'ರಾಮಮಂದಿರ ಹೋರಾಟ ಮೊದಲು ಬೆಂಬಲಿಸಿದ್ದು ಬಿಜೆಪಿಯಲ್ಲ ಕಾಂಗ್ರೆಸ್'!
ರಾಮಮಂದಿರ ಹೋರಾಟ ಮೊದಲು ಬೆಂಬಲಿಸಿದ್ದು ಬಿಜೆಪಿಯಲ್ಲ ಕಾಂಗ್ರೆಸ್!| ರಾಜ್ಯಶಾಸ್ತ್ರಜ್ಞ ವಿನಯ್ ಸೀತಾಪತಿ ಬರೆದ ‘ಜುಗಲ್ಬಂದಿ: ‘ದ ಬಿಜೆಪಿ ಬಿಫೋರ್ ಮೋದಿ’ ಎಂಬ ಪುಸ್ತಕ
ನವದೆಹಲಿ(ಡಿ.03): ಅಯೋಧ್ಯೆ ರಾಮಮಂದಿರ ಹೋರಾಟವನ್ನು ಆರಂಭಿಸಿದ್ದು ಬಿಜೆಪಿಯ ಎಂಬುದು ಜನಜನಿತ. ಆದರೆ, ಅಯೋಧ್ಯೆ ಚಳವಳಿಯನ್ನು ಮೊದಲು ಉತ್ತೇಜಿಸಿದ್ದು ಕಾಂಗ್ರೆಸ್ ಪಕ್ಷ ಎಂಬ ಸಂಗತಿಯನ್ನು ನೂತನ ಪುಸ್ತಕವೊಂದು ಬಹಿರಂಗಪಡಿಸಿದೆ.
ರಾಮಮಂದಿರಕ್ಕೆ ಬೇಕಾದ ಗುಲಾಬಿ ಕಲ್ಲಿನ ಗಣಿಗಾರಿಕೆಗೆ ರಾಜಸ್ಥಾನ ಸರ್ಕಾರ ಅಸ್ತು?
ರಾಜ್ಯಶಾಸ್ತ್ರಜ್ಞ ವಿನಯ್ ಸೀತಾಪತಿ ಬರೆದ ‘ಜುಗಲ್ಬಂದಿ: ‘ದ ಬಿಜೆಪಿ ಬಿಫೋರ್ ಮೋದಿ’ ಎಂಬ ಪುಸ್ತಕದಲ್ಲಿ ಈ ಸಂಗತಿಯನ್ನು ಉಲ್ಲೇಖಿಸಲಾಗಿದೆ. 1983ರಲ್ಲಿ ಉತ್ತರ ಪ್ರದೇಶದ ಮುಜಫ್ಫರ್ನಗರದಲ್ಲಿ ವಿಎಚ್ಪಿ ಹಿಂದು ಸಮ್ಮೇಳನವೊಂದನ್ನು ಆಯೋಜಿಸಿತ್ತು. ಇದರಲ್ಲಿ ಕಾಂಗ್ರೆಸ್ನ ಇಬ್ಬರು ಮುಖಂಡರು ಭಾಗಿಯಾಗಿದ್ದರು.
ಅಯೋಧ್ಯೆ ಶ್ರೀರಾಮ ವಿಗ್ರಹಕ್ಕೆ ಸೂರ್ಯಕಿರಣ ಸ್ಪರ್ಶದ ವ್ಯವಸ್ಥೆ : ಮೋದಿ ಸೂಚನೆ
ಸಭೆಯಲ್ಲಿ ಉತ್ತರ ಪ್ರದೇಶದ ಮಾಜಿ ಮಂತ್ರಿ ದೌ ದಯಾಲ್ ಖನ್ನಾ ಹಾಗೂ ಹಂಗಾಮಿ ಪ್ರಧಾನಿಯಾಗಿ ಕಾರ್ಯನಿರ್ವಹಿಸಿದ್ದ ಗುಲ್ಜಾರಿ ಲಾಲ್ ನಂದಾ ಅವರ ಉಪಸ್ಥಿತಿ ಎಲ್ಲರ ಹುಬ್ಬೇರಿಸುವಂತೆ ಮಾಡಿತ್ತು ಎಂದು ಪುಸ್ತಕದಲ್ಲಿ ತಿಳಿಸಲಾಗಿದೆ.