Asianet Suvarna News Asianet Suvarna News

ಎಲ್ಲ ಮರೆತು ದಂಗೆಯೆಬ್ಬಿಸಿ ಇದೀಗ ತಂದೆಯ ಆರೋಗ್ಯ ನೆನಪಾಯಿತೇ? ಆರೋಪಿಗೆ ಕೋರ್ಟ್ ಪ್ರಶ್ನೆ!

ಕೊರೋನಾ ವೈರಸ್ ವಕ್ಕರಿಸುವ ಮೊದಲು ದೇಶದಲ್ಲಿ ಪೌರತ್ವ ಕಾಯ್ದೆ ವಿರುದ್ಧ ದಂಗೆ ತೀವ್ರವಾಗಿತ್ತು. ದೆಹಲಿಯಲ್ಲಿ ನಡೆದ ದಂಗೆಯಲ್ಲಿ ಶಾರುಖ್ ಫಠಾಣ್ ಪಿಸ್ತೂಲ್ ಹಿಡಿದು ಪೊಲೀಸರತ್ತ ಗಂಡಿ ಹಾರಿಸಿದ ಅರೆಸ್ಟ್ ಆಗಿರುವ ಆರೋಪಿ ಶಾರುಖ್ ಪಠಾಣ್ ಇದೀಗ  ಜಾಮೀನು ಕೋರಿ ಕೋರ್ಟ್ ಮೆಟ್ಟಿಲೇರಿದ್ದಾರೆ. ಆದರೆ ಕೋರ್ಟ್ ಈತನಿಗೆ ಜಾಮೀನು ನೀಡಲು ನಿರಾಕರಿಸಿದೆ. ಇಷ್ಟೇ ಅಲ್ಲ ಈತನ ಮನವಿಗೆ ಖಡಕ್ ತಿರುಗೇಟು ನೀಡಿದೆ.

committing offence you forget everyone Now  thinking ailing parents Court to riots accused
Author
Bengaluru, First Published Jun 25, 2020, 5:51 PM IST

ದೆಹಲಿ(ಜೂ.25): ಪೌರತ್ವ ಕಾಯ್ದೆ ವಿರೋಧಿಸಿ ದೆಹಲಿಯಲ್ಲಿ ಉದ್ದೇಶ ಪೂರ್ವಕವಾಗಿ ನಡೆದ ಹಿಂಸಾಚಾರ ದೇಶವನ್ನೇ ಬೆಚ್ಚಿ ಬೀಳಿಸಿತ್ತು. ದಂಗೆಯೆಬ್ಬಿಸಿದ, ದಂಗೆಗೆ ಪ್ರಚೋದನೆ ನೀಡಿದ, ಪಾಲ್ಗೊಂಡ ಹಲವರು ಪೊಲೀಸರ ಅತಿಥಿಯಾಗಿದ್ದಾರೆ. ಇದರಲ್ಲಿ ಪಿಸ್ತೂಲ್ ಹಿಡಿದು ದಂಗೆಗೆ ಮತ್ತಷ್ಟು ತುಪ್ಪ ಸುರಿದ ಆರೋಪಿ ಶಾರುಖ್ ಪಠಾಣ್ ತನಗೆ ಜಾಮೀನು ನೀಡುವಂತೆ ದೆಹಲಿ ಹೈಕೋರ್ಟ್‌ಗೆ ಮನವಿ ಮಾಡಿದ್ದ. ಆದರೆ ಕೋರ್ಟ್ ಈ ಈತನ ಮನವಿಯನ್ನು ತಿರಸ್ಕರಿಸಿದೆ.

ದೆಹಲಿ ಹಿಂಸಾಚಾರ; 'ಜೈಲಿನಲ್ಲೇ ಹೆರಿಗೆ ಮಾಡಿಸ್ತೆವೆ, ಇದೇನು ವಿಶೇಷ ಪ್ರಕರಣ ಅಲ್ಲ'...

ದೆಹಲಿ ದಂಗೆಯ ಹಲವು ಆರೋಪಿಗಳು ಜೈಲಿನಿಂದ ಹೊರಬರಲು ಹಲವು ಅಸ್ತ್ರ ಪ್ರಯೋಗಿಸುತ್ತಿದ್ದಾರೆ. ಇದೀಗ ಪಿಸ್ತೂಲ್ ಶೂರ ಶಾರುಖ್ ಪಠಾಣ್ ತನ್ನ ವಕೀಲರ ಮೂಲಕ ಜಾಮೀನು ನೀಡುವಂತೆ ದೆಹಲಿ ಹೈಕೋರ್ಟ್‌ಗೆ ಮನವಿ ಮಾಡಿದ್ದ.  ಶಾರುಖ್ ಪಠಾಣ್ 76 ವರ್ಷದ ತಂದೆ ಅನಾರೋಗ್ಯಕ್ಕೆ ತುತ್ತಾಗಿದ್ದಾರೆ. ಅವರನ್ನು ನೋಡಿಕೊಳ್ಳಲು, ತಂದೆಯ ಆರೈಕೆ ಮಾಡಲು ಯಾರೂ ಇಲ್ಲ. ಹೀಗಾಗಿ ಮಾನವೀಯತೆ ಆಧಾರದಲ್ಲಿ ಜಾಮೀನು ನೀಡಬೇಕು ಎಂದು ಶಾರುಖ್ ಪಠಾಣ್ ವಕೀಲರು ಮನವಿ ಮಾಡಿದ್ದಾರೆ.

ಪಾಕ್ ಪರ ಘೋಷಣೆ ಕೂಗಿದ್ದ ಅಮೂಲ್ಯಾಗೆ ಜಾಮೀನು.

ಜಾಮಿಯಾ ವಿದ್ಯಾರ್ಥಿ ಸಫೂರ ಜರ್ಗರ್‌ಗೆ ಮಾನವೀಯತೆ ಆಧಾರದಲ್ಲಿ ಕೋರ್ಟ್ ಜಾಮೀನು ನೀಡಿದೆ. ಈ ಪ್ರಕರಣವನ್ನು ಉಲ್ಲೇಖಿಸಿ, ಶಾರುಖ್ ಪಠಾಣ್ ಜಾಮೀನಿಗೆ ಮನವಿ ಮಾಡಿದ್ದಾನೆ. ಮನವಿ ಆಲಿಸಿದ ನ್ಯಾಯಮೂರ್ತಿ ಸುರೇಶ್ ಕುಮಾರ್ ಕೈಟ್, ಜಾಮೀನು ನೀಡಲು ನಿರಾಕರಿಸಿದ್ದಾರೆ. ದೆಹಲಿ ದಂಗೆಯೆಬ್ಬಿಸಿದ ಸಂದರ್ಭದಲ್ಲಿ ತಂದೆ ತಾಯಿ, ಬಂಧು ಬಳಕ, ಇತರರ ಜೀವನ ಯಾವುದರ ಕುರಿತು ಚಿಂತಿಸಿದ ನಿಮಗ, ಈಗ ತಂದೆಯ ಆರೋಗ್ಯ ನೆನಪಾಯಿತೇ ಎಂದು ಪ್ರಶ್ನಿಸಿದ್ದಾರೆ.

ದಂಗೆ ಮೂಲಕ ಹೀರೋ ಆಗಲು ಹೊರಟವರು ಕಾನೂನು ಎದುರಿಸಲೇಬೇಕು. ತಪ್ಪು ಮಾಡುವಾಗ ಪೋಷಕರ ಮೇಲೆ ಇಲ್ಲದ ಕಾಳಜಿ ಈಗ ಯಾಕೆ? ಎಂದು ಕೋರ್ಟ್ ಪ್ರಶ್ನಿಸಿದೆ. ಈ ಮೂಲಕ ಶಾರುಖ್ ಪಠಾಣ್ ಜಾಮೀನು ಅರ್ಜಿಯನ್ನು ತಳ್ಳಿ ಹಾಕಿದೆ.

Follow Us:
Download App:
  • android
  • ios