Asianet Suvarna News Asianet Suvarna News

ಹೋಟೆಲ್‌ ಮಾಲೀಕರ ಹೆಸರು ಕಡ್ಡಾಯ: ಹಿಮಾಚಲ ಸಚಿವಗೆ ಕಾಂಗ್ರೆಸ್‌ ಹೈಕಮಾಂಡ್‌ ತರಾಟೆ

ರಾಜ್ಯದಲ್ಲಿ ಹೆಚ್ಚುತ್ತಿರುವ ವಲಸೆ ಕಾರ್ಮಿಕರ ಭಯವನ್ನು ಹೋಗಲಾಡಿಸಲು ಈ ನಿರ್ಧಾರ ಕೈಗೊಳ್ಳಲಾಗಿದೆ’ ಎಂಬ ಸಿಂಗ್‌ ಹೇಳಿಕೆಗೆ ಪಕ್ಷದಲ್ಲೇ ವಿರೋಧ ವ್ಯಕ್ತವಾಗಿದೆ. ಈ ಕುರಿತು ಚರ್ಚಿಸಲು ಸಚಿವರನ್ನು ದೆಹಲಿಗೆ ಕರೆಸಲಾಗಿದ್ದು, ವಿಷಯದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡದಂತೆ ಸೂಚಿಸಲಾಗಿದೆ. ಜೊತೆಗೆ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಮ್ಮ ಅಸಮಾಧಾನ ವ್ಯಕ್ತಪಡಿಸಿರುವುದಾಗಿ ವರದಿಯಾಗಿದೆ.
 

Congress High Command slams Himachal Minister for Support to Name of hotel owner is mandatory grg
Author
First Published Sep 27, 2024, 6:00 AM IST | Last Updated Sep 27, 2024, 6:00 AM IST

ನವದೆಹಲಿ(ಸೆ.27):  ಹೋಟೆಲ್‌ ಹಾಗೂ ಆಹಾರ ಪದಾರ್ಥಗಳನ್ನು ಮಾರುವ ಅಂಗಡಿಗಳ ಮಂದೆ ಮಾಲೀಕರ ಹೆಸರನ್ನು ಪ್ರದರ್ಶಿಸುವುದು ಕಡ್ಡಾಯಗೊಳಿಸುವ ನಿರ್ಧಾರವನ್ನು ಬೆಂಬಲಿಸಿದ್ದಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ ಹೈಕಮಾಂಡ್‌ ಸ್ವಪಕ್ಷದ ಸಚಿವ ವಿಕ್ರಮಾದಿತ್ಯ ಸಿಂಗ್‌ ಅವರನ್ನು ತರಾಟೆಗೆ ತೆಗೆದುಕೊಂಡಿದೆ.

‘ರಾಜ್ಯದಲ್ಲಿ ಹೆಚ್ಚುತ್ತಿರುವ ವಲಸೆ ಕಾರ್ಮಿಕರ ಭಯವನ್ನು ಹೋಗಲಾಡಿಸಲು ಈ ನಿರ್ಧಾರ ಕೈಗೊಳ್ಳಲಾಗಿದೆ’ ಎಂಬ ಸಿಂಗ್‌ ಹೇಳಿಕೆಗೆ ಪಕ್ಷದಲ್ಲೇ ವಿರೋಧ ವ್ಯಕ್ತವಾಗಿದೆ. ಈ ಕುರಿತು ಚರ್ಚಿಸಲು ಸಚಿವರನ್ನು ದೆಹಲಿಗೆ ಕರೆಸಲಾಗಿದ್ದು, ವಿಷಯದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡದಂತೆ ಸೂಚಿಸಲಾಗಿದೆ. ಜೊತೆಗೆ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಮ್ಮ ಅಸಮಾಧಾನ ವ್ಯಕ್ತಪಡಿಸಿರುವುದಾಗಿ ವರದಿಯಾಗಿದೆ.

ತಿರುಪತಿ ಲಡ್ಡು ವಿವಾದ: ಯುಪಿ ಹೋಟೆಲ್‌ಗಳಲ್ಲಿ ಮಾಲೀಕರ ಹೆಸರು ಪ್ರದರ್ಶನಕ್ಕೆ ಯೋಗಿ ಸರ್ಕಾರ ಆದೇಶ

ಈ ಮೊದಲು ಕಾವಾಡಿ ಯಾತ್ರೆಯ ವೇಳೆ ಉತ್ತರಪ್ರದೇಶದಲ್ಲಿ ಯೋಗಿ ಸರ್ಕಾರ ಇಂತಹ ಆದೇಶ ಹೊರಡಿಸಿದ್ದಾಗ ಕಾಂಗ್ರೆಸ್‌ ಅದನ್ನು ಖಂಡಿಸಿತ್ತು. ಈಗ ಸಿಂಗ್‌ರ ನಡೆ ಪಕ್ಷದ ನಿಲುವಿನ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ.

Latest Videos
Follow Us:
Download App:
  • android
  • ios