ಜೀವನದುದ್ದಕ್ಕೂ ಬಡರೋಗಿಗಳ ಪರವಾಗಿ ಸೇವೆ ಸಲ್ಲಿಸಿದ್ದ ವೈದ್ಯ| ಕೊರೋನಾಕ್ಕೆ ಬಲಿಯಾದ ವೈದ್ಯನ ಅಂತ್ಯಸಂಸ್ಕಾರ ವೇಳೆಯೂ ಕಲ್ಲು ತೂರಾಟ| 

ಚೆನ್ನೈ(ಏ.21): ಜೀವನದುದ್ದಕ್ಕೂ ಬಡರೋಗಿಗಳ ಪರವಾಗಿ ಸೇವೆ ಸಲ್ಲಿಸಿದ್ದ ವೈದ್ಯರೊಬ್ಬರು, ಕೊರೋನಾ ಸೋಂಕಿಗೆ ಬಲಿಯಾಗಿ ಕಲ್ಲು ತೂರಾಟದ ನಡುವೆಯೇ ಅಂತ್ಯಸಂಸ್ಕಾರಕ್ಕೆ ಒಳಗಾಗಬೇಕಾಗಿ ಬಂದ ಹೃದಯ ವಿದ್ರಾವಕ ಘಟನೆ ತಮಿಳುನಾಡಿನಲ್ಲಿ ನಡೆದಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಖಾಸಗಿ ಆಸ್ಪತ್ರೆಯ ವೈದ್ಯ ಸೈಮನ್‌ (55), ಸೋಮವಾರ ಸೋಂಕಿಗೆ ಬಲಿಯಾಗಿದ್ದರು. ಈ ವೇಳೆ ಕುಟುಂಬ ಸದಸ್ಯರಾರೂ ಜೊತೆಯಲ್ಲಿ ಇರದ ಕಾರಣ, ಅವರ ಇಬ್ಬರು ಸಹದ್ಯೋಗಿ ವೈದ್ಯರು ಮತ್ತು ಆಸ್ಪತ್ರೆಯ ಸಿಬ್ಬಂದಿಗಳೇ ಶವವನ್ನು ಕೊಯಮತ್ತೂರಿನ ಅಣ್ಣಾನಗರ್‌ ವೆಲ್ಲಯಂಗಾಡ್‌ನಲ್ಲಿ ಅಂತ್ಯಸಂಸ್ಕಾರಕ್ಕಾಗಿ ಕೊಂಡೊಯ್ಯಲಾಗಿತ್ತು.

ಗರ್ಭಿಣಿ ಮಗಳನ್ನು ನೋಡಲು ಈಜಿ ಬಂದ ತಂದೆ ನೀರುಪಾಲು..!

ಈ ವೇಳೆ ಸುತ್ತಮುತ್ತಲ ಪ್ರದೇಶ 300ಕ್ಕೂ ಹೆಚ್ಚು ಮಂದಿ ಕೊರೋನಾ ಪೀಡಿತರ ಅಂತ್ಯಸಂಸ್ಕಾರ ಮಾಡಬಾರದು ಎಂದು ಘೋಷಣೆ ಕೂಗಿ ಆ್ಯಂಬುಲೆನ್ಸ್‌ ಮತ್ತು ವೈದ್ಯರ ಮೇಲೆ ಕಲ್ಲು ಎಸೆದು, ಅಂತ್ಯಸಂಸ್ಕಾರಕ್ಕೆ ಅಡ್ಡಿಪಡಿಸಿದ್ದಾರೆ. ಕೊನೆಗೆ ಪೊಲೀಸ್‌ ಬಂದೋಬಸ್‌್ತನಲ್ಲಿ ಅಂತ್ಯಕ್ರಿಯೆ ನಡೆಸಲಾಗಿದೆ.