Asianet Suvarna News Asianet Suvarna News

ಪೌರತ್ವ ಕಾಯ್ದೆ: ಸುಪ್ರೀಂ ಕದ ತಟ್ಟಿದ ಕಾಂಗ್ರೆಸ್!

ಪೌರತ್ವ ತಿದ್ದುಪಡಿ ಕಾಯ್ದೆಗೆ ರಾಷ್ಟ್ರಪತಿ ಕೋವಿಂದ್ ಅಂಕಿತ| ಕಾಯ್ದೆ ಸಿಂಧುತ್ವ ಪ್ರಶ್ನಿಸಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ ಕಾಂಗ್ರೆಸ್| ಸಂವಿಧಾನದ 14ನೇ ವಿಧಿ ಉಲ್ಲಂಘನೆಯ ಆಪಾದನೆ ಹೊರಿಸಿದ ಕಾಂಗ್ರೆಸ್| ಸುಪ್ರೀಂಕೋರ್ಟ್ ಮಧ್ಯಪ್ರವೇಶಕ್ಕೆ ಕಾಂಗ್ರೆಸ್ ಆಗ್ರಹ| ‘ಕಾಯ್ದೆಯಿಂದ ಸಂವಿಧಾನದ ಮೂಲಭೂತ ವಿಚಾರಗಳ ಮೇಲೆ ಹಲ್ಲೆಯಾಗಿದೆ’|

Congress Moves Supreme Court Against Citizenship Act
Author
Bengaluru, First Published Dec 13, 2019, 5:37 PM IST

ನವದೆಹಲಿ(ಡಿ.13): ಮಹತ್ವದ ಬೆಳವಣಿಗೆಯೊಂದರಲ್ಲಿ ಪೌರತ್ವ (ತಿದ್ದುಪಡಿ) ಕಾಯ್ದೆ ಸಿಂಧುತ್ವದ ವಿರುದ್ಧ ಕಾಂಗ್ರೆಸ್ ಸುಪ್ರೀಂಕೋರ್ಟ್ ಮೆಟ್ಟಿಲೇರಿದೆ. ಕಾಯ್ದೆ ಸಂವಿಧಾನದ 14ನೇ ವಿಧಿ ಉಲ್ಲಂಘಿಸುತ್ತದೆ ಎಂದು ಆಪಾದಿಸಿ ಕಾಂಗ್ರೆಸ್ ದಾವೆ ಹೂಡಿದೆ.

ಪೌರತ್ವ ಮಸೂದೆಗೆ ರಾಷ್ಟ್ರಪತಿ ಅಂಕಿತ: ಇಂದಿನಿಂದಲೇ ಕಾನೂನು ಜಾರಿ!

ಕಾನೂನಿನ ಮುಂದೆ ಯಾವುದೇ ವ್ಯಕ್ತಿಗೆ ಸಮಾನತೆಯನ್ನು ರಾಜ್ಯವು ನಿರಾಕರಿಸುವಂತಿಲ್ಲ ಅಥವಾ ದೇಶದೊಳಗೆ ಕಾನೂನಿನಡಿ ಸಮಾನ ರಕ್ಷಣೆ ನೀಡಬೇಕೆಂದು ಭಾರತ ಸಂವಿಧಾನದ 14ನೇ ವಿಧಿಯಲ್ಲಿ ಹೇಳಲಾಗಿದೆ. 

ಈ ಹಿನ್ನೆಲೆಯಲ್ಲಿ ಕಾಯ್ದೆ ಪ್ರಶ್ನಾರ್ಹವಾಗಿದ್ದು, ಈ ಕುರಿತು ಸುಪ್ರೀಂಕೋರ್ಟ್ ಮಧ್ಯಪ್ರವೇಶಿಸಬೇಕು ಎಂದು ಕಾಂಗ್ರೆಸ್ ಒತ್ತಾಯಿಸಿದೆ.

ಪೌರತ್ವ ಮಸೂದೆ: ಈಶಾನ್ಯ ರಾಜ್ಯಗಳ ಭಯ ಅನಗತ್ಯ

ಪೌರತ್ವ ಕಾಯ್ದೆಯಿಂದ ಸಂವಿಧಾನದ ಮೂಲಭೂತ ವಿಚಾರಗಳ ಮೇಲೆ ಹಲ್ಲೆಯಾಗಲಿದ್ದು, ಸುಪ್ರೀಂಕೋರ್ಟ್’ನಲ್ಲಿ ಕಾಯ್ದೆಯ ಭವಿಷ್ಯ ನಿರ್ಧಾರವಾಗಲಿದೆ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಪಿ. ಚಿದಂಬರಂ ಹೇಳಿದ್ದಾರೆ. 

ನೀವ್ಯಾರೂ ಹೆದರಬೇಕಿಲ್ಲ: ಈಶಾನ್ಯ ಜನತೆಗೆ ಮೋದಿ ಭರವಸೆ!

Follow Us:
Download App:
  • android
  • ios