ಭಾರತ ಹಾಗೂ ಚೀನಾ ಗಡಿ ಸಂಘರ್ಷಕ್ಕೆ ಕೊಂಚ ತಣ್ಣಗಾಗಿದ್ದರೂ, ಗಡಿಯಲ್ಲಿ ಬೂದಿ ಮುಚ್ಚಿದ ಕೆಂಡದ ವಾತಾವರಣವಿದೆ. ಭಾರತೀಯ ಸೇನೆಯಿಂದ ಹೊಡೆತ ತಿಂದಿರುವ ಚೀನಾ ಇದೀಗ ಗಡಿಯಲ್ಲಿ ಭಾರಿ ಪ್ರಮಾಣದ ಶಸ್ತ್ರಾಸ್ತ್ರ ಶೇಖರಣೆ ಮಾಡುತ್ತಿದೆ. ಈ ಮೂಲಕ ಶಕ್ತಿ ಪ್ರದರ್ಶನಕ್ಕೆ ಮುಂದಾಗುತ್ತಿದೆ. ಇದೀಗ ಚೀನಾ ತನ್ನ ಕಾರ್ಯಚಟುವಟಿಕೆಯನ್ನು ನಿಲ್ಲಿಸಬೇಕು ಎಂದು ಭಾರತೀಯ ಸೇನೆ ಖಡಕ್ ವಾರ್ನಿಂಗ್ ನೀಡಿದೆ.

ಲಡಾಖ್(ಜು.16); ಚೀನಾ ಖ್ಯಾತೆ, ಲಡಾಖ್ ಗಡಿ ಸಂಘರ್ಷದಿಂದ ಉದ್ಭವವಾಗಿದ್ದ ಯುದ್ಧದ ವಾತಾವರಣವನ್ನು ಶಮನಗೊಳಿಸಲು ಭಾರತ ಇನ್ನಿಲ್ಲದ ಪ್ರಯತ್ನ ಮಾಡುತ್ತಿದೆ. ಜುಲೈ 14 ರಂದು ನಾಲ್ಕನೇ ಸುತ್ತಿನ ಸೇನಾ ಮಾತುಕತೆ ನಡೆದಿದೆ. ಭಾರತೀಯ ಸೇನೆ ಹಾಗೂ ಚೀನಾ ಸೇನೆ ಮಹತ್ವದ ಮಾತುಕತೆ ನಡೆಸಿದೆ. ಭಾರತದ ಚುಸುಲ್ ವಲಯದಲ್ಲಿ ನಡೆದ ಮಾತುಕತೆಯಲ್ಲಿ ಭಾರತ ಸ್ಪಷ್ಟ ಸಂದೇಶ ರವಾನಿಸಿದೆ.

Add Asianetnews Kannada as a Preferred SourcegooglePreferred

ಗಲ್ವಾನ್ ಸಂಘರ್ಷದಲ್ಲಿ ಹುತಾತ್ಮರಾದ ಚೀನಿ ಸೈನಿಕರಿಗೆ ಅವಮಾನ; ತಪ್ಪು ಮುಚ್ಚಿಡಲು ಚೀನಾ ಯತ್ನ!.

ಲಡಾಖ್ ಗಡಿಯಲ್ಲಿ ಚೀನಾ ಹೆಚ್ಚುವರಿ ಸೇನೆ, ಶಸ್ತ್ರಾಸ್ತ್ರ ಜಮಾವಣೆ, ಯುದ್ದ ವಿಮಾನ, ಟ್ಯಾಂಕರ್‌ಗಳನ್ನು ನಿಲ್ಲಿಸಿ ಶಕ್ತಿ ಪ್ರದರ್ಶನ ಮಾಡುತ್ತಿದೆ. ಗಡಿಯಲ್ಲಿ ಚೀನಾ ಸೇನೆ ತನ್ನ ಎಲ್ಲಾ ಕಾರ್ಯಚಟುವಟಿಕೆಯನ್ನು ಸಂಪೂರ್ಣವಾಗಿ ನಿಲ್ಲಿಸಬೇಕು ಎಂದು ಭಾರತೀಯ ಸೇನೆ ಮಾತುಕತೆ ವೇಳೆ ಚೀನಾ ಸೇನಾಧಿಕಾರಿಗೆ ಸೂಚಿಸಿದೆ.

ಗಡಿಯ 3 ಸ್ಥಳದಿಂದ ಚೀನಾ ವಾಪಸ್‌: ಇನ್ನೊಂದೇ ಬಾಕಿ!

ಈ ಮಾತುಕತೆಯಲ್ಲಿ ಭಾರತ ಹಾಗೂ ಚೀನಾ ಎರಡು ದೇಶಗಳು ಗಡಿಯಲ್ಲಿನ ಕಾರ್ಯಚಟುವಟಿಕೆ ನಿಲ್ಲಿಸಲು ಒಪ್ಪಿವೆ. ಆದರೆ ಚೀನಾ ಹಿಂಬಾಗಿಲ ಮೂಲಕ ಕಸರಸತ್ತು ನಡೆಸುತ್ತದೆ. ಇದೇ ಕಾರಣ ಈ ಘರ್ಷಣೆ ನಡೆದಿದೆ ಎಂದು ಭಾರತ ಸ್ಪಷ್ಟವಾಗಿ ಹೇಳಿದೆ. ಹೀಗಾಗಿ ಹಿರಿಯ ಕಮಾಂಡರ್ ಗಡಿಯ ಪರಿಸ್ಥಿತಿಯನ್ನು ಅವಲೋಕಿಸಲಿದ್ದಾರೆ. ಇಷ್ಟೇ ಅಲ್ಲ, ಮಿಲಿಟರಿ ಹಾಗೂ ರಾಜತಾಂತ್ರಿಕ ಮಾತುಕತೆ ಮುಂದುವರಿಸಲು ಭಾರತ ಒತ್ತಾಯಿಸಿದೆ.

ಪ್ಯಾಂಗಾಂಗ್ ಸರೋವರದ ಗಡಿಯಿಂದ ಚೀನಾ ಸೇನೆ ಹಿಂದೆ ಸರಿಯುವುದಾಗಿ ಜುಲೈ 4 ರಂದು ನಡೆದ ಮಿಲಿಟರಿ ಮಾತುಕತೆಯಲ್ಲಿ ಹೇಳಿತ್ತು. ಆದರೆ ಚೀನಾ ಸೇನೆ ಹಿಂದೆ ಸರಿದಿಲ್ಲ. ಈ ಕುರಿತು ಇತ್ತೀಚೆಗಿನ ಮಾತುಕತೆಯಲ್ಲಿ ಭಾರತ ಆಕ್ಷೇಪ ವ್ಯಕ್ತಪಡಿಸಿದೆ. 4 ಗಡಿ ವಲಯದಲ್ಲಿ ಚೀನಾ ಸೇನೆ ಅತಿಕ್ರಮಣ, ಯುದ್ಧದ ಭೀತಿ ಸೃಷ್ಟಿಸುತ್ತಿದೆ. ಮಾತುಕತೆಯಲ್ಲಿ ಹೇಳಿದ ಹಾಗೇ ಚೀನಾ ಮಾಡುತ್ತಿಲ್ಲ. ಹೀಗಾಗಿ ಪರಿಣಾಮ ಎದುರಿಸಬೇಕಾದಿತು ಎಂದು ಭಾರತೀಯ ಸೇನೆ ಹೇಳಿದೆ.