ಕಾಂಗ್ರೆಸ್ ನಾಯಕಿ ಪ್ರಿಯಾಂಕ ಗಾಂಧಿ ಮೌನಿ ಅಮವಾಸ್ಯೆ ಹಿನ್ನೆಲೆಯಲ್ಲಿ ಪವಿತ್ರ ಸ್ನಾನ ಮಾಡಿದರು. ಸಂಗಮದಲ್ಲಿ ಪೂಜೆ ಸಲ್ಲಿಸಿದರು. 

ಲಖನೌ (ಫೆ.12): ಕಾಂಗ್ರೆಸ್‌ ಪ್ರಧಾನ ಕಾರ‍್ಯದರ್ಶಿ ಪ್ರಿಯಾಂಕಾ ಗಾಂಧಿ ಮೌನಿ ಅಮವಾಸ್ಯೆ ಹಿನ್ನೆಲೆಯಲ್ಲಿ ಅಲಹಾಬಾದ್‌ನ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿ, ವಿಶೇಷ ಪೂಜೆ ಸಲ್ಲಿಸಿದರು. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಸಂಗಮವು ಗಂಗಾ, ಯಮುನಾ ಮತ್ತು ಸರಸ್ವತಿ ಮೂರೂ ನದಿಗಳು ಕೂಡುವ ಪವಿತ್ರ ಸ್ಥಳವಾಗಿದೆ. ಈ ವೇಳೆ ಪ್ರಿಯಾಂಕಾ ಗಾಂಧಿ ಅವರೊಂದಿಗೆ ಪುತ್ರಿ ಮತ್ತು ಕಾಂಗ್ರೆಸ್‌ ಶಾಸಕಿ ಆರಾಧನಾ ಮಿಶ್ರಾ ಅವರೂ ಇದ್ದರು.

Scroll to load tweet…

 ಪವಿತ್ರ ಸ್ನಾನದ ಬಳಿಕ ಆನಂದ ಭವನಕ್ಕೆ ಭೇಟಿ ನೀಡಿ ನಿರ್ಗತಿಕ ಮಕ್ಕಳೊಂದಿಗೆ ಸಂವಾದ ನಡೆಸಿದರು. ಈ ವೇಳೆ ಹೆಣ್ಣುಮಗುವೊಂದನ್ನು ಮಡಿಲಲ್ಲಿ ಕೂರಿಸಿಕೊಂಡಿದ್ದು ವಿಶೇಷವಾಗಿತ್ತು.