ಇಂದು ಭಾರತ್ ಬಂದ್| ಕೇಂದ್ರದ ಕೃಷಿ ಕಾಯ್ದೆ ವಿರೋಧಿಸಿ ರೈತರಿಂದ ಬಂದ್‌ಗೆ ಕರೆ| ಬಂದ್ ಯಶಸ್ವಿಯಾಗೋದು ಡೌಟ್

ನವದೆಹಲಿ(ಡಿ.08): ಕೇಂದ್ರ ಸರ್ಕಾರ ಸಪ್ಟೆಂಬರ್‌ನಲ್ಲಿ ಅಂಗೀಕರಿಸಿದ ಮೂರು ಕೃಷಿ ಕಾಯ್ದೆಗಳನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿ ಕಳೆದ ಹನ್ನೆರಡು ದಿನಗಳಿಂದ ಸಹಸ್ರಾರು ಸಂಖ್ಯೆಯಲ್ಲಿ ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರು, ಸಂಘಟನೆಗಳು ಮಂಗಳವಾರ ಬಂದ್ ನಡೆಸಲು ಕರೆ ನೀಡಿವೆ.

Add Asianetnews Kannada as a Preferred SourcegooglePreferred

ಹಳೇ ನಿಯಮದಿಂದ ಭವ್ಯ ಭಾರತ ನಿರ್ಮಾಣ ಸಾಧ್ಯವಿಲ್ಲ; ಪರೋಕ್ಷ ಸೂಚನೆ ನೀಡಿದ ಮೋದಿ!

ಈ ರೈತ ಹೋರಾಟಕ್ಕೆ ಹದಿನೆಂಟು ರಾಜಕೀಯ ಪಕ್ಷಗಳು, ದೆಶವ್ಯಾಪಿ ವಿವಿಧ ಸಂಘಟನೆಗಳು ವ್ಯಾಪಕ ಬೆಂಬಲ ನೀಡಿವೆ. ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ಬಂದ್ ನಡೆಯಲಿದೆ. ಆದರೆ ವಿವಿಧ ಕಾರಣಗಳಿಂದ ಈ ಬಂಷದ್ ಸಂಪೂರ್ಣ ಸ್ತಬ್ಧವಾಗುವ ಬಗ್ಗೆ ಅನುಮಾನವಿದೆ ಎಂದು ವಿಶ್ಲೇಷಿಸಲಾಗಿದೆ. 

ಯಾಕೆ ಬಂದ್ ಸಾಧ್ಯತೆ ಇಲ್ಲ?

* ಜನರಿಗೆ ತೊಂದರೆಯಾಗಬಾರದೆಂಬ ಕಾರಣ ನೀಡಿ ದಿಲ್ಲಿಯ ರೈತ ಸಂಘಟನೆಗಳೇ ಕೇವಲ ನಾಲ್ಕು ತಾಸುಗಳ ಬಂದ್‌ಗೆ ಕರೆ ನೀಡಿವೆ.

* ಬ್ಯಾಂಕ್, ಸರ್ಕಾರಿ ಕಚೇರಿ, ಅಂಗಡಿ ಮುಂಗಟ್ಟು, ಸಾರಿಗೆ ಮತ್ತಿತರ ಪ್ರಮುಖ ಕ್ಷೇತ್ರಗಳು ಎಂದಿನಂತೆ ಕಾರ್ಯ ನಿರ್ವಹಿಸಲಿವೆ. 

ಭಾರತ್ ಬಂದ್: ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಮಹತ್ವದ ಸೂಚನೆ ಜಾರಿ!

* ಬಂದ್‌ಗೆ ಬೆಂಬಲ ನೀಡಿರುವ ಕಾರ್ಮಿಕ, ಸಾರಿಗೆ ಸಂಘಟನೆಗಳಲ್ಲೇ ಒಡಕಿದೆ. ಕೆಲವು ಸಂಣಘಟನೆಗಳು ಸಹಕರಿಸಲ್ಲ ಎಂದಿವೆ.

* ಸಾಮಾನ್ಯವಾಗಿ ಹೋರಾಟಕ್ಕೆ ಬರುವ ಸಂಘ- ಸಂಸ್ಥೆಗಳು ನೈತಿಕ ಬೆಂಬಲ ನೀಡಿದ್ದು, ಪ್ರತಿಭಟನೆಯಷ್ಟೇ ನಡೆಯುವ ಸಾಧ್ಯತೆ ಇದೆ.

ಬಿಜೆಪಿ ಆಡಳಿತವಿರುವ ಅನೇಕ ರಾಜ್ಯಗಳಲ್ಲಿ ಬಂದ್ ವಿಫಲಸಾಧ್ಯತೆ. ಜೊತೆಗೆ ಕೇಂದ್ರದಿಂದಲೂ ಬಂದ್ ಆಗದಂತೆ ಪ್ರಯತ್ನ.