ರಕ್ಷಿಸಿದ ವೈದ್ಯೆ ಸಾವಿಗೆ ನೊಂದು ಕಟ್ಟಡದಿಂದ ಹಾರಿ ನಾಯಿ ಸಾವು| ಉತ್ತರ ಪ್ರದೇಶದ ಕಾನ್ಪುರದಲ್ಲೊಂದು ಕರುಣಾಜನಕ ಘಟನೆ

ಕಾನ್ಪುರ(ಜು.04): ತನ್ನನ್ನು ಕಾಪಾಡಿದ ವ್ಯಕ್ತಿಯೊಬ್ಬರ ಸಾವಿನಿಂದ ನಾಯಿಯೊಂದು ಕಟ್ಟಡದಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಅಚ್ಚರಿ ಮತ್ತು ಅಷ್ಟೇ ಕರುಣಾಜನಕ ಘಟನೆಯೊಂದು ಉತ್ತರಪ್ರದೇಶದ ಕಾನ್ಪುರದಲ್ಲಿ ನಡೆದಿದೆ. ಈ ಕುರಿತ ಸುದ್ದಿಯೊಂದು ಇದೀಗ ಭಾರೀ ವೈರಲ್‌ ಆಗಿದೆ.

Add Asianetnews Kannada as a Preferred SourcegooglePreferred

12 ವರ್ಷಗಳ ಹಿಂದೆ ಕಾನ್ಪುರದ ಡಾ. ಅನಿತಾ ರಾಜ್‌ ಸಿಂಗ್‌ ಅವರು ಕರುಣಾಜನಕ ಸ್ಥಿತಿಯಲ್ಲಿದ್ದ ನಾಯಿಮರಿಯೊಂದನ್ನು ರಕ್ಷಿಸಿದ್ದರು. ಅದನ್ನು ಮನೆಗೆ ತಂದು ಸಾಕಿ, ಅದಕ್ಕೆ ಜಯಾ ಎಂದು ಹೆಸರಿಟ್ಟು ಮನೆಯ ಸದಸ್ಯೆಯಂತೆಯೇ ನೋಡಿಕೊಳ್ಳುತ್ತಿದ್ದರು. ಈ ನಡುವೆ ಇತ್ತೀಚೆಗೆ ಅನಿತಾ ಅನಾರೋಗ್ಯದಿಂದ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದರು.

ಕಾಡುಬೆಕ್ಕುಗಳ ಸರಣಿ ಸಾವು: ಶುರುವಾಯ್ತು ಹೊಸ ಆತಂಕ

ಅವರ ದೇಹವನ್ನು ಮನೆಗೆ ಕರೆತರುತ್ತಲೇ, ನಾಯಿಯು ಜೋರಾಗಿ ಬೊಗಳಲು ಆರಂಭಿಸಿತಂತೆ. ಬಳಿಕ ಮನೆಯ ಮೆಟ್ಟಿಲುಗಳನ್ನು ಹತ್ತಿ ಕಟ್ಟಡದ ಮೇಲೆ ಹೋಗಿ ಅಲ್ಲಿಂದ ಬಿದ್ದು ಸಾವನ್ನಪ್ಪಿತು. ಶ್ವಾನವನ್ನು ತಕ್ಷಣವೇ ಕರೆದೊಯ್ಯಲಾಯಿತಾದರೂ, ಅದು ಸಾವನ್ನಪ್ಪಿತು ಎಂದು ಅನಿತಾರ ಪುತ್ರ ತಿಳಿಸಿದ್ದಾರೆ. ಅಲ್ಲದೆ, ಅಮ್ಮನ ಅಂತ್ಯಸಂಸ್ಕಾರದ ಬಳಿಕ ಶ್ವಾನವನ್ನೂ ಮನೆಯ ಬಳಿ ಅಂತ್ಯಕ್ರಿಯೆ ನೆರವೇರಿಸಿದ್ದೇವೆ ಎಂದು ಅನಿತಾ ಅವರ ಮಗ ತೇಜಸ್‌ ಹೇಳಿದ್ದಾರೆ.