಣವನ್ನು ತೆಲಂಗಾಣ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ನೀಡಿದ್ದಾರೆ. ಅಷ್ಟೆಅಲ್ಲದೆ ಅಗತ್ಯವಿದ್ದವರಿಗೆ ನೆರವು ನೀಡುವಂತೆ ಅಭಿಮಾನಿಗಳಲ್ಲಿ ಮನವಿ ಮಾಡಿದ್ದಾರೆ.
ಈ ಹಿಂದೆಯೂ ಕೊರೋನಾ ಲಾಕ್ಡೌನ್ ಬಿಕ್ಕಟ್ಟಿನ ಸಮಯದಲ್ಲಿ ಪ್ರಭಾಸ್ 4 ಕೋಟಿ ರು. ದೇಣಿಗೆ ನೀಡಿದ್ದರು. ಸದ್ಯ ಪ್ರಭಾಸ್ ‘ರಾಧೆ ಶ್ಯಾಂ’ ಸಿನಿಮಾ ಚಿತ್ರೀಕರಣ ನಿಮಿತ್ತ ಇಟಲಿಯಲ್ಲಿದ್ದಾರೆ.
ಪ್ರವಾಹದಿಂದ ಮನೆಗೆ ಹಾನಿಯಾಗಿದ್ದರೆ 5 ಲಕ್ಷ ರು. ..
ದೇಶದಲ್ಲಿ ವಿವಿಧ ಪ್ರದೇಶಗಳಲ್ಲಿ ಈಗಾಗಲೇ ಭಾರೀ ಪ್ರಮಾಣದಲ್ಲಿ ಮಳೆಯಾಗುತ್ತಿದ್ದು, ಜನಜೀವನ ತತ್ತರಿಸಿದೆ. ಜನರು ಮನೆಗಳನ್ನು ಕಳೆದುಕೊಂಡು ನೆಲೆ ಇಲ್ಲದೇ ಪರದಾಡುತ್ತಿದ್ದಾರೆ.