ಗಂಭೀರ ಅಪರಾಧಗಳಲ್ಲಿ ಕೋರ್ಟುಗಳಿಂದ ದೋಷಾರೋಪಕ್ಕೆ ಗುರಿಯಾಗಿರುವ ವ್ಯಕ್ತಿಗಳ ಚುನಾವಣಾ ಸ್ಪರ್ಧೆಗೆ ನಿರ್ಬಂಧ ಹೇರಬೇಕು ಎಂಬ ಅರ್ಜಿಯ ಕುರಿತಾಗಿ ಸುಪ್ರೀಂ ಕೋರ್ಟು, ಕೇಂದ್ರ ಸರ್ಕಾರಿದಿಂದ ಪ್ರತಿಕ್ರಿಯೆ ಬಯಸಿದೆ. ಉತ್ತರಿಸಲು 4 ವಾರಗಳ ಕಾಲಾವಕಾಶ ನೀಡಿದೆ.

ನವದೆಹಲಿ (ಏ.10) : ಗಂಭೀರ ಅಪರಾಧಗಳಲ್ಲಿ ಕೋರ್ಟುಗಳಿಂದ ದೋಷಾರೋಪಕ್ಕೆ ಗುರಿಯಾಗಿರುವ ವ್ಯಕ್ತಿಗಳ ಚುನಾವಣಾ ಸ್ಪರ್ಧೆಗೆ ನಿರ್ಬಂಧ ಹೇರಬೇಕು ಎಂಬ ಅರ್ಜಿಯ ಕುರಿತಾಗಿ ಸುಪ್ರೀಂ ಕೋರ್ಟು(Supreme court), ಕೇಂದ್ರ ಸರ್ಕಾರಿದಿಂದ ಪ್ರತಿಕ್ರಿಯೆ ಬಯಸಿದೆ. ಉತ್ತರಿಸಲು 4 ವಾರಗಳ ಕಾಲಾವಕಾಶ ನೀಡಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ವಕೀಲ ಅಶ್ವಿನಿ ಉಪಾಧ್ಯಾಯ(Ashvin upadhyaya) ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿ(Public Interest Litigation)ಯ ವಿಚಾರಣೆ ನಡೆಸಿದ ದ್ವಿಸದಸ್ಯ ಪೀಠ, ‘ಗಂಭೀರ ಅಪರಾಧಗಳು ಯಾವುವು ಎಂಬುದನ್ನು ಮೊದಲು ಸರ್ಕಾರ ಗುರುತಿಸಬೇಕು. ಅದನ್ನು ನೋಡಿಕೊಂಡು ಮುಂದಿನ ವಿಚಾರಣೆ ನಡೆಸೋಣ. 4 ವಾರಗಳಲ್ಲಿ ಕೇಂದ್ರ ಸರ್ಕಾರ ಉತ್ತರಿಸಬೇಕು’ ಎಂದು ಹೇಳಿ ಜುಲೈಗೆ ವಿಚಾರಣೆ ಮುಂದೂಡಿತು.

ಸುಪ್ರೀಂಕೋರ್ಟ್‌ ವಿರೋಧ ಪಕ್ಷಗಳಿಗೆ ಹೊಡೆತ ನೀಡಿದೆ: ತನಿಖಾ ಸಂಸ್ಥೆಗಳ ದುರ್ಬಳಕೆ ಆರೋಪಕ್ಕೆ ಚಾಟಿ ಬೀಸಿದ ಮೋದಿ

ಗಂಭೀರ ಆರೋಪಗಳನ್ನು(Persons Charge Sheeted) ಹೊತ್ತಿರುವವರ ವಿರುದ್ಧ ಮೊದಲು ತನಿಖೆ ನಡೆಯುತ್ತದೆ ಹಾಗೂ ನಂತರ ಅವರ ವಿರುದ್ಧ ಪೊಲೀಸರು ಆರೋಪಪಟ್ಟಿಸಲ್ಲಿಸುತ್ತಾರೆ. ಇದನ್ನು ಪರಿಶೀಲಿಸುವ ಕೋರ್ಟು ದೋಷಾರೋಪಗಳನ್ನು ಹೊರಿಸಿ ವಿಚಾರಣೆ ಆರಂಭಿಸುತ್ತದೆ. ಈ ಹಂತದಿಂದಲೇ ಇಂಥವರನ್ನು ಚುನಾವಣಾ ಸ್ಪರ್ಧೆಯಿಂದ ನಿರ್ಬಂಧಿಸಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.

2019ರ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ ಗೆದ್ದ 539 ವಿಜೇತರ ಪೈಕಿ 233 ಮಂದಿ ತಮ್ಮ ವಿರುದ್ಧ ಕ್ರಿಮಿನಲ್‌ ಕೇಸುಗಳಿವೆ ಎಂದು ದಾಖಲಿಸಿಕೊಂಡಿದ್ದಾರೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.