Asianet Suvarna News Asianet Suvarna News

ರಾಜ್ಯದಲ್ಲಿ ‘ದಲಿತ’ ಪದ ಬಳಕೆ ನಿಷೇಧ

ಕೇಂದ್ರ ಗೃಹ ಸಚಿವಾಲಯ ಹಾಗೂ ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯದ ನಿರ್ದೇಶನದಂತೆ ರಾಜ್ಯದಲ್ಲಿ ಆಡಳಿತ ಭಾಷೆ, ಪತ್ರವ್ಯವಹಾರ, ಪ್ರಮಾಣ ಪತ್ರಗಳಲ್ಲಿ ‘ದಲಿತ’ ಎನ್ನುವ ಪದವನ್ನು ಬಳಸದೇ ಪರಿಶಿಷ್ಟಜಾತಿ/ ಪರಿಶಿಷ್ಟಪಂಗಡ ಎಂದು ಬಳಸುವಂತೆ ಸಮಾಜ ಕಲ್ಯಾಣ ಇಲಾಖೆ ಆದೇಶ ಹೊರಡಿಸಿದೆ.

Dalit word usage prohibited in Karnataka
Author
Bangalore, First Published Jun 5, 2020, 8:53 AM IST

ಬೆಂಗಳೂರು(ಜೂ.05): ಕೇಂದ್ರ ಗೃಹ ಸಚಿವಾಲಯ ಹಾಗೂ ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯದ ನಿರ್ದೇಶನದಂತೆ ರಾಜ್ಯದಲ್ಲಿ ಆಡಳಿತ ಭಾಷೆ, ಪತ್ರವ್ಯವಹಾರ, ಪ್ರಮಾಣ ಪತ್ರಗಳಲ್ಲಿ ‘ದಲಿತ’ ಎನ್ನುವ ಪದವನ್ನು ಬಳಸದೇ ಪರಿಶಿಷ್ಟಜಾತಿ/ ಪರಿಶಿಷ್ಟಪಂಗಡ ಎಂದು ಬಳಸುವಂತೆ ಸಮಾಜ ಕಲ್ಯಾಣ ಇಲಾಖೆ ಆದೇಶ ಹೊರಡಿಸಿದೆ.

ಗುರುವಾರ ಉಪಮುಖ್ಯಮಂತ್ರಿ ಗೋವಿಂದ ಎಂ.ಕಾರಜೋಳ ಅವರು ಈ ವಿಷಯ ತಿಳಿಸಿದ್ದಾರೆ. ‘ಹರಿಜನ’ ಮತ್ತು ‘ಗಿರಿಜನ’ ಎನ್ನುವ ಪದವನ್ನು ಬಳಕೆ ಮಾಡಬಾರದು. ಆಂಗ್ಲ ಭಾಷೆಯಲ್ಲಿ ಎಸ್‌ಸಿ/ಎಸ್‌ಟಿ ಎಂದು ನಮೂದಿಸಬಹುದಾಗಿದೆ.

1 ಕೊರೋನಾ ಇಂಜೆಕ್ಷನ್‌ಗೆ 7000 ರುಪಾಯಿ..!

ಇತರೇ ಭಾಷೆಗಳಲ್ಲಿ ಸೂಕ್ತ ಭಾಷಾಂತರಗೊಳಿಸಿದ ಪದವನ್ನು ಬಳಸಬೇಕು. ರಾಜ್ಯದಲ್ಲಿ ‘ಪರಿಶಿಷ್ಟಜಾತಿ/ಪರಿಶಿಷ್ಟಪಂಗಡ’ ಎಂದು ನಮೂದಿಸಬಹುದು ಎಂದು ತಿಳಿಸಿದ್ದಾರೆ. ಎಸ್‌ಟಿ, ಎಸ್‌ಸಿ ಜನರ ಮೇಲೆ ದೌರ್ಜನ್ಯ, ಜಾತಿ ನಿಂದನೆ ಘಟನೆಗಳೂ ನಡೆಯುತ್ತಲೇ ಇರುತ್ತವೆ.

'ದಲಿತ' ಎನ್ನುವ ಪದ ಬಳಕೆಯ ಮೂಲಕವೇ ಜನರನ್ನು ನಿಂದಿಸುವ ಘಟನೆಯೂ ವರದಿಯಾಗುತ್ತಿರುತ್ತದೆ. ಈ ನಿಟ್ಟಿನಲ್ಲಿ 'ದಲಿತ' ಪದವನ್ನೇ ಬಳಸದಂತೆ ಸೂಚನೆ ಹೊರಡಿಸಿರುವುದು ಮಹತ್ವದ್ದಾಗಿದೆ.

Follow Us:
Download App:
  • android
  • ios