ಲೋಕಸಭೆ ಚುನಾವಣೆ ಸಿದ್ಧತೆಗಾಗಿ ಶುಕ್ರವಾರ ಆರಂಭವಾದ 2 ದಿನಗಳ ಬಿಜೆಪಿ ಪದಾಧಿಕಾರಿಗಳ ಸಭೆಯಲ್ಲಿ ಪ್ರಧಾನಿ ಮೋದಿ ಮಾತನಾಡಿದರು. ಲೋಕಸಮರವನ್ನು ಗೆಲ್ಲುವ ನಿಟ್ಟಿನಲ್ಲಿ ಅನುಸರಿಸಬೇಕಾದ ಮಾರ್ಗಗಳು ಕುರಿತು ಸಭೆಯಲ್ಲಿ ಚರ್ಚೆ ಆರಂಭವಾಗಿದ್ದು, ಶನಿವಾರವೂ ಮುಂದುವರಿಯಲಿದೆ. 

ನವದೆಹಲಿ (ಡಿಸೆಂಬರ್ 23, 2023): 2024ರ ಲೋಕಸಭೆ ಚುನಾವಣೆಗೆ ಯುದ್ಧೋಪಾದಿಯಲ್ಲಿ ಬಿಜೆಪಿ ಪದಾಧಿಕಾರಿಗಳು ಸಜ್ಜಾಗಬೇಕು. ಕೇಂದ್ರ ಸರ್ಕಾರದ ಸಾಧನೆಗಳು ಜನರಿಗೆ ತಲುಪುವಂತೆ ಮಾಡಿ ಪ್ರಚಾರ ಮಾಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಲೋಕಸಭೆ ಚುನಾವಣೆ ಸಿದ್ಧತೆಗಾಗಿ ಶುಕ್ರವಾರ ಆರಂಭವಾದ 2 ದಿನಗಳ ಬಿಜೆಪಿ ಪದಾಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು. ಲೋಕಸಮರವನ್ನು ಗೆಲ್ಲುವ ನಿಟ್ಟಿನಲ್ಲಿ ಅನುಸರಿಸಬೇಕಾದ ಮಾರ್ಗಗಳು ಕುರಿತು ಸಭೆಯಲ್ಲಿ ಚರ್ಚೆ ಆರಂಭವಾಗಿದ್ದು, ಶನಿವಾರವೂ ಮುಂದುವರಿಯಲಿದೆ. 

ಇದನ್ನು ಓದಿ: ಭಾರತೀಯ ಸಮಾಜದಲ್ಲಿ ಧಾರ್ಮಿಕ ತಾರತಮ್ಯವಿಲ್ಲ: ಪ್ರಧಾನಿ ಮೋದಿ

ಮಸೂದೆ ಚರ್ಚೆಗೆ ವಿಪಕ್ಷ ಗೈರು: ಅಮಿತ್ ಶಾ ಕಿಡಿ
146 ಸಂಸದರ ಅಮಾನತು ಖಂಡಿಸಿ ಶುಕ್ರವಾರ ಪ್ರತಿಭಟನೆ ನಡೆಸಿದ ಇಂಡಿಯಾ ಕೂಟದ ವಿರುದ್ಧ ಕೇಂದ್ರ ಸಚಿವ ಅಮಿತ್‌ ಶಾ ವಾಗ್ದಾಳಿ ನಡೆಸಿದ್ದು, ‘ಈಗ ಪ್ರತಿಭಟನೆ ಮಾಡುತ್ತಿರುವ ವಿಪಕ್ಷ ಸಂಸದರು 3 ಮಹತ್ವದ ಅಪರಾಧ ಮಸೂದೆ ಚರ್ಚೆ ಸಂಸತ್ತಿನಲ್ಲಿ ನಡೆವಾಗ ಏಕೆ ಬಹಿಷ್ಕರಿಸಿ ಹೊರಗೆ ಹೋಗಿದ್ದರು? ಎಂದು ಪ್ರಶ್ನಿಸಿದ್ದಾರೆ. ಈಗಿನ ಪ್ರತಿಭಟನೆಗೆ ಜನ ಮರುಳಾಗಲ್ಲ ಎಂದಿದ್ದಾರೆ.

2024 ರ ಅಂತ್ಯಕ್ಕೆ ಮೂರೂ ಅಪರಾಧ ಕಾಯ್ದೆಗಳು ಜಾರಿ: ಅಮಿತ್ ಶಾ
ಚಂಡೀಗಢ: ಸಂಸತ್ತು ಒಪ್ಪಿಗೆ ನೀಡಿರುವ 3 ಅಪರಾಧ ಮಸೂದೆಗಳು ಮುಂದಿನ ವರ್ಷ ಡಿಸೆಂಬರ್‌ ಅಂತ್ಯದ ವೇಳೆಗೆ ಸಂಪೂರ್ಣವಾಗಿ ಜಾರಿಯಾಗಲಿದೆ. ಆ ವೇಳೆಗೆ ಇವುಗಳ ಜಾರಿಗೆ ಅಗತ್ಯವಿರುವ ಮೂಲಸೌಕರ್ಯಗಳನ್ನು ಸಿದ್ಧಪಡಿಸಲಾಗುತ್ತದೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಶುಕ್ರವಾರ ಹೇಳಿದ್ದಾರೆ. ಮುಂದಿನ ವರ್ಷ ಡಿಸೆಂಬರ್ ವೇಳೆಗೆ ಎಲ್ಲಾ ರಾಜ್ಯಗಳಲ್ಲೂ ಈ ಕಾನೂನುಗಳನ್ನು ಜಾರಿ ಮಾಡಲು ಬೇಕಾದ ಮೂಲಸೌಕರ್ಯಗಳು, ಸಾಫ್ಟ್‌ವೇರ್‌ಗಳು ಮತ್ತು ಕಂಪ್ಯೂಟರೈಸ್ಡ್‌ ನ್ಯಾಯಾಲಯಗಳನ್ನು ಸ್ಥಾಪನೆ ಮಾಡಲಾಗುತ್ತದೆ ಎಂದು ಅವರು ಹೇಳಿದರು. ಬ್ರಿಟಿಷ್‌ ಕಾಲದ ಕಾನೂನುಗಳನ್ನು ಕೈಬಿಟ್ಟು ಹೊಸದಾಗಿ ರೂಪಿಸಲಾದ ಈ ಮಸೂದೆಗಳಿಗೆ ಚಳಿಗಾಲದ ಅಧಿವೇಶನದಲ್ಲಿ ಸಂಸತ್ತು ಒಪ್ಪಿಗೆ ಸೂಚಿಸಿತ್ತು.

ಇದನ್ನೂ ಓದಿ: ಸಸ್ಪೆಂಡ್‌ಗೆ ವಿಪಕ್ಷ ಸಂಸದರೇ ಕೇಳಿದ್ದರು; ಅಮಾನತು ಮಾಡುವ ಇಚ್ಛೆ ನಮಗಿರಲಿಲ್ಲ: ಪ್ರಲ್ಹಾದ್‌ ಜೋಶಿ