ಪುರಾತತ್ವ ಸರ್ವೇಕ್ಷಣೆ  ವ್ಯಾಪ್ತಿಗೆ ಬರುವ ದೇಶದ ಐತಿಹಾಸಿಕ ಸ್ಮಾರಕಗಳು, ವಸ್ತು ಸಂಗ್ರಹಾಲಯಗಳು ಸೇರಿದಂತೆ ಇನ್ನಿತರ ಮಹತ್ವದ ಸ್ಥಳಗಳ ಪ್ರವೇಶವನ್ನು ಮೇ 15ರವರೆಗೆ ಬಂದ್‌ ಮಾಡಲಾಗಿದೆ. ದೇಶದಲ್ಲಿ ಕೊರೋನಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗುತ್ತಿದೆ. 

ನವದೆಹಲಿ (ಏ.16): ಭಾರತೀಯ ಪುರಾತತ್ವ ಸರ್ವೇಕ್ಷಣೆ(ಎಎಸ್‌ಐ) ವ್ಯಾಪ್ತಿಗೆ ಬರುವ ದೇಶದ ಐತಿಹಾಸಿಕ ಸ್ಮಾರಕಗಳು, ವಸ್ತು ಸಂಗ್ರಹಾಲಯಗಳು ಸೇರಿದಂತೆ ಇನ್ನಿತರ ಮಹತ್ವದ ಸ್ಥಳಗಳ ಪ್ರವೇಶವನ್ನು ಮೇ 15ರವರೆಗೆ ಬಂದ್‌ ಮಾಡಲಾಗಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

 ದೇಶಾದ್ಯಂತ ಭಾರೀ ವೇಗವಾಗಿ ಹಬ್ಬುತ್ತಿರುವ ಕೋವಿಡ್‌ ನಿಯಂತ್ರಣಕ್ಕಾಗಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಕೇಂದ್ರ ಸಂಸ್ಕೃತಿ ಸಚಿವಾಲಯ ಹೇಳಿದೆ. 

ಅಮೆರಿಕಾ ಮೀರಿಸಿದ ಭಾರತ : ಒಂದೇ ದಿನ ದಾಖಲೆಯಷ್ಟು ಕೇಸ್ ..

ಕಳೆದ ವರ್ಷವೂ ಕೊರೋನಾ ವೈರಸ್‌ ನಿಯಂತ್ರಣಕ್ಕಾಗಿ ತನ್ನ ವ್ಯಾಪ್ತಿಗೆ ಬರುವ ಎಲ್ಲಾ ಐತಿಹಾಸಿಕ ಸ್ಮಾರಕಗಳು, ವಸ್ತು ಸಂಗ್ರಹಾಲಯಗಳಿಗೆ ಜನ-ಸಾಮಾನ್ಯರ ಪ್ರವೇಶವನ್ನು ಭಾರತೀಯ ಪುರಾತತ್ವ ಸರ್ವೇಕ್ಷಣೆ(ಎಎಸ್‌ಐ) ನಿಷೇಧಿಸಿತ್ತು.