ಕೇರಳದಲ್ಲಿ ಗಾಂಧೀಜಿ ಪ್ರತಿಮೆಗೆ ಬಿಜೆಪಿ ಬಾವುಟ ಹೊದಿಸಿದ್ರು!| ಈ ಕೃತ್ಯ ಬಿಜೆಪಿಯದ್ದೇ: ಸಿಪಿಐಎಂ, ಕಾಂಗ್ರೆಸ್‌ ಆರೋಪ| ಘಟನೆಗೂ ಪಕ್ಷಕ್ಕೂ ಯಾವುದೇ ಸಂಬಂಧವಿಲ್ಲ: ಬಿಜೆಪಿ

ತಿರುವನಂತಪುರ(ಜ.13): ಕೇರಳದ ಪಾಲಕ್ಕಾಡ್‌ ಸ್ಥಳೀಯ ಸಂಸ್ಥೆ ಕಟ್ಟಡದ ಆವರಣದಲ್ಲಿರುವ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಪ್ರತಿಮೆಗೆ ಬಿಜೆಪಿ ಚಿಹ್ನೆಯಿರುವ ಧ್ವಜ ಹೊದಿಸಲಾದ ಘಟನೆ ಸೋಮವಾರ ನಡೆದಿದ್ದು, ಇದು ಬಿಜೆಪಿ ವಿರುದ್ಧದ ಕಾಂಗ್ರೆಸ್‌ ಮತ್ತು ಎಡಪಕ್ಷಗಳ ಪ್ರತಿಭಟನೆಗೆ ಕಾರಣವಾಗಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಈ ಸಂಬಂಧ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ತಪ್ಪಿತಸ್ಥರರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ.

ಆದರೆ ಉದ್ದೇಶಪೂರಕವಾಗಿಯೇ ಬಿಜೆಪಿ ಈ ಕೃತ್ಯದಲ್ಲಿ ತೊಡಗಿದ್ದು, ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಕೇರಳ ಆಡಳಿತಾರೂಢ ಎಡಪಕ್ಷ ಹಾಗೂ ಪ್ರತಿಪಕ್ಷ ಕಾಂಗ್ರೆಸ್‌ ಪ್ರತ್ಯೇಕ ಪ್ರತಿಭಟನೆ ಕೈಗೊಂಡಿವೆ. ಆದರೆ ಈ ಘಟನೆಗೂ ತನಗೂ ಯಾವುದೇ ಸಂಬಂಧವಿಲ್ಲ ಎಂದು ಬಿಜೆಪಿ ಹೇಳುತ್ತಿದೆ.

ಈ ಹಿಂದೆ ಇದೇ ಕಟ್ಟಡದ ಮೇಲೆ ‘ಜೈ ಶ್ರೀ ರಾಮ್‌’ ಎಂಬ ಘೋಷವಾಕ್ಯವಿರುವ ಬ್ಯಾನರ್‌ ಹಾರಾಡಿತ್ತು. ಈ ಬಗ್ಗೆ ಬಿಜೆಪಿ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗಿತ್ತು.