Asianet Suvarna News Asianet Suvarna News

General Bipin Rawat Death: ಸಶಸ್ತ್ರ ಪಡೆಗಳಿಗೆ ಮತ್ತು ದೇಶಕ್ಕೆ ತುಂಬಲಾರದ ನಷ್ಟ: ರಾಜನಾಥ್‌ ಸಿಂಗ್‌!

*ತಮಿಳುನಾಡಿನ ಕೂನೂರಿನಲ್ಲಿ ಸೇನಾ ಹೆಲಿಕಾಪ್ಟರ್ ಪತನ
*ಹೆಲಿಕಾಪ್ಟರ್ ದುರಂತದಲ್ಲಿ ಬಿಪಿನ್ ರಾವತ್ ಸೇರಿ 13 ಮಂದಿ ನಿಧನ 
*ಸಶಸ್ತ್ರ ಪಡೆಗಳಿಗೆ ಮತ್ತು ದೇಶಕ್ಕೆ ತುಂಬಲಾರದ ನಷ್ಟ : ರಾಜನಾಥ್‌ ಸಿಂಗ್‌ 

Bipin Rawat untimely death is an irreparable loss to our Armed Forces said rajnath Singh mnj
Author
Bengaluru, First Published Dec 8, 2021, 6:45 PM IST

ವೆಲ್ಲಿಂಗ್ಟನ್(ಡಿ.08): ತಮಿಳುನಾಡಿನ ಕುನ್ನೂರು ಅರಣ್ಯ ಪ್ರದೇಶದಲ್ಲಿ ಸೇನಾ ಹೆಲಿಕಾಪ್ಟರ್ ಬುಧವಾರ ಪತನಗೊಡಿದ್ದು, ಈ ದುರಂತದಲ್ಲಿ ಅವರ ಪತ್ನಿ ಮಧುಲಿಕಾ ರಾವತ್ ಸೇರಿ ಒಟ್ಟು 13 ಮಂದಿ ಸಾವನ್ನಪ್ಪಿರುವ ಮಾಹಿತಿಯನ್ನು ಭಾರತೀಯ ವಾಯುಸೇನಾ ಪಡೆ ದೃಢಪಡಿಸಿದೆ. ವೆಲ್ಲಿಂಗ್ಟನ್ ರಕ್ಷಣಾ ಸೇವಾ ಸಿಬ್ಬಂದಿ ಕಾಲೇಜಿನಲ್ಲಿ ಉಪನ್ಯಾಸ ನೀಡಲು ಬಿಪಿನ್ ರಾವತ್ ತೆರಳುತ್ತಿದ್ದರು. ಆದರೆ ಹೆಲಿಕಾಪ್ಟರ್ ಸೂಲೂರು ವಾಯುನೆಲೆಯಿಂದ ವೆಲ್ಲಿಂಗ್ಟನ್‌ಗೆ ತೆರಳುವಾಗ, ಮಧ್ಯಾಹ್ನ 12.20ಕ್ಕೆ ಪತನಗೊಂಡಿದೆ. ಲ್ಯಾಂಡಿಂಗ್ ಸ್ಥಳದಿಂದ ಕೇವಲ 10 ಕಿಮೀ ದೂರದಲ್ಲಿ ಅಪಘಾತ ಸಂಭವಿಸಿದೆ ಎಂದು ಸ್ಥಳದಲ್ಲಿದ್ದ ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ವಿಮಾನದಲ್ಲಿದ್ದ ಹದಿಮೂರು ಮಂದಿ ಸಾವನ್ನಪ್ಪಿದ್ದು, ಮೃತರ ಗುರುತು ಪತ್ತೆಹಚ್ಚಲು ಡಿಎನ್‌ಎ ಪರೀಕ್ಷೆ ನಡೆಸಲಾಗುತ್ತದೆ ಎನ್ನಲಾಗಿದೆ. 

ಈ ಬೆನ್ನಲ್ಲೇ ರಕ್ಷಣಾ ಸಚಿವ ರಾಜ್‌ನಾಥ್‌ ಸಿಂಗ್‌ ಟ್ವೀಟ್‌ ಮಾಡಿದ್ದು ರಕ್ಷಣಾಸಿಬ್ಬಂದಿ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ನಿಧನ ತುಂಬಲಾರದ ನಷ್ಟ ಎಂದು ಹೇಳಿದ್ದಾರೆ. " ತಮಿಳುನಾಡಿನಲ್ಲಿ ಇಂದು ನಡೆದ ಅತ್ಯಂತ ದುರದೃಷ್ಟಕರ ಹೆಲಿಕಾಪ್ಟರ್ ಅಪಘಾತದಲ್ಲಿ ರಕ್ಷಣಾ ಸಿಬ್ಬಂದಿ ಮುಖ್ಯಸ್ಥ ಜನರಲ್ ಬಿಪಿನ್ ರಾವತ್, ಅವರ ಪತ್ನಿ ಮತ್ತು ಇತರ 11 ಸಶಸ್ತ್ರ ಪಡೆಗಳ ಸಿಬ್ಬಂದಿಯ ಹಠಾತ್ ನಿಧನದಿಂದ ತೀವ್ರ ದುಃಖವಾಗಿದೆ. ಅವರ ಅಕಾಲಿಕ ಮರಣವು ನಮ್ಮ ಸಶಸ್ತ್ರ ಪಡೆಗಳಿಗೆ ಮತ್ತು ದೇಶಕ್ಕೆ ತುಂಬಲಾರದ ನಷ್ಟವಾಗಿದೆ" ಎಂದು ಹೇಳಿದ್ದಾರೆ.

"

 

 

ಎಂಐ-17 ಹೆಲಿಕಾಪ್ಟರ್ ಅನ್ನು ವಿವಿಐಪಿ ಚಲನೆಯಲ್ಲಿ ಬಳಸಲಾಗುತ್ತದೆ

ಸೇನಾ ಅಧಿಕಾರಿಗಳು ಹೋಗುವ ಹೆಲಿಕಾಪ್ಟರ್ ಟ್ವಿನ್ ಇಂಜಿನ್ ಹೊಂದಿದೆ. ಅಪಘಾತ ನಡೆದ ಎಂಐ 17ರಲ್ಲಿ ಪ್ರಧಾನಿ, ರಕ್ಷಣಾ ಸಚಿವರಂತಹ ವಿವಿಐಪಿಗಳೂ ಸವಾರಿ ಮಾಡುತ್ತಾರೆ. ಸೇನೆ ಮತ್ತು ವಾಯುಪಡೆ ಈ ಹೆಲಿಕಾಪ್ಟರ್ ಅನ್ನು ವಿವಿಐಪಿಗಾಗಿ ಬಳಸುತ್ತವೆ. ಇದರಲ್ಲಿ ಎರಡು ಎಂಜಿನ್ ಗಳಿದ್ದು, ಯಾವುದೇ ಸಂದರ್ಭದಲ್ಲೂ ಮತ್ತೊಂದು ಎಂಜಿನ್ ಬಳಸಿ ಸರಿಯಾದ ಜಾಗಕ್ಕೆ ತರಬಹುದು ಎನ್ನಲಾಗಿದೆ.

ಹೆಲಿಕಾಪ್ಟರ್‌ನಲ್ಲಿ ಯಾರೆಲ್ಲಾ ಇದ್ದರು?

ಜನರಲ್ ಬಿಪಿನ್ ರಾವತ್, ಮಧುಲಿಕಾ ರಾವತ್, ಬ್ರಿಗೇಡಿಯರ್ ಎಲ್ಎಸ್ ಲಿಡರ್, ಲೆಫ್ಟಿನೆಂಟ್. ಎ. ಹರ್ಜಿಂದರ್ ಸಿಂಗ್, ನಾಯಕ್ ಗುರುಸೇವಕ್ ಸಿಂಗ್, ನಾಯಕ್. ಜಿತೇಂದ್ರ ಕುಮಾರ್, ಲ್ಯಾನ್ಸ್ ನಾಯಕ್ ವಿವೇಕ್ ಕುಮಾರ್, ಲ್ಯಾನ್ಸ್ ನಾಯಕ್ ಬಿ. ಸಾಯಿ ತೇಜ, ಹವಾಲ್ದಾರ್ ಸತ್ಪಾಲ್.

ಚಾಪರ್‌ನ ಉತ್ಪಾದನೆ ಮತ್ತು ಇತಿಹಾಸ

ತಮಿಳುನಾಡಿನಲ್ಲಿ ಪತನಗೊಂಡ ಹೆಲಿಕಾಪ್ಟರ್ ಅನ್ನು Mi-17V-5  medium-lifter ಚಾಪರ್ ಎಂದು ಗುರುತಿಸಲಾಗಿದೆ, ಇದು ಇಂದು ವಿಶ್ವದ ಅತ್ಯಂತ ಸುಧಾರಿತ ಹೆಲಿಕಾಪ್ಟರ್‌ಗಳಲ್ಲಿ ಒಂದಾಗಿದೆ. ಆದಾಗ್ಯೂ  Mi-ಸರಣಿಯನ್ನು ಹೆಲಿಕಾಪ್ಟರ್‌ಗಳ ಈ ಹಿಂದೆ ಅಪಘಾತದಕ್ಕೊಳಗಾದ ಘಟನೆಗಳು ನಡೆದಿವೆ. ಆದರೆ ಈ ಚಾಪರ್‌ನ ಸುರಕ್ಷತಾ ದಾಖಲೆಯು ಪ್ರಪಂಚದ ಇತರ ಕೆಲವು ಕಾರ್ಗೋ ಚಾಪರ್‌ಗಳಿಗಿಂತ ಉತ್ತಮವಾಗಿದೆ.

IAF Mi-17V-5 Helicopter: ತಮಿಳುನಾಡಿನಲ್ಲಿ ಪತನಗೊಂಡ ರಷ್ಯಾ ನಿರ್ಮಿತ ಹೆಲಿಕಾಪ್ಟರ್‌ನ ಕಂಪ್ಲೀಟ್‌ ಡಿಟೇಲ್ಸ್!‌

Mi-17V-5 ಎಂಬುದು Mi-8/17 ಕುಟುಂಬದ ಹೆಲಿಕಾಪ್ಟರ್‌ಗಳ ಮಿಲಿಟರಿ ಸಾರಿಗೆ ಚಾಪರ್‌ ಆಗಿದೆ. ಇದು ಅತ್ಯಂತ ವಿಶ್ವಾಸಾರ್ಹ ಚಾಪರ್‌ ಆಗಿದ್ದು ಜಾಗತಿಕವಾಗಿ ಪ್ರಸಿದ್ಧವಾಗಿದೆ. ಈ ಹೆಲಿಕಾಪ್ಟರ್‌ಗಳನ್ನು ರಷ್ಯಾದ ಕಜಾನ್‌ನಲ್ಲಿರುವ ರಷ್ಯಾದ ಹೆಲಿಕಾಪ್ಟರ್‌ಗಳ ಅಂಗಸಂಸ್ಥೆಯಾದ ಕಜನ್ ಹೆಲಿಕಾಪ್ಟರ್‌ಗಳು (Kazan Helicopters) ಉತ್ಪಾದಿಸುತ್ತವೆ. ಹೆಲಿಕಾಪ್ಟರ್ ಅನ್ನು ಸೈನ್ಯ ಮತ್ತು ಶಸ್ತ್ರಾಸ್ತ್ರ ಸಾರಿಗೆ, ಅಗ್ನಿಶಾಮಕ ಬೆಂಬಲ, ಬೆಂಗಾವಲು, ಗಸ್ತು ಮತ್ತು ಹುಡುಕಾಟ ಮತ್ತು ಪಾರುಗಾಣಿಕಾ ( search-and-rescue) ಕಾರ್ಯಾಚರಣೆ ಸೇರಿದಂತೆ ವಿವಿಧ ರೀತಿಯ ಮಿಲಿಟರಿ ಕಾರ್ಯಾಚರಣೆಗಳಲ್ಲಿ ಬಳಸಬಹುದು. ಭಾರತೀಯ ವಾಯುಪಡೆಯಲ್ಲಿ (IAF) ಚಾಪರ್‌ನ ಬಳಕೆಗಾಗಿ ರಕ್ಷಣಾ ಸಚಿವಾಲಯವು ಡಿಸೆಂಬರ್ 2008 ರಲ್ಲಿ ರಷ್ಯಾದ ಹೆಲಿಕಾಪ್ಟರ್‌ಗಳಿಗೆ 80 ಹೆಲಿಕಾಪ್ಟರ್‌ಗಳ ಆರ್ಡರ್ ನೀಡಿತ್ತು.  ಈ ಹೆಲಿಕಾಪ್ಟರ್‌ನ ವಿತರಣೆಗಳು 2011 ರಲ್ಲಿ ಪ್ರಾರಂಭವಾಗಿತ್ತು ಹಾಗೂ  ಅಂತಿಮ ಚಾಪರ್‌ನ   2018 ರಲ್ಲಿ ಹಸ್ತಾಂತರಿಸಲಾಗಿತ್ತು.

Follow Us:
Download App:
  • android
  • ios