ಮತಗಳ್ಳತನ ಆರೋಪದ ಬಳಿಕ ರಾಹುಲ್ ಗಾಂಧಿ ಬಿಹಾರದಲ್ಲಿ ವೋಟ್ ಅಧಿಕಾರ್ ಯಾತ್ರಾ ನಡೆಸುತ್ತಿದ್ದಾರೆ. ಆದರೆ ರಾಹುಲ್ ಗಾಂಧಿ ಯಾತ್ರೆಯಲ್ಲಿ ಅವಘಡ ನಡೆದಿದೆ. ರಾಹುಲ್ ಗಾಂಧಿ ಬೆಂಬಲಿಗರೊಂದಿಗೆ ತೆರಳುತ್ತಿದ್ದ ಕಾರು ಪೊಲೀಸ್ ಪೇದೆ ಕಾಲಿನ ಮೇಲೆ ಹತ್ತಿದ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.

ಪಾಟ್ನಾ (ಆ.19) ಚುನಾವಣಾ ಆಯೋಗ, ಬಿಜೆಪಿ ವಿರುದ್ಧ ಮತಗಳ್ಳತನ ಆರೋಪದ ಬಳಿಕ ರಾಹುಲ್ ಗಾಂಧಿ ಬಿಹಾರದಲ್ಲಿ ವೋಟ್ ಅಧಿಕಾರ್ ಯಾತ್ರೆ ನಡೆಸುತ್ತಿದ್ದಾರೆ. ನಮ್ಮ ಮತ ನಮ್ಮ ಹಕ್ಕು ಅನ್ನೋ ಧ್ಯೇಯದೊಂದಿಗೆ ರಾಹುಲ್ ಗಾಂಧಿ ಯಾತ್ರೆ ನಡೆಸುತ್ತಿದ್ದಾರೆ. ಭಾರಿ ಬೆಂಬಲಿಗರು, ಕಾಂಗ್ರೆಸ್ ಕಾರ್ಯಕರ್ತರ ಜೊತೆ ಈ ಯಾತ್ರೆ ನಡೆಯುತ್ತಿದೆ. ಆದರೆ ಈ ರಾಹುಲ್ ಗಾಂಧಿ ಯಾತ್ರೆಯಲ್ಲಿ ಅವಘಡ ಸಂಭವಿಸಿದೆ. ರಾಹುಲ್ ಗಾಂಧಿ ಯಾತ್ರೆಯಲ್ಲಿ ಕಿಕ್ಕಿರಿದು ತುಂಬಿದ ಬೆಂಬಲಿಗರು, ಕಾರ್ಯಕರ್ತರನ್ನು ನಿಯಂತ್ರಿಸಲು, ಭದ್ರತೆ ನೀಡಲು ಪೊಲೀಸ್ ನಿಯೋಜನೆಗೊಂಡಿದೆ. ಆದರೆ ಕರ್ತವ್ಯದಲ್ಲಿದ್ದ ಪೊಲೀಸ್ ಪೇದೆ ಮೇಲೆ ರಾಹುಲ್ ಗಾಂಧಿ ಕಾರು ಹರಿದಿದೆ. ಘಟನೆಯಲ್ಲಿ ಪೊಲೀಸ್ ಪೇದೆ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಬಿಜೆಪಿ ಹೇಳಿದೆ. ಇಷ್ಟೇ ಅಲ್ಲ ಈ ಘಟನೆಯ ವಿಡಿಯೋ ಹಂಚಿಕೊಂಡು ರಾಹುಲ್ ಗಾಂಧಿ ವಿರುದ್ಧ ಆಕ್ರೋಶ ಹೊರಹಾಕಿದೆ.

Add Asianetnews Kannada as a Preferred SourcegooglePreferred

ಕಾರಿನಲ್ಲೇ ಕುಳಿತ ರಾಹುಲ್ ಗಾಂಧಿ

ಬಿಜೆಪಿ ವಕ್ತಾರ ಶೆಹಜಾಜ್ ಪೂನವಾಲ ಈ ವಿಡಿಯೋ ಹಂಚಿಕೊಂಡಿದ್ದಾರೆ. ರಾಹುಲ್ ಗಾಂಧಿ ಯಾತ್ರೆ ಮಾಡುತ್ತಿದ್ದ ಕಾರು ಪೊಲೀಸ್ ಪೇದೆಗೆ ಮೇಲೆ ಹತ್ತಿದೆ. ಇದರಿಂದ ಪೊಲೀಸ್ ಪೇದೆ ಗಂಭೀರವಾಗಿ ಗಾಯಗೊಂಡಿದ್ದಾರೆ. ಆದರೆ ರಾಹುಲ್ ಗಾಂಧಿ ಕನಿಷ್ಠ ವಾಹನದಿಂದ ಇಳಿದು ಪರಿಶೀಲನೆ ನಡೆಸಲಿಲ್ಲ ಎಂದು ಪೂನವಾಲ ಆಕ್ರೋಶ ಹೊರಹಾಕಿದ್ದಾರೆ.

ಪೊಲೀಸ್ ಪೇದೆ ಕಾಲಿನ ಮೇಲೆ ಹತ್ತಿದ ಕಾರು

ಕರ್ತವ್ಯದಲ್ಲಿದ್ದ ಪೊಲೀಸ್ ಪೇದೆಯ ಕಾಲಿನ ಮೇಲೆ ಕಾರು ಹತ್ತಿದೆ. ಕಿಕ್ಕಿರಿದು ತುಂಬಿದ್ದ ಜನರಿಂದ ಅಚಾತುರ್ಯ ನಡೆದಿದೆ. ತಕ್ಷಣವೇ ರಾಹುಲ್ ಗಾಂಧಿ ಕಾರಿನಿಂದಲೇ ಆರೋಗ್ಯ ವಿಚಾರಿಸಿದ್ದಾರೆ. ಪೊಲೀಸ್ ಪೇದೆ ಕಾಲಿಗೆ ಗಾಯವಾಗಿದೆ.ಪೇದೆಗೆ ಚಿಕಿತ್ಸೆ ರಾಹುಲ್ ಗಾಂಧಿ ಸೂಚಿಸಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ಹೇಳುತ್ತಿದೆ.

Scroll to load tweet…

ಬಿಹಾರದಲ್ಲಿ ರಾಹುಲ್ ಗಾಂಧಿ ಕಳೆದ ಕೆಲ ದಿನಗಳಿಂದ ವೋಟ್ ಅಧಿಕಾರ್ ಯಾತ್ರೆ ನಡೆಸುತ್ತಿದ್ದಾರೆ. ಚುನಾವಣಾ ಆಯೋಗದ ಮತಗಳ್ಳತನದ ಮೂಲಕ ಪ್ರಧಾನಿ ನರೇಂದ್ರ ಮೋದಿ ಅದಿಕಾರಕ್ಕೆ ಬಂದಿದ್ದಾರೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ. ರಾಹುಲ್ ಗಾಂಧಿ ಆರೋಪಕ್ಕೆ ಚುನಾವಣಾ ಆಯೋಗ ಸುದ್ದಿಗೋಷ್ಠಿ ಮೂಲಕ ಉತ್ತರಿಸಿದೆ. ಇಷ್ಟೇ ಅಲ್ಲ 7 ದಿನಗಳ ಒಳಗೆ ಅಫಿಡವಿತ್ ಸಲ್ಲಿಕೆ ಮಾಡಬೇಕು, ಇಲ್ಲದಿದ್ದರೆ ಕ್ಷಮೆ ಕೇಳಬೇಕು ಎಂದು ಚುನಾವಣಾ ಆಯೋಗ ಖಡಕ್ ವಾರ್ನಿಂಗ್ ನೀಡಿದೆ.

ಬೆಂಗಳೂರಿನ ಮಹಾದೇವಪುರ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಬಿಜೆಪಿ ಹಾಗೂ ಚುನಾವಣಾ ಆಯೋಗ ಮತಗಳ್ಳತನ ಮಾಡಿದೆ ಅನ್ನೋ ಆರೋಪಕ್ಕೆ ಬಿಜೆಪಿ ತಿರುಗೇಟು ನೀಡಿದೆ. ಸಾಕ್ಷಿ, ಆಧಾರ ರಹಿತ ಆರೋಪ ಮಾಡಿದ್ದಾರೆ. ರಾಹುಲ್ ಗಾಂಧಿ ಸಾಕ್ಷಿ ಇಲ್ಲದೆ ಇದೀಗ ಅಫಿದವಿತ್ ಸಲ್ಲಿಕೆ ಮಾಡುತ್ತಿಲ್ಲ ಎಂದಿದೆ.