ಕರ್ನಾಟಕ ಸೇರಿದಂತೆ 3 ರಾಜ್ಯಗಳ ಮಾದಿಗ ಸಮುದಾಯದ ನಿಯೋಗ ಭೇಟಿ ಮಾಡಿದ ಕಾರ್ಯದರ್ಶಿಗಳ ಸಮಿತಿ!
ಮಾದಿಗ ಸಮುದಾಯದ ಕುಂದುಕೊರತೆಗಳನ್ನು ಪರಿಹರಿಸಲು ತೆಗೆದುಕೊಳ್ಳಬಹುದಾದ ಇತರ ಉಪಕ್ರಮಗಳು ಮತ್ತು ಸುಧಾರಣೆಗಳನ್ನು ತೆಗೆದುಕೊಳ್ಳುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಸೂಚನೆಯ ಮೇರೆಗೆ ಈ ಸಮಿತಿಯನ್ನು ರಚಿಸಲಾಗಿದೆ.
![Committee of Secretaries set up for Madiga community met with a delegation of Karnataka san Committee of Secretaries set up for Madiga community met with a delegation of Karnataka san](https://static-ai.asianetnews.com/images/01hp4gkjcy8dc5brrgbsk7971m/modi2_363x203xt.jpg)
ನವದೆಹಲಿ (ಫೆ.9): ಪ್ರಧಾನಿ ನರೇಂದ್ರ ಮೋದಿ ಅವರ ಸೂಚನೆಯ ಮೇರೆಗೆ, ಮಾದಿಗರು ಮತ್ತು ಇತರ ಗುಂಪುಗಳಂತಹ ಪರಿಶಿಷ್ಟ ಜಾತಿ ಸಮುದಾಯಗಳ ಹಿತಾಸಕ್ತಿಗಳನ್ನು ಕಾಪಾಡಲು ತೆಗೆದುಕೊಳ್ಳಬಹುದಾದ ಆಡಳಿತಾತ್ಮಕ ಕ್ರಮಗಳನ್ನು ಪರಿಶೀಲಿಸಲು ಕ್ಯಾಬಿನೆಟ್ ಕಾರ್ಯದರ್ಶಿಯವರ ಅಧ್ಯಕ್ಷತೆಯಲ್ಲಿ ಕಾರ್ಯದರ್ಶಿಗಳ ಸಮಿತಿಯನ್ನು ಈಗಾಗಲೇ ರಚಿಸಲಾಗಿದೆ. ಈ ಸಮಿತಿಯ 2ನೇ ಸಭೆ ಶುಕ್ರವಾರ ನಡೆದಿದೆ. ಮಾದಿಗ ಸಮುದಾಯಗಳಿಗೆ ಅವರ ಸರಿಯಾದ ಪಾಲು ಸಿಗುತ್ತಿಲ್ಲ ಎನ್ನುವ ಕಾರಣಕ್ಕೆ ಇದರ ಬಗ್ಗೆ ಗಮನ ನೀಡಲು ಈ ಸಮಿತಿ ರಚಿಸಲಾಗಿದೆ. ಕಾರ್ಯದರ್ಶಿಗಳ ಸಮಿತಿಯ ಎರಡನೇ ಸಭೆಯಲ್ಲಿ ಸಮಿತಿಯು ತೆಲಂಗಾಣ, ಆಂಧ್ರಪ್ರದೇಶ ಮತ್ತು ಕರ್ನಾಟಕ ರಾಜ್ಯಗಳ ಮಾದಿಗ ಸಮುದಾಯದ ನಿಯೋಗವನ್ನು ಭೇಟಿ ಮಾಡಿತು. ಕಾರ್ಯದರ್ಶಿಗಳ ಸಮಿತಿಯನ್ನು ಸ್ಥಾಪಿಸಿದ್ದಕ್ಕಾಗಿ ನಿಯೋಗವು ಪ್ರಧಾನ ಮಂತ್ರಿಯವರಿಗೆ ಕೃತಜ್ಞತೆ ಸಲ್ಲಿಕೆ ಮಾಡಿದೆ ಎಂದು ಪ್ರಧಾನ ಮಂತ್ರಿ ಕಚೇರಿ ತಿಳಿಸಿದೆ.
ನಿಯೋಗವು ಮಾದಿಗ ಸಮುದಾಯದ ಸಾಮಾಜಿಕ-ಆರ್ಥಿಕ ಸ್ಥಿತಿಗತಿಗಳು ಮತ್ತು ಅವರು ಎದುರಿಸುತ್ತಿರುವ ತೊಂದರೆಗಳ ಬಗ್ಗೆ ಸಮಿತಿಗೆ ತಿಳಿಸಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಎಲ್ಲಾ ಕಲ್ಯಾಣ ಮತ್ತು ಅಭಿವೃದ್ಧಿ ಯೋಜನೆಗಳ ಪ್ರಯೋಜನಗಳು ಮಾದಿಗ ಮತ್ತು ಇತರ ಸಮಾನ ಸ್ಥಾನಮಾನದ ಸಮುದಾಯಗಳಿಗೆ ಸಮಾನವಾಗಿ ಲಭ್ಯವಾಗುವಂತೆ ಭಾರತ ಸರ್ಕಾರವು ಖಚಿತಪಡಿಸಿಕೊಳ್ಳಬೇಕು ಎಂದು ಅವರು ಸಮಿತಿಯ ಸದಸ್ಯರಿಗೆ ವಿನಂತಿ ಮಾಡಿದ್ದಾರೆ.
ಉಭಯ ಸದನದಲ್ಲಿ ಕಡ್ಡಾಯ ಹಾಜರಾತಿಗೆ ವಿಪ್ ಜಾರಿಗೊಳಿಸಿದ ಬಿಜೆಪಿ, ನಾಳೆ ಮತ್ತೊಂದು ಸರ್ಪ್ರೈಸ್!
ಸಮಿತಿಯು ನಿಯೋಗ ಎತ್ತಿರುವ ಕಳವಳಗಳನ್ನು ಗಮನಿಸಿದೆ. ಸಮಾಜದ ವಿವಿಧ ವರ್ಗಗಳ ಕಲ್ಯಾಣಕ್ಕೆ ಸಂಬಂಧಿಸಿದ ವಿಷಯಗಳನ್ನು ಸರ್ಕಾರ ನಿಯಮಿತವಾಗಿ ಮೇಲ್ವಿಚಾರಣೆ ಮಾಡಲಿದೆ ಎಂದು ಸಮಿತಿಯು ನಿಯೋಗಕ್ಕೆ ತಿಳಿಸಿತು ಮತ್ತು ಅವರು ಎತ್ತಿರುವ ಸಮಸ್ಯೆಗಳನ್ನು ಪರಿಶೀಲಿಸಲಾಗುವುದು ಮತ್ತು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಅವರಿಗೆ ಭರವಸೆ ನೀಡಿದೆ.