* ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ಬಂದ ಸಂಸದನ ಮೇಲೆ ದಾಳಿ* ಕಾಂಗ್ರೆಸ್‌ ಮುಖಂಡ ಪ್ರಮೋದ್‌ ತಿವಾರಿ ತಮ್ಮ ಬೆಂಬಲಿಗರ ಜತೆಗೂಡಿ ಹಲ್ಲೆ

ಪ್ರತಾಪ್‌ಗಢ(ಸೆ.26): ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ಬಂದ ತಮ್ಮ ಮೇಲೆ ಕಾಂಗ್ರೆಸ್‌ ಮುಖಂಡ ಪ್ರಮೋದ್‌ ತಿವಾರಿ(Pramod Tiwari) ಅವರು ತಮ್ಮ ಬೆಂಬಲಿಗರ ಜತೆಗೂಡಿ ಹಲ್ಲೆ ನಡೆಸಿದ್ದಾರೆ ಎಂದು ಪ್ರತಾಪ್‌ಗಢದ ಬಿಜೆಪಿ ಸಂಸದ ಸಂಗಮ್‌ ಲಾಲ್‌ ಗುಪ್ತಾ(Sangal Lal Gupta) ಆರೋಪಿಸಿದ್ದಾರೆ.

Add Asianetnews Kannada as a Preferred SourcegooglePreferred

ಕಾಂಗ್ರೆಸ್‌ ಕಾರ್ಯಕರ್ತರ ದಾಳಿಯಿಂದ ಸಂಸದ ಸಂಗಮ್‌ ಲಾಲ್‌(Sangal Lal Gupta) ಅವರ ಕುರ್ತಾ ಪೂರ್ತಿ ಛಿದ್ರಗೊಂಡಿದ್ದು, ಸಣ್ಣ ಗಾಯಗಳಾಗಿವೆ.

ಈ ಪ್ರಕರಣ ಸಂಬಂಧ ಕಾಂಗ್ರೆಸ್‌ನ(Congress) ಹಿರಿಯ ಮುಖಂಡ ಪ್ರಮೋದ್‌ ತಿವಾರಿ ಹಾಗೂ ಅವರ ಪುತ್ರಿ ಆರಾಧನಾ ಮಿಶ್ರಾ ಸೇರಿದಂತೆ ಒಟ್ಟಾರೆ 27 ಮಂದಿಯ ವಿರುದ್ಧ ಪೊಲೀಸರು ದೂರು ದಾಖಲಿಸಿ, ತನಿಖೆಗೆ ಇಳಿದಿದ್ದಾರೆ.

ಅಲ್ಲದೆ ಈ ಕೃತ್ಯದಲ್ಲಿ ಭಾಗಿಯಾದ ಇತರ 50 ಅಪರಿಚಿತರ ವಿರುದ್ಧವೂ ಕೇಸ್‌ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸ್‌ ಅಧಿಕಾರಿ ಮಾಹಿತಿ ನೀಡಿದ್ದಾರೆ.

ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿರುವ ಉತ್ತರ ಪ್ರದೇಶ ಉಪ ಮುಖ್ಯಮಂತ್ರಿ ಕೇಶವ ಪ್ರಸಾದ್‌ ಮೌರ್ಯ ಅವರು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದಾರೆ. ಅಲ್ಲದೆ ಈ ಪ್ರಕರಣದಲ್ಲಿ ಒಬ್ಬೇ ಒಬ್ಬ ವ್ಯಕ್ತಿಯನ್ನು ಶಿಕ್ಷಿಸದೇ ಬಿಡಬಾರದು ಎಂದು ಹೇಳಿದ್ದಾರೆ.