Asianet Suvarna News Asianet Suvarna News

ಸಿಎಂ ಯಡಿಯೂರಪ್ಪಗೆ ಕೊರೋನಾ, ವಿಶ್ರಾಂತಿಗೆ ಜಾರಿದ ಕಿಚ್ಚ ಸುದೀಪ್‌ : ಏ.16ರ ಟಾಪ್ 10 ಸುದ್ದಿ!

ಸಿಎಂ ಬಿಎಸ್ ಯಡಿಯೂರಪ್ಪ ಅವರಿಗೆ ಕೊರೋನಾ ಸೋಂಕು ತಗುಲಿದೆ. ಇತ್ತ ಆನಾರೋಗ್ಯ ಕಾರಣ ಕಿಚ್ಚ ಸುದೀಪ್ ವೀಕೆಂಡ್ ವಿಥ್ ಕಿಚ್ಚ ಕಾರ್ಯಕ್ರಮಕ್ಕೈ ಗೈರಾಗುತ್ತಿದ್ದಾರೆ. ಕುಂಭಮೇಳಕ್ಕೆ ಹೋದೋರು ಕರ್ನಾಟಕ ಎಂಟ್ರಿ ಆಗೋಕೆ ಕೊರೋನಾ ಟೆಸ್ಟ್ ಕಡ್ಡಾಯ ಮಾಡಲಾಗಿದೆ. ವಿರಾಟ್ ಕೊಹ್ಲಿಗೆ ರೆಫ್ರಿ ಛೀಮಾರಿ, ನಿರುದ್ಯೋಗ ಸಮಸ್ಯೆ ಶೇ.8ರಷ್ಟು ಹೆಚ್ಚಳ ಸೇರಿದಂತೆ ಏಪ್ರಿಲ್ 16ರ ಟಾಪ್ 10 ಸುದ್ದಿ ವಿವರ.

CM BS Yediyurappa to kiccha sudeep top 10 News of April 16 ckm
Author
Bengaluru, First Published Apr 16, 2021, 5:25 PM IST

ಸಿಎಂ BSYಗೆ 2ನೇ ಸಾರಿ ಕೊರೋನಾ, ಮಣಿಪಾಲ್ ಆಸ್ಪತ್ರೆಗೆ ದಾಖಲು...

CM BS Yediyurappa to kiccha sudeep top 10 News of April 16 ckm

ಸಿಎಂ ಬಿಎಸ್ ಯಡಿಯೂರಪ್ಪ ಅವರಿಗೆ ಕೊರೋನಾ ಸೋಂಕು ತಗುಲಿದೆ.  ಉಪಚುನಾವಣೆ ಪ್ರಚಾರದಲ್ಲಿ ತೊಡಗಿಕೊಂಡಿದ್ದ ಸಿಎಂ ಬೆಂಗಳೂರಿಗೆ ವಾಪಸ್ ಆಗಿದ್ದರು. 

ಕುಂಭಮೇಳದಲ್ಲಿ ಮುಮ್ತಾಜ್ ಎಂಬ ಮುಸ್ಲಿಂ ಮಹಾಯೋಗಿಯ ಭಗವದ್ಗೀತೆ ಪ್ರವಚನ...

CM BS Yediyurappa to kiccha sudeep top 10 News of April 16 ckm

 ಅಪ್ಪಟ ವೈಷ್ಣವ ಅನುಯಾಯಿಯಂತೆ ಹಣೆಗೆ ಯು ಆಕಾರದ ಗಂಧದ ತಿಲಕ ಹಚ್ಚಿ, ಸನ್ಯಾಸಿಗಳು ಧರಿಸುವ ತಿಳಿ ಬಣ್ಣದ ಕುರ್ತಾ ಧರಿಸಿ ಅಗ್ನಿಕುಂಡದ ಮುಂದೆ ಕುಳಿತ ಇವರು ಉಳಿದವರಂತೆಯೇ ಮಹಾ ಕುಂಭಮೇಳದ ಬೈರಾಗಿ ಕ್ಯಾಂಪ್‌ನಲ್ಲಿ ಕಾಣಸಿಗುತ್ತಾರೆ. 

ಕೊರೋನಾ ನಿರ್ಬಂಧ: ಏಪ್ರಿಲ್ ಮೊದಲೆರಡು ವಾರದಲ್ಲಿ ನಿರುದ್ಯೋಗ ಸಮಸ್ಯೆ ಶೇ.8ರಷ್ಟು ಹೆಚ್ಚಳ!...

CM BS Yediyurappa to kiccha sudeep top 10 News of April 16 ckm

ಕೊರೋನಾ ವೈರಸ್ ಕಾರಣ ಒಂದೊಂದೆ ರಾಜ್ಯಗಳು ಕಠಿಣ ನಿರ್ಬಂಧ ಹೇರಲಾಗುತ್ತಿದೆ. ಮಹಾರಾಷ್ಟ್ರ, ದೆಹಲಿ, ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಕೊರೋನಾ ಕರ್ಫ್ಯೂ ಜಾರಿಯಾಗಿದೆ. ಕಠಿಣ ರೂಲ್ಸ್ ಹೇರಿದ ಎರಡೇ ವಾರಕ್ಕೆ ಭಾರತದ ನಿರುದ್ಯೋಗ ಸಮಸ್ಯೆಯಲ್ಲೂ ಹೆಚ್ಚಳವಾಗಿದೆ. 

ಕುಂಭಮೇಳಕ್ಕೆ ಹೋದೋರು ಕರ್ನಾಟಕ ಎಂಟ್ರಿ ಆಗೋಕೆ ಕೊರೋನಾ ಟೆಸ್ಟ್ ಕಡ್ಡಾಯ...

CM BS Yediyurappa to kiccha sudeep top 10 News of April 16 ckm

ಉತ್ತರಖಂಡದ ಹರಿದ್ವಾರದಲ್ಲಿ ಕುಂಭ ಮೇಳದಿಂದ ಹಿಂದಿರುಗಿದ ಎಲ್ಲಾ ಕರ್ನಾಟಕ ಯಾತ್ರಿಕರಿಗೆ ಕೋರೋನಾ ಪರೀಕ್ಷೆ ಕಡ್ಡಾಯ ಎಂದು ರಾಜ್ಯ ಆರೋಗ್ಯ ಸಚಿವ ಕೆ.ಸುಧಾಕರ್ ಹೇಳಿದ್ದಾರೆ.

IPL 2021: ಆರ್‌ಸಿಬಿ ನಾಯಕ ವಿರಾಟ್ ಕೊಹ್ಲಿಗೆ ಛೀಮಾರಿ...

CM BS Yediyurappa to kiccha sudeep top 10 News of April 16 ckm

ಸನ್‌ರೈಸರ್ಸ್ ಹೈದರಾಬಾದ್‌ ವಿರುದ್ದದ ಪಂದ್ಯದಲ್ಲಿ ಔಟ್‌ ಬೇಸರದಲ್ಲಿ ಡಗೌಟ್‌ನಲ್ಲಿ ಚೇರ್‌ಗೆ ಒದ್ದಿದ್ದಕ್ಕೆ ಆರ್‌ಸಿಬಿ ನಾಯಕ ವಿರಾಟ್ ಕೊಹ್ಲಿ ಮ್ಯಾಚ್‌ ರೆಫ್ರಿಯಿಂದ ಚೀಮಾರಿ ಹಾಕಿಸಿಕೊಂಡಿದ್ದಾರೆ. 

ಅನಾರೋಗ್ಯ: ವೀಕೆಂಡ್ ವಿಥ್ ಕಿಚ್ಚಗೆ ಹೋಗಲ್ಲ ಎಂದ ಸುದೀಪ್...

CM BS Yediyurappa to kiccha sudeep top 10 News of April 16 ckm

ನಟ ಸುದೀಪ್ ಆರೋಗ್ಯದಲ್ಲಿ ಏರುಪೇರಾಗಿರುವ ಕಾರಣ ವೈದ್ಯರು ಒಂದು ವಾರ ವಿಶ್ರಾಂತಿ ಪಡೆಯಲು ಸೂಚಿಸಿದ್ದಾರೆ. ಹಾಗಾದರೆ ಈ ವಾರದ ಬಿಗ್‌ಬಾಸ್‌ ಎಪಿಸೋಡ್‌ ವೀಕೆಂಡ್ ವಿಥ್ ಕಿಚ್ಚದಲ್ಲಿ ಯಾರಿರಲಿದ್ದಾರೆ? 

ಗ್ರಾಹಕ ಬ್ಯಾಂಕಿಂಗ್‌ ವಹಿವಾಟು ಕ್ಷೇತ್ರದಿಂದ ಈ ಬ್ಯಾಂಕ್‌ ಹೊರಕ್ಕೆ...

CM BS Yediyurappa to kiccha sudeep top 10 News of April 16 ckm

3 ದಶಕಗಳ ಸೇವೆ ಬಳಿಕ ಬ್ಯಾಂಕೊಂದು ಗ್ರಾಹಕ ಬ್ಯಾಂಕಿಂಗ್‌ ವಹಿವಾಟು ಕ್ಷೇತ್ರದಿಂದ  ಹೊರ ನಡೆಯುತ್ತಿದೆ. ಭಾರತ ಸೇರಿದಂತೆ 13 ದೇಶಗಳಲ್ಲಿನ ವಹಿವಾಟಿನಿಂದ ಮುಕ್ತವಾಗುತ್ತಿದೆ. 

ಹನುಮ ಜನ್ಮಸ್ಥಳ ವಿವಾದ: ಇತಿಹಾಸ ತಜ್ಞರಿಂದ ಸಂಶೋಧನೆ ಅಗತ್ಯ, ಲಿಂಬಾವಳಿ...

CM BS Yediyurappa to kiccha sudeep top 10 News of April 16 ckm

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಅಂಜನಾದ್ರಿ  ಹನುಮ ಜನ್ಮ ಸ್ಥಳದ ಬಗ್ಗೆ ಇತಿಹಾಸ ತಜ್ಞರು ಸಂಶೋಧನೆ ನಡೆಸಿದ ಮೇಲೆ ಸತ್ಯಾಸತ್ಯತೆ ತಿಳಿಯುತ್ತದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಅರವಿಂದ ಲಿಂಬಾವಳಿ ಹೇಳಿದ್ದಾರೆ.  

ಪ್ರೀತಿ ಬಲೆಯಲ್ಲಿ ಬಾಲಕ : ಮಧ್ಯರಾತ್ರಿ ಮಗಳ ಮೂಲಕ ಮನೆಗೆ ಕರೆಸಿ ಕೊಲೆಗೈದ ಮುಖಂಡ...

CM BS Yediyurappa to kiccha sudeep top 10 News of April 16 ckm

ಮಂಡ್ಯದಲ್ಲೊಂದು ಭೀಕರ ಘಟನೆ ನಡೆದಿದೆ. ಬಾಲಕ ಶ್ರೀಮಂತರ ಮನೆಯ ಬಾಲಕಿಯ ಪ್ರೇಮದ ಬಲೆಯಲ್ಲಿ ಬಿದ್ದಿದ್ದ. ಮಧ್ಯರಾತ್ರಿ ಆಕೆ ಕರೆದಳೆಂದು ಬಂದವ ಅಲ್ಲಿಯೇ ಶವವಾದ. ಪ್ರೀತಿ ನಡುವೆ ಬಂದಿದ್ದು ಅಂತಸ್ತು, ಜಾತಿ.

ಬಸ್‌ ಸ್ಟ್ರೈಕ್‌: 'ಸರ್ಕಾರಕ್ಕೆ ತಾಕತ್ತಿದ್ದರೆ ಎಲ್ಲ ನೌಕರರನ್ನೂ ವಜಾ ಮಾಡಲಿ'...

CM BS Yediyurappa to kiccha sudeep top 10 News of April 16 ckm

ಸಾರಿಗೆ ಸಂಸ್ಥೆಯ ನೌಕರರ ಮೇಲೆ ಅಧಿಕಾರಿಗಳು ನಡೆಸುತ್ತಿರುವ ದೌರ್ಜನ್ಯ ನಿಲ್ಲದಿದ್ದರೆ, ನೌಕರರ ಹೋರಾಟದ ಸ್ವರೂಪವೇ ಬದಲಾಗಲಿದೆ| ಸರ್ಕಾರ ನೌಕರರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವ ದಿಸೆಯಲ್ಲಿ ಹಠಮಾರಿತನ ಬಿಟ್ಟು ಮಾತುಕತೆ ನಡೆಸಬೇಕಿದೆ: ನೀರಲಕೇರಿ| 

Follow Us:
Download App:
  • android
  • ios