ಸೈಫ್ ಅಲಿ ಖಾನ್ ವಿರುದ್ಧ ತಿರುಗಿ ಬಿದ್ದ ಬಿಜೆಪಿ ನಾಯಕಿ/  ಭಾರತದ ಇತಿಹಾಸದ ಬಗ್ಗೆ ಮಾತನಾಡಿದ್ದ ಖಾನ್/ ಭಾರತದ ಪರಿಕಲ್ಪನೆ ಇತ್ತು ಎಂದು ನನಗೆ ಅನ್ನಿಸುವುದಿಲ್ಲ ಎಂದಿದ್ದ ಬಾಲಿವುಡ್ ನಟ

ನವದೆಹಲಿ(ಜ. 21) ಬಾಲಿವುಡ್ ನಟ ಸೈಫ್ ಆಲಿಖಾನ್ ಭಾರತದ ಇತಿಹಾಸದ ಬಗ್ಗೆ ನೀಡಿರುವ ಹೇಳಿಕೆ ವಿರುದ್ಧ ಬಿಜೆಪಿ ವಕ್ತಾರೆ ಮೀನಾಕ್ಷಿ ಲೇಖಿ ತಿರುಗಿ ಬಿದ್ದಿದ್ದಾರೆ.

Add Asianetnews Kannada as a Preferred SourcegooglePreferred

ಸೈಫ್ ಅಲಿಖಾನ್ ಇತ್ತೀಚಿಗೆ ತನ್ನ ಮೂರು ವರ್ಷದ ಮಗ ತೈಮೂರು ಹೆಸರು ಉಲ್ಲೇಖಿಸಿ ಭಾರತದ ಇತಿಹಾಸದ ಕುರಿತು ನೀಡಿರುವ ಹೇಳಿಕೆ ಖಂಡಿಸಿರುವ ಲೇಖಿ, ತಮ್ಮ ಇತ್ತೀಚಿನ ಚಿತ್ರ ತನ್ಹಾಜಿಯ ರಾಜಕೀಯ ಸನ್ನಿವೇಶದ ಕುರಿತು ಸಂದರ್ಶನವೊಂದರಲ್ಲಿ ಉತ್ತರಿಸಿದ ಸೈಫ್, "ಇದು ಇತಿಹಾಸ ಎಂದು ನಾನು ಭಾವಿಸುವುದಿಲ್ಲ. ಬ್ರಿಟಿಷರು ಅದನ್ನು ನೀಡುವವರೆಗೂ ಭಾರತದ ಪರಿಕಲ್ಪನೆ ಇತ್ತು ಎಂದು ನನಗೆ ಅನ್ನಿಸುವುದಿಲ್ಲ ಎಂದು ಹೇಳಿದ್ದರು.

ಹೊನ್ನಾಳಿ ಕೇಸರಿಮಯ ಮಾಡ್ತೆನೆ, ರೇಣುಕಾ ಗುಡುಗು

ಟರ್ಕಿಗಳು ಕೂಡಾ ಸಹ ತೈಮೂರ್ ನ್ನು ರಾಕ್ಷಕರು ಎಂದುಕೊಳ್ಳುತ್ತಾರೆ. ಆದರೆ ಕೆಲವರು ತಮ್ಮ ಮಕ್ಕಳಿಗೆ ತೈಮೂರ್ ಎಂದು ನಾಮಕರಣ ಮಾಡುತ್ತಾರೆ ಎಂದು ಟೀಕಿಸಿದ್ದಾರೆ.

ಸೈಫ್ ಅಲಿ ಖಾನ್ ಮತ್ತು ಪತ್ನಿ ಕರೀನಾ ಕಪೂರ್ ದಂಪತಿಗೆ ಡಿಸೆಂಬರ್ 2016ರಲ್ಲಿ ಜನಿಸಿದ ತೈಮೂರ್ ಅಲಿಖಾನ್ ಪಟೌಡಿ ಹೆಸರಿನ ಕುರಿತಾಗಿ ಈ ಹಿಂದೆಯೂ ಟ್ರೋಲ್ ಗಳಾಗಿದ್ದವು. ಸೋಶಿಯಲ್ ಮೀಡಿಯಾ ಸಹ ತನ್ನದೇ ಆದ ರೀತಿ ಪ್ರತಿಕ್ರಿಯೆ ವ್ಯಕ್ತಪಡಿಸಿತ್ತು. ಹೇಳಿಕೆ ನೀಡಿದ ಸೈಫ್ ಗೆ ಇದೀಗ ತಿರುಗೇಟು ಸಿಕ್ಕಿದ್ದು ಮುಂದೆ ಯಾವ ತಿರುವು ಪಡೆದುಕೊಳ್ಳಲಿದೆ ಎಂಬುದನ್ನು ನೋಡಬೇಕಿದೆ.