ಭಾರತೀಯ CRPF ಯೋಧರ ಮೇಲೆ ನಕ್ಸಲರ ದಾಳಿ ನಡೆದ ಬೆನ್ನಲ್ಲೇ ಇದೀಗ ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮೇಲೆ ಆತ್ಮಾಹುತಿ ದಾಳಿ ನಡೆಸುವ ಕುರಿತು CRPF ಕಚೇರಿಗೆ ಇಮೇಲ್ ಬಂದಿದೆ. ಈ ಕುರಿತ ಹೆಚ್ಚಿನ ವಿವರ ಇಲ್ಲಿದೆ.

ನವದೆಹಲಿ(ಏ.06):  ಮುಂಬೈನ CRPF ಕಚೇರಿಗೆ ಇ ಮೇಲ್ ಸಂದೇಶವೊಂದು ಬಂದಿತ್ತು. ಅನಾಮಿಕ ಸಂದೇಶ ಇದಾಗಿತ್ತು. ಆದರೆ ಇ ಮೇಲ್ ಪರಿಶೀಲಿಸಿದ CRPF ಅಧಿಕಾರಿಗಳು ತಕ್ಷಣವೇ ಅಲರ್ಟ್ ಆಗಿದ್ದಾರೆ. ಕಾರಣ ಈ ಇಮೇಲ್‌ನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮೇಲೆ ಆತ್ಮಾಹುತಿ ದಾಳಿ ಮಾಡುವ ಎಚ್ಚರಿಕೆ ನೀಡಲಾಗಿದೆ.

Add Asianetnews Kannada as a Preferred SourcegooglePreferred

ನಕ್ಸಲ್ ದಾಳಿ ಬೆನ್ನಲ್ಲೇ ಉನ್ನತ ಮಟ್ಟದ ಸಭೆ ನಡೆಸಿದ ಅಮಿತ್ ಶಾ!

ಅಮಿತ್ ಶಾ ಹಾಗೂ ಯೋಗಿ ಆದಿತ್ಯನಾಥ್ ಮೇಲಿನ ಆತ್ಮಾಹುತಿ ದಾಳಿಗೆ 11 ಮಂದಿ ತರಬೇತಿ ಪಡೆದಿದ್ದಾರೆ. ಸೂಕ್ತ ಸ್ಥಳದಲ್ಲಿ ಆತ್ಮಾಹುತಿ ದಾಳಿ ನಡೆಯಲಿದೆ. ಈ ನಾಯಕರ ಮೇಲೆ ಮಾತ್ರವಲ್ಲ, ದೇವಾಲಯಗಳು, ಇತರ ಪ್ರದೇಶದಲ್ಲೂ ಆತ್ಮಾಹುತಿ ದಾಳಿ ನಡೆಯಲಿದೆ ಎಂದು ಇ ಮೇಲ್ ಮೂಲಕ ತಿಳಿಸಲಾಗಿದೆ.

CRPF ಅಧಿಕಾರಿಗಳು ತಕ್ಷಣವೇ ಇ ಮೇಲ್ ಸಂದೇಶದ ಕುರಿತು ಕೇಂದ್ರ ಗೃಹ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಉತ್ತರ ಪ್ರದೇಶಕ್ಕೂ ಮಾಹಿತಿ ನೀಡಲಾಗಿದೆ. ಇದೀಗ ಇ ಮೇಲ್ ಸರ್ವರ್ ಸೇರಿದಂತೆ ಹಲವು ಮಾಹಿತಿಗಳನ್ನು ಕಲೆಹಾಕಲಾಗುತ್ತಿದೆ.

ಚತ್ತೀಸಘಡ ಬಿಜಾಪುರ್ ಅರಣ್ಯ ಪ್ರದೇಶದಲ್ಲಿ CRPF ಯೋಧರ ಮೇಲೆ ದಾಳಿ ನಡೆದ ಬೆನ್ನಲ್ಲೇ ಇದೀಗ ಈ ಸಂದೇಶ CRPF ಕಚೇರಿಗೆ ಬಂದಿರುವುದು ಕೆಲ ಅನುಮಾನಗಳಿಗೆ ಕಾರಣವಾಗಿದೆ.