ಭಿಕ್ಷುಕ ಮುಕ್ತ ನಗರ ನಿರ್ಮಾಣಕ್ಕಾಗಿ ಸಿಲಿಕಾನ್‌ ಸಿಟಿ ಬೆಂಗಳೂರು ಸೇರಿದಂತೆ ದೇಶದ 10 ನಗರಗಳಲ್ಲಿ ರಾಷ್ಟ್ರ ಮಟ್ಟದ ಅಭಿಯಾನಕ್ಕೆ ಚಿಂತನೆ ನಡೆಸಲಾಗಿದೆ. 

ನವದೆಹಲಿ [ಜ.19]: ದೇಶದ ನೈರ್ಮಲ್ಯಕ್ಕಾಗಿ ಸ್ವಚ್ಛ ಭಾರತ ಆಂದೋಲನ ಕೈಗೊಂಡು ಅದರಲ್ಲಿ ಯಶಸ್ವಿಯಾಗಿರುವ ಕೇಂದ್ರ ಸರ್ಕಾರ ಇದೀಗ ಭಿಕ್ಷುಕ ಮುಕ್ತ ನಗರ ನಿರ್ಮಾಣಕ್ಕಾಗಿ ಸಿಲಿಕಾನ್‌ ಸಿಟಿ ಬೆಂಗಳೂರು ಸೇರಿದಂತೆ ದೇಶದ 10 ನಗರಗಳಲ್ಲಿ ರಾಷ್ಟ್ರ ಮಟ್ಟದ ಅಭಿಯಾನಕ್ಕೆ ಚಿಂತನೆ ನಡೆಸಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಇದೇ ವರ್ಷದ ಏಪ್ರಿಲ್‌ನಿಂದ ಈ ಮಹತ್ವಾಕಾಂಕ್ಷಿ ಅಭಿಯಾನಕ್ಕೆ ಚಾಲನೆ ಸಿಗುವ ಸಾಧ್ಯತೆ ಇದೆ ಎನ್ನಲಾಗಿದೆ. ಮೊದಲ ಹಂತದಲ್ಲಿ ಈ ಯೋಜನೆಯನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ 60:40 ಅನುದಾನದಡಿ ಜಾರಿಗೊಳಿಸುವುದು ಕೇಂದ್ರ ಸರ್ಕಾರದ ಆಲೋಚನೆಯಾಗಿದೆ.

ಭಿಕ್ಷುಕ ಸಮಸ್ಯೆ ನಿರ್ಮೂಲನೆಗಾಗಿ ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆಯು ಎಲ್ಲಾ ರಾಜ್ಯಗಳ ಪ್ರತಿನಿಧಿಗಳು ಹಾಗೂ ಎನ್‌ಜಿಒಗಳ ಜೊತೆ ಜ.14ರಂದು ಸಭೆ ನಡೆಸಿತ್ತು. ಈ ಸಭೆಯಲ್ಲಿ ಭಿಕ್ಷಾಟನೆ ಹೋಗಲಾಡಿಸಲು ಅಗತ್ಯವಿರುವ ಕ್ರಿಯಾ ಯೋಜನೆಗಳು ಹಾಗೂ ಬಜೆಟ್‌ ಅನ್ನು ಮಾಚ್‌ರ್‍ ಅಂತ್ಯದೊಳಗೆ ಸಿದ್ಧಪಡಿಸಬೇಕು ಎಂದು ಚರ್ಚಿಸಲಾಗಿದೆ. ಈ ಪ್ರಕಾರ ದೇಶದ ಮೆಟ್ರೋ ಅಥವಾ ಬೃಹತ್‌ ನಗರಗಳಾದ ಬೆಂಗಳೂರು, ದೆಹಲಿ, ಮುಂಬೈ, ಕೋಲ್ಕತಾ, ಚೆನ್ನೈ, ಹೈದರಾಬಾದ್‌, ನಾಗ್ಪುರ, ಪಟನಾ, ಇಂದೋರ್‌ ಹಾಗೂ ಲಖನೌಗಳಲ್ಲಿ ಅಭಿಯಾನ ಆರಂಭಿಸಲು ಚಿಂತಿಸಲಾಗಿದೆ.

ಮಾಲಿಕರಿಂದಲೇ ಅಕ್ರಮ ವಲಸಿಗರಿಗೆ ಗೇಟ್‌ಪಾಸ್‌!, ಜೋಪಡಿಗಳು ತೆರವು, ಊರು ಖಾಲಿ!...

ಈ ಅಭಿಯಾನದ ಸ್ಥಳಗಳಲ್ಲಿ ವೇಳೆ ಭಿಕ್ಷುಕರ ಗುರುತಿಸುವುದು ಅಲ್ಲದೆ, ಅವರಿಗೆ ಪುನರ್ವಸತಿ, ವೈದ್ಯಕೀಯ ವ್ಯವಸ್ಥೆ, ಸಮಾಲೋಚನೆ, ಶಿಕ್ಷಣ, ಕೌಶಲ್ಯಾಭಿವೃದ್ಧಿ ಹಾಗೂ ಇನ್ನಿತರ ಸುಸ್ಥಿರ ಅನುಕೂಲತೆಗಳನ್ನು ಮಾಡಿಕೊಡುವ ಬಗ್ಗೆ ಕಾರ್ಯಸೂಚಿ ಸಿದ್ಧಪಡಿಸಬೇಕು ಎಂದು ನಿರ್ಧರಿಸಲಾಗಿದೆ. ನಿರ್ಗತಿಕರ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಈ ಯೋಜನೆ ನೆರವಾಗಲಿದೆ ಎಂದು ಹೇಳಲಾಗಿದೆ.