ರಾಜ್ಯಸಭೆಯ ಕಲಾಪವನ್ನು ಮೊಬೈಲ್‌ನಲ್ಲಿ ಸೆರೆಹಿಡಿದು ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಬಾರದು| ಕಲಾಪ ದೃಶ್ಯ ಚಿತ್ರೀಕರಣ ಮಾಡಿದ ರಾಜ್ಯಸಭಾ ಸಂಸದರಿಗೆ ನಾಯ್ಡು ಎಚ್ಚರಿಕೆ!

ನವದೆಹಲಿ(ಫ.04): ರಾಜ್ಯಸಭೆಯ ಕಲಾಪವನ್ನು ಮೊಬೈಲ್‌ನಲ್ಲಿ ಸೆರೆಹಿಡಿದು ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಬಾರದು. ಅದು ಸಂಸದೀಯ ನಿಯಮಾವಳಿಗಳ ಉಲ್ಲಂಘನೆಯಾಗಲಿದೆ ಎಂದು ರಾಜ್ಯಸಭಾ ಸಭಾಧ್ಯಕ್ಷ ವೆಂಕಯ್ಯ ನಾಯ್ಡು ಬುಧವಾರ ಸಂಸದರಿಗೆ ಎಚ್ಚರಿಸಿದರು.

Add Asianetnews Kannada as a Preferred SourcegooglePreferred

ಮಂಗಳವಾರ ಕೃಷಿ ಕಾಯ್ದೆ ಕುರಿತ ಚರ್ಚೆಯನ್ನು ವಿಪಕ್ಷಗಳ ಕೆಲವು ಸಂಸದರು ಮೊಬೈಲ್‌ನಲ್ಲಿ ಸೆರೆಹಿಡಿದು ಜಾಲತಾಣಗಳಲ್ಲಿ ಹಂಚಿಕೊಂಡಿದ್ದರು. ಕೆಲವು ವಾಹಿನಿಗಳೂ ಅದನ್ನು ಪ್ರಸಾರ ಮಾಡಿದ್ದವು. ಈ ಬಗ್ಗೆ ತೀಕ್ಷ$್ಣವಾಗಿ ಪ್ರತಿಕ್ರಿಯಿಸಿರುವ ನಾಯ್ಡು ಅವರು, ‘ರಾಜ್ಯಸಭೆಯಲ್ಲಿ ಮೊಬೈಲ್‌ ಫೋನ್‌ಗಳ ಬಳಕೆಯನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ. ಆದರೆ ಕೆಲವು ಸಂಸದರು ಕಲಾಪವನ್ನು ಮೊಬೈಲ್‌ನಲ್ಲಿ ರೆಕಾರ್ಡ್‌ ಮಾಡುತ್ತಿರುವುದು ಕಂಡುಬಂದಿದೆ.

ಸಂಸದರಿಂದ ಅಂಥ ವರ್ತನೆಯನ್ನು ನಿರೀಕ್ಷಿಸಲ್ಲ. ಅದು ಸಂಸದೀಯ ನಿಯಮಾವಳಿಗಳ ಉಲ್ಲಂಘನೆಯಾಗಲಿದೆ’ ಎಂದು ಎಚ್ಚರಿಸಿದರು.