ಶ್ರೀರಾಮ ರ್ಯಾಲಿ ಮೇಲೆ ದಾಳಿ ನಡೆದ ರಸ್ತೆಯಲ್ಲಿ ಬುಲ್ಡೋಜರ್ ಘರ್ಜನೆ, ಅಕ್ರಮ ಕಟ್ಟಡ ನೆಲಸಮ!
ಶ್ರೀರಾಮ ಮಂದಿರ ಪ್ರಾಣಪ್ರತಿಷ್ಠೆ ಸಂಭ್ರಮದಲ್ಲಿ ದೇಶದ ಹಲವೆಡೆ ಶೋಭಯಾತ್ರೆ ನಡೆದಿತ್ತು. ಈ ಪೈಕಿ ಮುಂಬೈ ಮೀರಾ ರಸ್ತೆಯಲ್ಲಿ ಶೋಭಯಾತ್ರೆ ಮೇಲೆ ಭೀಕರ ದಾಳಿಯಾಗಿತ್ತು. ಹಲವರು ಗಾಯಗೊಂಡಿದ್ದು. ಅಲ್ಲಾಹು ಅಕ್ಬರ್ ಘೋಷಣೆ ಕೂಗಿ ಈ ದಾಳಿ ನಡೆದಿತ್ತು. ದಾಳಿ ನಡೆದ ಮರುದಿನವೇ ಮೀರಾ ರಸ್ತೆಯಲ್ಲಿ ಮಹಾರಾಷ್ಟ್ರ ಸರ್ಕಾರದ ಬುಲ್ಡೋಜರ್ ಘರ್ಜಿಸಿದೆ. ಅಕ್ರಮ ಕಟ್ಟಡ, ಮನೆಗಳು ನೆಲಸಮಗೊಂಡಿದೆ.
![Bulldozer Action against illegal budlings shops in mira road Mumbai where Shree Ram Rally attacked ckm Bulldozer Action against illegal budlings shops in mira road Mumbai where Shree Ram Rally attacked ckm](https://static-ai.asianetnews.com/images/01hmqqpgc3yaknr0zxpasvwbf6/mumbai_363x203xt.jpg)
ಮುಂಬೈ(ಜ.23) ಭವ್ಯ ಶ್ರೀರಾಮ ಮಂದಿರ ಲೋಕಾರ್ಪಣೆಗೊಂಡಿದೆ. ಪ್ರಧಾನಿ ನರೇಂದ್ರ ಮೋದಿ ಪ್ರಾಣಪ್ರತಿಷ್ಠೆ ನೆರವೇರಿಸುವ ಮೂಲಕ 500 ವರ್ಷಗಳ ಬಳಿಕ ಶ್ರೀರಾಮ ತನ್ನ ಭವ್ಯ ಮಂದಿರದಲ್ಲಿ ವಿರಾಜಮಾನನಾಗಿದ್ದಾನೆ. ರಾಮ ಮಂದಿರ ಪ್ರಾಣಪ್ರತಿಷ್ಠೆಯನ್ನು ದೇಶದೆಲ್ಲೆಡೆ ದೀಪಾವಳಿ ರೀತಿ ಆಚರಿಸಲಾಗಿದೆ. ದೇವಸ್ಥಾನದಲ್ಲಿ ವಿಶೇಷ ಪೂಜೆ, ಅನ್ನಸಂತರ್ಪಣೆ, ರಾಮಕಥಾ ಸೇರಿದಂತೆ ಹಲವು ಕಾರ್ಯಕ್ರಮಗಳು ನಡೆದಿದೆ. ಇದೇ ವೇಳೆ ಶ್ರೀರಾಮ ಶೋಭಯಾತ್ರೆ ಕೂಡ ಹಲವೆಡೆ ನಡೆದಿದೆ. ಆದರೆ ಮುಂಬೈನಲ್ಲಿ ನಡೆದ ಶೋಭಯಾತ್ರೆ ಮೇಲೆ ಅನ್ಯಕೋಮಿನ ಗುಂಪು ಭೀಕರ ದಾಳಿ ನಡೆಸಿತ್ತು. ಈ ವಿಡಿಯೋಗಳು ವೈರಲ್ ಆಗಿತ್ತು. ಈ ಘಟನೆ ನಡೆದ ಒಂದೇ ದಿನಕ್ಕೆ, ಮಹಾರಾಷ್ಟ್ರ ಸರ್ಕಾರ ಕಠಿಣ ಕ್ರಮ ಕೈಗೊಂಡಿದೆ. ಪ್ರಕರಣ ಸಂಬಂಧ ಹಲವರನ್ನು ಬಂಧಿಸಲಾಗಿದ್ದು, ಘಟನೆ ನಡೆದ ಮೀರಾ ರಸ್ತೆಯಲ್ಲಿನ ಅಕ್ರಮ ಕಟ್ಟಡ, ಅಂಗಡಿ ಮುಂಗಟ್ಟು ಹಾಗೂ ಮನೆಗಳನ್ನು ಬುಲ್ಡೋಜರ್ ಮೂಲಕ ನೆಲೆಸಮಗೊಳಿಸಲಾಗಿದೆ.
ಘಟನೆ ಬೆನ್ನಲ್ಲೇ ಮೀರಾ ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಭಾರಿ ಪೊಲೀಸ್ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿತ್ತು. ಇಂದು ಮತ್ತಷ್ಟು ಪೊಲೀಸ್ ಪಡೆ ನಿಯೋಜಿಸಿದ ಸರ್ಕಾರ ನೇರವಾಗಿ ಮೀರಾ ರಸ್ತೆಗೆ ಬುಲ್ಡೋಜರ್ ಹತ್ತಿಸಿದೆ. ಮೀರಾ ರಸ್ತೆಯ ಇಕ್ಕೆಲಗಳಲ್ಲಿನ ಅಕ್ರಮ ಕಟ್ಟಡ, ಅಂಗಡಿ ಮುಂಗಡ್ಡುಗಳನ್ನು ನೆಲಸಮ ಮಾಡಲಾಗಿದೆ.
ಶ್ರೀರಾಮ ಶೋಭಯಾತ್ರೆ ಮೇಲೆ ಅನ್ಯಕೋಮಿನಿಂದ ಭೀಕರ ದಾಳಿ;ಕಾರು ಜಖಂ, ಹಲವರಿಗೆ ಗಾಯ!
ಪ್ರಾಣಪ್ರತಿಷ್ಠೆ ದಿನ ಹಿಂದೂಗಳ ಶ್ರೀರಾಮನ ಶೋಭಯಾತ್ರೆ ಮೇಲೆ ಭೀಕರ ದಾಳಿಯಾಗಿತ್ತು. ಹಲವರು ಗಾಯಗೊಂಡಿದ್ದರು. ಕಾರುಗಳು ಜಖಂಗೊಳಿಸಲಾಗಿತ್ತು. 200ಕ್ಕೂ ಹೆಚ್ಚು ಉದ್ರಿಕ್ತರ ಗುಂಪು ಈ ದಾಳಿ ನಡೆಸಿತ್ತು. ಘಟನೆ ಬೆನ್ನಲ್ಲೇ ಪೊಲೀಸರು 13ಕ್ಕೆ ಹೆಚ್ಚು ಮಂದಿಯನ್ನು ಬಂಧಿಸಿದ್ದರು. ಬಂಧಿತರು ಮೀರಾ ರಸ್ತೆಯಲ್ಲಿ ಅಂಗಡಿ ಮುಂಗಟ್ಟುಗಳಲ್ಲಿ ಕೆಲಸ ಮಾಡುತ್ತಿದ್ದವರು ಹಾಗೂ ಮಾಲೀಕರೂ ಆಗಿದ್ದಾರೆ. ಪೂರ್ವನಿಯೋಜಿತ ದಾಳಿ ಕುರಿತ ಹಲವು ಮಾಹಿತಿ ಕಲೆ ಹಾಕಿದ ಪೊಲೀಸರು ಪರಾರಿಯಾಗಿರುವ ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.
Buldozer reached in #MiraRoad (Mumbai) where Hindus celebrating #RamMandirPranPrathistha were attacked. The illegal construction are being demolished.
— Mr Sinha (@MrSinha_) January 23, 2024
Very well done @Dev_Fadnavis ji 👏 pic.twitter.com/cigKb6GtH9
ಘಟನೆ ನಡೆದ ರಾತ್ರಿ ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಈ ಕುರಿತು ಟ್ವೀಟ್ ಮೂಲಕ ಎಚ್ಚರಿಕೆ ನೀಡಿದ್ದರು. ಕಾನೂನು ಕೈಗೆತ್ತಿಕೊಂಡು ಹಿಂಸೆ ನಡೆಸಿದರೆ ತಕ್ಕ ಪಾಠ ಕಲಿಸಲಾಗುತ್ತದೆ. ಕಾನೂನು ಸುವ್ಯವಸ್ಥೆ ಹಾಳುಗೆಡವು ಯಾರನ್ನೂ ಬಿಡುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದರು. ದಾಳಿ ಕುರಿತ ವಿಡಿಯೋಗಳು ವೈರಲ್ ಆಗಿತ್ತು. ದೇಶಾದ್ಯಂತ ಈ ದಾಳಿಗೆ ಆಕ್ರೋಶ ವ್ಯಕ್ತವಾಗಿತ್ತು.
ಭಗವಾನ್ ಶ್ರೀರಾಮನ ಶೋಭಯಾತ್ರೆ ಮೇಲೆ ಕಲ್ಲು ತೂರಾಟ, ಹಲವರಿಗೆ ಗಾಯ!