ಖ್ಯಾತ ಭರತನಾತ್ಯ ಕಲಾವಿದೆ ಹಾಗೂ ಪದ್ಮ ಪ್ರಶಸ್ತಿ ಪುರಷ್ಕೃತೆ ಯಾಮಿನಿ ಕೃಷ್ಣಮೂರ್ತಿ ದೆಹಲಿಯ ಅಪೋಲೋ ಆಸ್ಪತ್ರೆಯಲ್ಲಿ ಶನಿವಾರ ಕೊನೆಯುಸಿರೆಳೆದಿದ್ದಾರೆ.

ನವದೆಹಲಿ (ಆ.4): ಖ್ಯಾತ ಭರತನಾತ್ಯ ಕಲಾವಿದೆ ಹಾಗೂ ಪದ್ಮ ಪ್ರಶಸ್ತಿ ಪುರಷ್ಕೃತೆ ಯಾಮಿನಿ ಕೃಷ್ಣಮೂರ್ತಿ ದೆಹಲಿಯ ಅಪೋಲೋ ಆಸ್ಪತ್ರೆಯಲ್ಲಿ ಶನಿವಾರ ಕೊನೆಯುಸಿರೆಳೆದಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

84 ವರ್ಷ ವಯಸ್ಸಿನ ಇವರು ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದು, ಕಳೆದ 7 ತಿಂಗಳಿಂದ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಎಂದು ಅವರ ಮ್ಯಾನೇಜರ್ ಹಾಗೂ ಕಾರ್ಯದರ್ಶಿಯಾಗಿದ್ದ ಗಣೇಶ್ ಮಾಹಿತಿ ನೀಡಿದ್ದಾರೆ.

ಅಪರ್ಣಾ ಮಾತಲ್ಲಿ ಕನ್ನಡ ಕೇಳೋದೇ ಒಂದು ಖುಷಿ: ಮಜಾ ಟಾಕೀಸ್‌ನ ದಿನಗಳ ನೆನೆದು ಕಣ್ಣೀರಾದ ಇಂದ್ರಜಿತ್ ಲಂಕೇಶ್

ಕಲಾವಿದೆಯ ಮೃತ ದೇಹವನ್ನು ಅವರೇ ಸ್ಥಾಪಿಸಿರುವ ‘ಯಾಮಿನಿ ಸ್ಕೂಲ್ ಆಫ್‌ ಡ್ಯಾನ್ಸ್‌’ಗೆ ಭಾನುವಾರ ಬೆಳಗ್ಗೆ 9 ಗಂಟೆಗೆ ತಂದು ಅಂತಿಮ ದರ್ಶನಕ್ಕೆ ಇಡಲಾಗುತ್ತದೆ.

ಆಂದ್ರಪ್ರದೇಶ ಮೂಲದವರಾದ ಯಾಮಿನಿ, 2016ರಲ್ಲಿ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪದ್ಮವಿಭೂಷಣಕ್ಕೆ ಭಾಜನರಾಗಿದ್ದಾರೆ.