Asianet Suvarna News Asianet Suvarna News

ರಾಜ್ಯದಲ್ಲಿ ಕೊರೋನಾ ಹೊಸ ಉಪತಳಿ ಪತ್ತೆ ಹಿನ್ನೆಲೆ; 10 ದೇಶಗಳ ಪ್ರಯಾಣಿಕರಿಗೆ ಕಠಿಣ ನಿರ್ಬಂಧ!

- ಕೊರೋನಾ ಹೊಸ ಉಪತಳಿ ಪತ್ತೆ ಹಿನ್ನೆಲೆಯಲ್ಲಿ ಕಠಿಣ ಕ್ರಮ
- ಲಸಿಕೆ ಪಡೆದರೂ ಕೋವಿಡ್‌ ಟೆಸ್ಟ್‌, 7 ದಿನದ ಹೋಂ ಕ್ವಾರಂಟೈನ್‌ ಕಡ್ಡಾಯ
- ಕ್ವಾರಂಟೈನ್‌ ಮುಗಿದ ಬಳಿಕವೂ ಟೆಸ್ಟ್‌ ಮಾಡಿಸಬೇಕು
- 10 ದೇಶಗಳ ಪ್ರಯಾಣಿಕರಿಗೆ ರಾಜ್ಯ ಸರ್ಕಾರದ ಮಾರ್ಗಸೂಚಿ

Corona Negative RT PCR report mandatory Karnataka Government issues new Guidelines for International Passengers ckm
Author
Bengaluru, First Published Oct 28, 2021, 5:51 AM IST

ಬೆಂಗಳೂರು(ಅ.28):  ವಿಶ್ವದ ವಿವಿಧ ದೇಶಗಳಲ್ಲಿ ಕೊರೋನಾ(Coronavirus) ಮೂರನೇ ಅಲೆ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಸೋಂಕು ಅಪಾಯ ಹೊಂದಿರುವ ರಾಷ್ಟ್ರಗಳಿಂದ ರಾಜ್ಯಕ್ಕೆ ಆಗಮಿಸುವ ಅಂತರಾಷ್ಟ್ರೀಯ ಪ್ರಯಾಣಿಕರಿಗೆ(International Passengers) ಹಲವು ನಿರ್ಬಂಧಗಳನ್ನು ವಿಧಿಸಿ ರಾಜ್ಯ ಸರ್ಕಾರ(Karnataka Government) ಆದೇಶ ಹೊರಡಿಸಿದೆ.

ಕರ್ನಾಟಕದಲ್ಲಿ ಹೊಸದಾಗಿ 282 ಕೊರೊನಾ ಕೇಸ್,1 ಶಾಲೆ ಸೀಲ್‌ಡೌನ್

ಅಪಾಯ ಸಾಧ್ಯತೆ ಇರುವ ಬ್ರಿಟನ್‌, ದಕ್ಷಿಣ ಆಫ್ರಿಕಾ, ಬ್ರೆಜಿಲ್‌ ಹಾಗೂ ಬಾಂಗ್ಲಾದೇಶ, ಚೀನಾ, ಮ್ಯಾರಿಷಸ್‌, ನ್ಯೂಜಿಲೆಂಡ್‌, ಜಿಂಬಾಂಬ್ವೆ ಹಾಗೂ ಬೊಸ್ಟಾವನ ದೇಶಗಳಿಂದ ರಾಜ್ಯದ ವಿಮಾನ ನಿಲ್ದಾಣಗಳಿಗೆ ಆಗಮಿಸುವವರು ಎರಡೂ ಡೋಸ್‌ ಲಸಿಕೆ ಪಡೆದಿದ್ದರೂ ವಿಮಾನ ನಿಲ್ದಾಣದಲ್ಲಿ ಕಡ್ಡಾಯವಾಗಿ ಆರ್‌ಟಿ-ಪಿಸಿಆರ್‌(RT-PCR Test) ಪರೀಕ್ಷೆಗೆ ಒಳಪಡಬೇಕು.

ಪರೀಕ್ಷೆಗೆ(Covid test) ಒಳಪಟ್ಟಬಳಿಕ ಏಳು ದಿನಗಳ ಕಾಲ ಹೋಂ ಕ್ವಾರಂಟೈನ್‌ಗೆ(home quarantine) ಒಳಪಡಬೇಕು. ಎಂಟನೇ ದಿನ ಮತ್ತೆ ಸೋಂಕು ಪರೀಕ್ಷೆಗೆ ಒಳಪಡಬೇಕು. ಬಳಿಕ ಏಳು ದಿನಗಳ ಕಾಲ ಸ್ವಯಂ ನಿಗಾ ವಹಿಸಿ ಬಳಿಕವಷ್ಟೇ ಮುಕ್ತವಾಗಿ ಓಡಾಡಬಹುದು ಎಂದು ಷರತ್ತು ವಿಧಿಸಿದೆ.

ಹೊಸ ಕೊರೋನಾ ತಳಿ ಬಗ್ಗೆ ತಜ್ಞರು ಹೇಳಿದ್ದಿಷ್ಟು

ಕೆಲವು ದೇಶಗಳಿಗೆ ವಿನಾಯ್ತಿ:
ಇನ್ನು ಭಾರತದ ಜೊತೆಗೆ ಲಸಿಕೆ ಒಡಂಬಡಿಕೆ ಮಾಡಿಕೊಂಡಿರುವ ಫ್ರಾನ್ಸ್‌, ಜರ್ಮನಿ, ನೇಪಾಳ, ಬೆಲಾರಸ್‌ ಸೇರಿ 11 ದೇಶಗಳಿಂದ ಆಗಮಿಸುವವರು ಎರಡೂ ಡೋಸ್‌ ಲಸಿಕೆ ಪಡೆದಿದ್ದರೆ ಕಡ್ಡಾಯ ಹೋಂ ಕ್ವಾರಂಟೈನ್‌ ಅಗತ್ಯವಿಲ್ಲ. ಇವರು 72 ಗಂಟೆಗೂ ಹಳೆಯದಲ್ಲದ ನೆಗೆಟಿವ್‌ ವರದಿ ನೀಡಿ ಸ್ವಯಂ ನಿಗಾದಲ್ಲಿದ್ದಾರೆ ಸಾಕು ಎಂದು ಸ್ಪಷ್ಟಪಡಿಸಲಾಗಿದೆ. ಇನ್ನು ಈ ಪಟ್ಟಿಗಳಲ್ಲಿ ಹೆಸರು ಇಲ್ಲದ ದೇಶಗಳಲ್ಲಿ ಈ ಹಿಂದಿನ ನಿಯಮಾವಳಿಗಳೇ ಅನ್ವಯವಾಗಲಿವೆ.

ರಾಜ್ಯ ಸರ್ಕಾರವು ಏಕಾಏಕಿ ರಾಜ್ಯಕ್ಕೆ ಆಗಮಿಸುವ ಅಂತರಾಷ್ಟ್ರೀಯ ಪ್ರಯಾಣಿಕರ ಮೇಲೆ ನಿರ್ಬಂಧ ವಿಧಿಸಿರುವುದರಿಂದ ವಿಮಾನ ನಿಲ್ದಾಣಗಳಲ್ಲಿ ತೀವ್ರ ಗೊಂದಲದ ಸ್ಥಿತಿ ಉಂಟಾಗಿ ಪ್ರಯಾಣಿಕರು ಅಧಿಕಾರಿಗಳ ಜತೆ ವಾಗ್ವಾದ ನಡೆಸಿದರು.ದೇಶಗಳಿಗೆ ಕೆಲ ವಿನಾಯಿತಿಗಳನ್ನು ನೀಡಲಾಗಿದೆ. ಡಬ್ಲ್ಯೂಎಚ್‌ಒ ಅನುಮೋದನೆ ಪಡೆದಿರುವ ಎರಡೂ ಲಸಿಕೆ ಪಡೆದ ಉಭಯ ದೇಶಗಳ ಪ್ರಯಾಣಿಕರನ್ನು ಯಾವುದೇ ಕಟ್ಟುನಿಟ್ಟಿನ ನಿರ್ಬಂಧಗಳಿಲ್ಲದೆ ಬರ ಮಾಡಿಕೊಳ್ಳಲು ಕೆಲ ದೇಶಗಳ ನಡುವೆ ಒಪ್ಪಂದ ಆಗಿದೆ.

ಈ ರೀತಿ ಒಪ್ಪಂದ ಮಾಡಿಕೊಂಡಿರುವ ದೇಶಗಳನ್ನು ಕೆಟಗರಿ -ಎ ಎಂದು ಗುರುತಿಸಿದ್ದು, ಫ್ರಾನ್ಸ್‌, ಜರ್ಮನಿ, ನೇಪಾಳ, ಬೆಲಾರಸ್‌, ಲೆಬನಾನ್‌, ಅಮೆನಿಯಾ, ಉಕ್ರೇನ್‌, ಬೆಲ್ಜಿಯಂ, ಸೆರ್ಬಿಯಾ ಸೇರಿ ಹನ್ನೊಂದು ದೇಶಗಳಿಂದ ಆಗಮಿಸುವವರು ಎರಡೂ ಡೋಸ್‌ ಲಸಿಕೆ ಪಡೆದಿದ್ದರೆ ಕಡ್ಡಾಯ ಹೋಂ ಕ್ವಾರಂಟೈನ್‌ಗೆ ಒಳಪಡುವ ಅಗತ್ಯವಿಲ್ಲ. ಇವರು 72 ಗಂಟೆಗೂ ಹಳೆಯದಲ್ಲದ ನೆಗೆಟಿವ್‌ ವರದಿ ನೀಡಿ ಸ್ವಯಂ ನಿಗಾದಲ್ಲಿದ್ದಾರೆ ಸಾಕು ಎಂದು ಸ್ಪಷ್ಟಪಡಿಸಲಾಗಿದೆ.

ಒಂದೇ ಶಾಲೆಯ 21 ವಿದ್ಯಾರ್ಥಿಗಳಿಗೆ ಸೋಂಕು: ಕರ್ನಾಟಕದಲ್ಲಿ ಮತ್ತೆ ಕೊರೋನಾ ಆತಂಕ

ಉಳಿದ ಪ್ರಯಾಣಿಕರಿಗೆ ನಿಯಮವೇನು?:
ಇನ್ನು ಈ ಪಟ್ಟಿಗಳಲ್ಲಿ ಹೆಸರು ಇಲ್ಲದ ದೇಶಗಳಲ್ಲಿ ಈ ಹಿಂದಿನ ನಿಯಮಾವಳಿಗಳೇ ಅನ್ವಯವಾಗಲಿವೆ. ಆನ್‌ಲೈನ್‌ ಏರ್‌ ಸುವಿಧಾ ಪೋರ್ಟಲ್‌ನಲ್ಲಿ ಸ್ವಯಂಘೋಷಿತ ಪ್ರಮಾಣ ಪತ್ರ ನೀಡಬೇಕು. 72 ಗಂಟೆ ಹಳೆಯದಲ್ಲದ ನೆಗೆಟಿವ್‌ ಆರ್‌ಟಿಪಿಸಿಆರ್‌ ವರದಿ ಅಪ್‌ಲೋಡ್‌ ಮಾಡಬೇಕು. ದೇಶದಲ್ಲಿನ ಕಾನೂನಿಗೆ ಗೌರವ ನೀಡಿ ಹೋಂ ಕ್ವಾರಂಟೈನ್‌ ಅಥವಾ ಸ್ವ ನಿಗಾದಲ್ಲಿ ಇರಲು ಬದ್ಧನಾಗಿರುತ್ತೇನೆ ಎಂದು ಒಪ್ಪಿಗೆ ನೀಡಬೇಕು.

ರಾಜ್ಯಕ್ಕೆ ಆಗಮಿಸುವ ವೇಳೆ ರೋಗ ಲಕ್ಷಣಗಳು ಪತ್ತೆಯಾದರೆ ಪರೀಕ್ಷೆ ಮಾಡಿ ಕ್ವಾರಂಟೈನ್‌ ವಿಧಿಸಲಾಗುವುದು. ರೋಗ ಲಕ್ಷಣ ಇಲ್ಲದಿದ್ದರೆ ಸ್ವಯಂ ನಿಗಾದಲ್ಲಿರಲು ಸೂಚಿಸಲಾಗುವುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಏಕಾಏಕಿ ನಿರ್ಬಂಧ: ಪ್ರಯಾಣಿಕರಲ್ಲಿ ಗೊಂದಲ
ರಾಜ್ಯ ಸರ್ಕಾರವು ಏಕಾಏಕಿ ರಾಜ್ಯಕ್ಕೆ ಆಗಮಿಸುವ ಅಂತರಾಷ್ಟ್ರೀಯ ಪ್ರಯಾಣಿಕರ ಮೇಲೆ ನಿರ್ಬಂಧ ವಿಧಿಸಿರುವುದರಿಂದ ವಿಮಾನ ನಿಲ್ದಾಣಗಳಲ್ಲಿ ತೀವ್ರ ಗೊಂದಲದ ಸ್ಥಿತಿ ಉಂಟಾಗಿದೆ. ಅ.25 ರಂದು ಸರ್ಕಾರ ಆದೇಶ ಹೊರಡಿಸಿದ್ದು ಬಹುತೇಕರಿಗೆ ನೂತನ ಮಾರ್ಗಸೂಚಿ ತಲುಪಿಲ್ಲ. ಹೀಗಾಗಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಬಳಿಕ ಮತ್ತೊಮ್ಮೆ ಪರೀಕ್ಷೆಗೆ ಒಳಪಡಬೇಕು ಹಾಗೂ ನೆಗೆಟಿವ್‌ ಬಂದರೂ ಮನೆಯಲ್ಲಿ ಕಡ್ಡಾಯವಾಗಿ ಕ್ವಾರಂಟೈನ್‌ಗೆ ಒಳಗಾಗಬೇಕು ಎಂಬುದನ್ನು ತಿಳಿದು ಪ್ರಯಾಣಿಕರು ಆರೋಗ್ಯ ಇಲಾಖೆ ಹಾಗೂ ವಿಮಾನ ನಿಲ್ದಾಣದ ಸಿಬ್ಬಂದಿ ಜತೆಗೆ ವಾಗ್ವಾದಕ್ಕೆ ಇಳಿದಿದ್ದರು. ಇದರಿಂದ ತೀವ್ರ ಗೊಂದಲ ಸೃಷ್ಟಿಯಾಗಿದೆ.

Follow Us:
Download App:
  • android
  • ios