ಮಧ್ಯಪ್ರದೇಶದ ಧಾರ್‌ ಪ್ರದೇಶದಲ್ಲಿರುವ ವಿವಾದಿತ ಭೋಜಶಾಲಾ ಮಸೀದಿ ಮೂಲತಃ ಸರಸ್ವತಿ ದೇಗುಲವಾಗಿತ್ತು ಎಂದು ಖ್ಯಾತ ಇತಿಹಾಸತಜ್ಞ ಕೆ.ಕೆ. ಮೊಹಮ್ಮದ್‌ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಆದರೂ ವಿವಾದ ನ್ಯಾಯಾಲಯದಲ್ಲಿದ್ದು, ಅದು ಕೊಡುವ ಆದೇಶಕ್ಕೆ ಇಬ್ಬರೂ ಬದ್ಧರಾಗಿರಬೇಕು ಎಂದು ತಿಳಿಸಿದ್ದಾರೆ.

ಗ್ವಾಲಿಯರ್‌: ಮಧ್ಯಪ್ರದೇಶದ ಧಾರ್‌ ಪ್ರದೇಶದಲ್ಲಿರುವ ವಿವಾದಿತ ಭೋಜಶಾಲಾ ಮಸೀದಿ ಮೂಲತಃ ಸರಸ್ವತಿ ದೇಗುಲವಾಗಿತ್ತು ಎಂದು ಖ್ಯಾತ ಇತಿಹಾಸತಜ್ಞ ಕೆ.ಕೆ. ಮೊಹಮ್ಮದ್‌ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಆದರೂ ವಿವಾದ ನ್ಯಾಯಾಲಯದಲ್ಲಿದ್ದು, ಅದು ಕೊಡುವ ಆದೇಶಕ್ಕೆ ಇಬ್ಬರೂ ಬದ್ಧರಾಗಿರಬೇಕು ಎಂದು ತಿಳಿಸಿದ್ದಾರೆ.

Add Asianetnews Kannada as a Preferred SourcegooglePreferred

ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭೋಜಶಾಲಾದಲ್ಲಿ ಮೊದಲು ಸರಸ್ವತಿ ದೇಗುಲ ನಿರ್ಮಿಸಲಾಗಿತ್ತು. ಬಳಿಕ ಅದನ್ನು ಕೆಡವಿ ಮಸೀದಿಯನ್ನು ನಿರ್ಮಿಸಲಾಯಿತು. ಆದರೆ ಪ್ರಸ್ತುತ ಪೂಜಾ ಸ್ಥಳಗಳ ಕಾಯ್ದೆ-1991ರ ಪ್ರಕಾರ 1947ನೇ ಇಸವಿಯನ್ನು ಮಾನದಂಡವಾಗಿ ಇಟ್ಟುಕೊಂಡರೆ ಅದು ಮಸೀದಿಯಾಗಿ ಪರಿವರ್ತನೆ ಆಗಿಹೋಗಿದೆ. ಈ ವಿವಾದ ನ್ಯಾಯಾಲಯದಲ್ಲಿರುವ ಕಾರಣ ಅಲಹಾಬಾದ್‌ ನ್ಯಾಯಪೀಠ ಕೊಡುವ ತೀರ್ಪಿಗೆ ಹಿಂದೂ ಮತ್ತು ಮುಸ್ಲಿಂ ಕಕ್ಷಿದಾರರು ಬದ್ಧರಾಗಿ ಶಾಂತಿ ಸೌಹಾರ್ದತೆಯಿಂದ ಮುನ್ನಡೆಯಬೇಕು ಎಂದರು.

ಭಾರೀ ಬಿಗಿ ಭದ್ರತೆಯಲ್ಲಿ ವಿವಾದಿತ ಕಮಲ್‌ ಮೌಲಾ ಮಸೀದಿ-ಭೋಜ್‌ಶಾಲಾ ದೇಗುಲ ಸಮೀಕ್ಷೆ ಆರಂಭ

ಮಸೀದಿ ಬದಲಿಸಬಹುದು, ಮಂದಿರವನ್ನಲ್ಲ

ಇದೇ ವೇಳೆ ಕಾಶಿ-ಮಥುರಾದಲ್ಲಿ ನಡೆಯುತ್ತಿರುವ ಮಂದಿರ-ಮಸೀದಿ ವಿವಾದಗಳ ಕುರಿತು ಅಭಿಪ್ರಾಯ ವ್ಯಕ್ತಪಡಿಸುತ್ತಾ, ‘ಕಾಶಿ, ಮಥುರಾದಲ್ಲಿ ಹಿಂದೂಗಳ ದೇವಾಲಯವಿದೆ. ಅದರ ಜೊತೆಗೆ ಆ ಸಮುದಾಯಕ್ಕೆ ಭಾವನಾತ್ಮಕ ಸಂಬಂಧವಿದೆ. ಆದರೆ ಅಲ್ಲಿ ಇರುವ ಮಸೀದಿಗಳು ಮೂಲತಃ ಪ್ರವಾದಿ ಮೊಹಮ್ಮದ್‌ ಅಥವಾ ಔಲಿಯಾ ಅವರಿಗೆ ಸಂಬಂಧಿಸಿಲ್ಲ. ಈ ಹಿನ್ನೆಲೆಯಲ್ಲಿ ಅಲ್ಲಿ ಮಸೀದಿಯನ್ನು ಬದಲಿಸಬಹುದು. ಆದರೆ ಮಂದಿರವನ್ನು ಬದಲಿಸಲು ಸಾಧ್ಯವಿಲ್ಲ. ಏಕೆಂದರೆ ಅಲ್ಲಿನ ವಿಗ್ರಹಗಳು ಬಹಳ ಹಿಂದೆ ಪ್ರತಿಷ್ಠಾಪನೆಯಾಗಿವೆ ಎಂದು ತಿಳಿಸಿದರು.

ಕೆಕೆ ಮೊಹಮ್ಮದ್ ಅವರು ಅಯೋಧ್ಯೆ ರಾಮಮಂದಿರವನ್ನು ಸಮೀಕ್ಷೆ ಮಾಡಬೇಕೆಂದು ಮೊದಲ ಬಾರಿಗೆ 1976-77ರಲ್ಲಿ ನೇಮಿಸಿದ್ದ ಪ್ರೊ. ಬಿಬಿ ಲಾಲ್‌ ನೇತೃತ್ವದ ಸಮಿತಿಯ ಸದಸ್ಯರಾಗಿದ್ದರು.

ಭೋಜಶಾಲಾ ದೇವಾಲಯ ಸಂಕೀರ್ಣದ ಎಎಸ್‌ಐ ಸರ್ವೆಗೆ ಆದೇಶ ನೀಡಿದ ಹೈಕೋರ್ಟ್‌!