ಬರುವ ಏಪ್ರಿಲ್‌ನಲ್ಲಿ ರಾಜ್ಯಸಭೆಯ ಕೆಲವು ಸ್ಥಾನಗಳು ಖಾಲಿ, ಚುನಾವಣೆ| ಪ್ರಿಯಾಂಕಾ ವಾದ್ರಾ ರಾಜ್ಯಸಭೆ ಪ್ರವೇಶ?| 

ನವದೆಹಲಿ[ಫೆ.16]: ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ರಾಜ್ಯಸಭೆಗೆ ನಾಮನಿರ್ದೇಶನಗೊಳ್ಳುವ ಸಾಧ್ಯತೆ ಇದೆ.

Add Asianetnews Kannada as a Preferred SourcegooglePreferred

ಬರುವ ಏಪ್ರಿಲ್‌ನಲ್ಲಿ ರಾಜ್ಯಸಭೆಯ ಕೆಲವು ಸ್ಥಾನಗಳು ಖಾಲಿ ಆಗಲಿದ್ದು, ಚುನಾವಣೆ ನಡೆಯಲಿದೆ. ಮಧ್ಯಪ್ರದೇಶ ಹಾಗೂ ಛತ್ತೀಸ್‌ಗಢದ ಸ್ಥಾನಗಳು ಕೂಡ ಖಾಲಿಯಾಗಲಿವೆ. ಮಧ್ಯಪ್ರದೇಶದಲ್ಲಿ ಕಾಂಗ್ರೆಸ್‌ ಹಾಗೂ ಛತ್ತೀಸ್‌ಗಢದಲ್ಲಿ ಜೆಎಂಎಂ-ಕಾಂಗ್ರೆಸ್‌ ಮೈತ್ರಿಕೂಟ ಅಧಿಕಾರದಲ್ಲಿವೆ.

ಈ ಕಾರಣಕ್ಕಾಗಿ, ಈ ಎರಡೂ ರಾಜ್ಯಗಳ ಪೈಕಿ ಒಂದರಿಂದ ಪ್ರಿಯಾಂಕಾ ಅವರನ್ನು ಪಕ್ಷವು ನಾಮನಿರ್ದೇಶನ ಮಾಡುವ ಸಾಧ್ಯತೆ ಇದೆ ಎಂದು ಮೂಲಗಳು ಶನಿವಾರ ಹೇಳಿವೆ.

ಈಗ ಉತ್ತರಪ್ರದೇಶದ ಪ್ರಭಾರಿಯಾಗಿರುವ ಪ್ರಿಯಾಂಕಾರನ್ನು ರಾಜ್ಯಸಭೆಯಲ್ಲಿ ಪಕ್ಷದ ದನಿಯನ್ನಾಗಿ ಮಾಡುವುದು ಕಾಂಗ್ರೆಸ್‌ ಉದ್ದೇಶವಾಗಿದೆ ಎಂದು ಹೇಳಲಾಗಿದೆ.