ಕೆಲ ದಿನಗಳ ಹಿಂದಷ್ಟೇ ರಾಜ್ಯದಲ್ಲಿನ ಆರ್ಥಿಕ ಪರಿಸ್ಥಿತಿಯ ಸಂಕಷ್ಟ ಬಿಚ್ಚಿಟ್ಟಿದ್ದ ಮುಖ್ಯಮಂತ್ರಿ ಸುಖವಿಂದರ್‌ ಸಿಂಗ್‌ ಸುಖು, ತಾವೂ, ತಮ್ಮ ಸಚಿವ ಸಂಪುಟದ ಸದಸ್ಯರು, ನಿಗಮ ಮಂಡಳಿ ಸದಸ್ಯರು ತಮ್ಮ ವೇತನವನ್ನು 2 ತಿಂಗಳು ವಿಳಂಬವಾಗಿ ಸ್ವೀಕರಿಸುವುದಾಗಿ ಹೇಳಿದ್ದರು. ಅದರ ಬೆನ್ನಲ್ಲೇ ಆರ್ಥಿಕ ಸಂಕಷ್ಟದ ಬಿಸಿ ಅಧಿಕಾರಿಗಳಿಗೂ ತಟ್ಟಿದೆ.

ಶಿಮ್ಲಾ(ಸೆ. 04): ಅನೇಕ ಉಚಿತ ಕೊಡುಗೆಗಳ ಘೋಷಣೆಯ ಕಾರಣ ಆರ್ಥಿಕ ಬಿಕ್ಕಟ್ಟಿಗೆ ಸಿಕ್ಕಿಬಿದ್ದಿರುವ ಹಿಮಾಚಲಪ್ರದೇಶದಲ್ಲಿ ಇದೀಗ ಸರ್ಕಾರಿ ನೌಕರರ ವೇತನ ಪಾವತಿಯಲ್ಲೂ ವಿಳಂಬ ಕಂಡುಬಂದಿದೆ. ಸಾಮಾನ್ಯವಾಗಿ ಪ್ರತಿ ತಿಂಗಳ ಮೊದಲ ದಿನವೇ ಸರ್ಕಾರಿ ನೌಕರರಿಗೆ ವೇತನ ಪಾವತಿಯಾಗುತ್ತಿತ್ತು. ಆದರೆ ಆಗಸ್ಟ್‌ ತಿಂಗಳ ವೇತನ ಇನ್ನೂ ಅಧಿಕಾರಿಗಳ ಕೈ ಸೇರಿಲ್ಲ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಕೆಲ ದಿನಗಳ ಹಿಂದಷ್ಟೇ ರಾಜ್ಯದಲ್ಲಿನ ಆರ್ಥಿಕ ಪರಿಸ್ಥಿತಿಯ ಸಂಕಷ್ಟ ಬಿಚ್ಚಿಟ್ಟಿದ್ದ ಮುಖ್ಯಮಂತ್ರಿ ಸುಖವಿಂದರ್‌ ಸಿಂಗ್‌ ಸುಖು, ತಾವೂ, ತಮ್ಮ ಸಚಿವ ಸಂಪುಟದ ಸದಸ್ಯರು, ನಿಗಮ ಮಂಡಳಿ ಸದಸ್ಯರು ತಮ್ಮ ವೇತನವನ್ನು 2 ತಿಂಗಳು ವಿಳಂಬವಾಗಿ ಸ್ವೀಕರಿಸುವುದಾಗಿ ಹೇಳಿದ್ದರು. ಅದರ ಬೆನ್ನಲ್ಲೇ ಆರ್ಥಿಕ ಸಂಕಷ್ಟದ ಬಿಸಿ ಅಧಿಕಾರಿಗಳಿಗೂ ತಟ್ಟಿದೆ.

ಗ್ಯಾರಂಟಿಗಳ ಜಾರಿ ಮಾಡಿದ್ದ ಹಿಮಾಚಲಕ್ಕೆ ಆರ್ಥಿಕ ಸಂಕಷ್ಟ: ಸಂಬಳ ಪಡೆಯದಿರಲು ಸಿಎಂ, ಸಚಿವರ ನಿರ್ಧಾರ

ಭಾನುವಾರವಷ್ಟೇ ಮಾತನಾಡಿದ್ದ ಸುಖು, ಹಣಕಾಸಿನ ಕೊರತೆಗೆ ಬಿಜೆಪಿ ಅಧಿಕಾರದಲ್ಲಿ ಆರಂಭಿಸಿದ ಉಚಿತ ಯೋಚನೆಗಳೇ ಕಾರಣ’ ಎಂದಿದ್ದರು.