ಪವಿತ್ರ ಕಾಶಿ ವಿಶ್ವನಾಥನ ಸನ್ನಿಧಿಯಲ್ಲಿ ಭದ್ರತೆಗೆ ನಿಯೋಜನೆ ಆಗಿರುವ ಪೊಲೀಸರು ಅರ್ಚಕರ ರೀತಿ ಕೇಸರಿ ಉಡುಪು ಧರಿಸಿ ಕರ್ತವ್ಯ ನಿರ್ವಹಿಸುತ್ತಿರುವುದು ಬೆಳಕಿಗೆ ಬಂದಿದೆ. ಸದ್ಯ ಪೊಲೀಸರ ನಡೆ ಭಾರೀ ವಿವಾದ ಸೃಷ್ಟಿಸಿದೆ.

ವಾರಾಣಸಿ (ಏ.13): ಪವಿತ್ರ ಕಾಶಿ ವಿಶ್ವನಾಥನ ಸನ್ನಿಧಿಯಲ್ಲಿ ಭದ್ರತೆಗೆ ನಿಯೋಜನೆ ಆಗಿರುವ ಪೊಲೀಸರು ಅರ್ಚಕರ ರೀತಿ ಕೇಸರಿ ಉಡುಪು ಧರಿಸಿ ಕರ್ತವ್ಯ ನಿರ್ವಹಿಸುತ್ತಿರುವುದು ಬೆಳಕಿಗೆ ಬಂದಿದೆ. ಸದ್ಯ ಪೊಲೀಸರ ನಡೆ ಭಾರೀ ವಿವಾದ ಸೃಷ್ಟಿಸಿದೆ.

Add Asianetnews Kannada as a Preferred SourcegooglePreferred

ಪೊಲೀಸರು ಕೇಸರಿಧಾರಿ ಆಗಿರುವ ವಿಡಿಯೋಗಳು ಈಗ ವೈರಲ್‌ ಆಗಿವೆ. ಅದರಲ್ಲಿ ಪೊಲೀಸರು ಸಾಂಪ್ರದಾಯಿಕ ಉಡುಪುಗಳು ಧರಿಸಿದ್ದಾರೆ. ಪುರುಷ ಪೊಲೀಸ್ ಅಧಿಕಾರಿಗಳು ಧೋತಿ, ಕುರ್ತಾವನ್ನು ಧರಿಸಿದ್ದರೆ ಮಹಿಳಾ ಅಧಿಕಾರಿಗಳು ಸಲ್ವಾರ್ ಕುರ್ತಾ ಧರಿಸಿದ್ದಾರೆ. ಅಲ್ಲದೇ ಹಣೆಯಲ್ಲಿ ಅರ್ಚಕರಂತೆ ತಿಲಕವನ್ನಿಟ್ಟುಕೊಂಡಿದ್ದಾರೆ.

ಕಾಶಿ ವಿಶ್ವನಾಥ ಮಂದಿರದ ಫೇಸ್‌ಬುಕ್ ಹ್ಯಾಕ್, ಕಿಡಿಗೇಡಿಗಳಿಂದ ಅಶ್ಲೀಲ ಪೋಸ್ಟ್!

ಅಖಿಲೇಶ್‌ ಆಕ್ರೋಶ: ಪೊಲೀಸರ ಈ ನಡೆಯನ್ನು ಕಟುವಾಗಿ ಟೀಕಿಸಿರುವ ಸಮಾಜವಾದಿ ಪಾರ್ಟಿ ನೇತಾರ ಅಖಿಲೇಶ್ ಯಾದವ್ ,‘ಪೊಲೀಸರು ತಮ್ಮ ಸಮವಸ್ತ್ರವನ್ನು ಹೊರತುಪಡಿಸಿ , ಇನ್ಯಾವುದೋ ಉಡುಪುಗಳನ್ನು ಧರಿಸುವುದಕ್ಕೆ ಅನುಮತಿ ನೀಡುವುದು ಭದ್ರತೆಗೆ ಅಪಾಯ ತಂದೊಡ್ಡುತ್ತದೆ. ಪೊಲೀಸರು ಈ ರೀತಿಯ ಉಡುಪುಗಳನ್ನು ಧರಿಸುವುದು ಎಷ್ಟು ಸರಿ? ಇದು ಮುಂದೆ ವಂಚಕ ಕೃತ್ಯಗಳಿಗೆ ದಾರಿಯಾದರೆ ಹೊಣೆಯಾರು? ಇಂತಹ ಆದೇಶಗಳನ್ನು ನೀಡಿದವರನ್ನು ಕೂಡಲೇ ವಜಾಗೊಳಿಸಬೇಕು’ ಎಂದು ಎಕ್ಸ್ ನಲ್ಲಿ ಬರೆದುಕೊಂಡಿದ್ದಾರೆ.

ಇನ್ನು ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ವಾರಾಣಸಿ ಪೊಲೀಸ್ ಕಮಿಷನರ್ ಮೋಹಿತ್ ಅರ್ಗವಾಲ್ ,‘ ಪೊಲೀಸರು ಅರ್ಚಕರ ಉಡುಪನ್ನು ಧರಿಸಿದರೆ ಜನರು ಅದನ್ನು ಭದ್ರತೆಯ ದೃಷ್ಟಿಯಿಂದ ಸಕಾರಾತ್ಮಕವಾಗಿ ತೆಗೆದುಕೊಳ್ಳುತ್ತಾರೆ. ಈ ಕಾರಣಕ್ಕಾಗಿಯೇ ಈ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗಿದೆ’ ಎಂದು ಸಮರ್ಥಿಸಿಕೊಂಡಿದ್ದಾರೆ.

Scroll to load tweet…