ಬಂಗಾಳದಲ್ಲಿ ಬಿಜೆಪಿಗೆ ಅಧಿಕಾರ ಬಾಂಗ್ಲಾದೇಶ, ಪಾಕಿಸ್ತಾನದ ಕೆಲ ಉಗ್ರ ಸಂಘಟನೆಗಳನ್ನು ಕೆರಳಿಸಿದೆ. ಈ ಗೆಲುವಿನ ಬೆನ್ನಲ್ಲೇ ದೆಹಲಿ ಬಿಜೆಪಿ ಪ್ರಧಾನ ಕಚೇರಿ ಮೇಲೆ ಉಗ್ರರ ದಾಳಿ ಸಾಧ್ಯತೆಯನ್ನು ಗುಪ್ತಚರ ಇಲಾಖೆ ನೀಡಿದೆ. 

ನವದೆಹಲಿ (ಮೇ.09) ಪಂಚ ರಾಜ್ಯ ಚುನಾವಣೆಯಲ್ಲಿ ಬಿಜೆಪಿ ಮತ್ತಷ್ಟು ಬಲಿಷ್ಠವಾಗಿದೆ. ಅದರಲ್ಲೂ ಪ್ರಮುಖವಾಗಿ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಅಧಿಕಾರಕ್ಕೇರಿದೆ. ಹಿಂದುತ್ವ ಮತಗಳು ಧ್ರುವಿಕರಣಗೊಂಡು ಮಮತಾ ಬ್ಯಾನರ್ಜಿ ಸರ್ಕಾರವನ್ನು ಮತದಾರರು ಕಿತ್ತೆಸೆದಿದ್ದಾರೆ. ಬಂಗಾಳದಲ್ಲಿ ಬಿಜೆಪಿ ಸರ್ಕಾರ ರಚನೆಯಾಗಿರುವುದು ಬಾಂಗ್ಲಾದೇಶ, ಪಾಕಿಸ್ತಾನದಲ್ಲೂ ಅಸಮಾಧಾನಕ್ಕೆ ಕಾರಣಾಗಿದೆ. ಈ ಎಲ್ಲಾ ಬೆಳವಣಿಗೆ ನಡುವೆ ದೆಹಲಿಯಲ್ಲಿ ಬಿಜೆಪಿ ಪ್ರಧಾನ ಕಚೇರಿ ಮೇಲೆ ಉಗ್ರ ದಾಳಿ ಆತಂಕ ಎದುರಾಗಿದೆ. ಗುಪ್ತಚರ ಇಲಾಖೆ ಅಧಿಕಾರಿಗಳು ಬಿಜೆಪಿ ಕಚೇರಿ ಸೇರಿದಂತೆ ದೆಹಲ ಕೆಲ ಪ್ರಮುಖ ಸ್ಥಳಗಳ ಮೇಲೆ ಉಗ್ರರ ದಾಳಿ ಆತಂಕದ ಸೂಚನೆ ನೀಡಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಐಇಡಿ, ಕಾರು ಬಾಂಬ್, ಉಗ್ರ ದಾಳಿ

ಬಿಜೆಪಿ ಕಚೇರಿ ಹಾಗೂ ಇತರ ಕೆಲವೆಡೆ ಉಗ್ರರು ದಾಳಿಗೆ ಸಜ್ಜಾಗಿದ್ದಾರೆ. ಐಇಡಿ ಬಾಂಬ್ ದಾಳಿ, ಕಾರು ಬಾಂಬ್, ಆತ್ಮಾ*ಹುತಿ ದಾಳಿ, ಶೂಟೌಟ್ ರೀತಿಯಲ್ಲಿ ದಾಳಿ ನಡೆಸಲು ಉಗ್ರರು ಸಜ್ಜಾಗಿದ್ದಾರೆ ಎಂಬ ಮಾಹಿತಿಯನ್ನು ಗುಪ್ತಚರ ಇಲಾಖೆ ನೀಡಿದೆ.

ದೆಹಲಿಯಲ್ಲಿ ಭದ್ರತೆ ಹೆಚ್ಚಿಸಿದ ಸರ್ಕಾರ

ದೆಹಲಿಯಲ್ಲಿ ಉಗ್ರರ ದಾಳಿ ಎಚ್ಚರಿಕೆ ನೀಡಿದ ಬೆನ್ನಲ್ಲೇ ಸರ್ಕಾರ ಭದ್ರತೆ ಹೆಚ್ಚಿಸಿದೆ. ದೆಹಲಿಯ ಎಲ್ಲೆಡೆ ಭದ್ರತೆ ಹಾಗೂ ತಪಾಸಣೆ ನಡೆಯುತ್ತಿದೆ. ಪ್ಯಾರಾಮಿಲಿಟರಿ ಸೇರಿದಂತೆ ಹಲವು ಭದ್ರಾತಾ ಎಜೆನ್ಸಿಗಳ ನಿಯೋಜನೆ ಮಾಡಲಾಗಿದೆ. ಪೊಲೀಸ್ ಸರ್ಪಗಾವಲು ಹಾಕಲಾಗಿದೆ.

ದೆಹಲಿ ಬಿಜೆಪಿ ಕಚೇರಿ ಜೊತೆಗೆ ಕೆಲ ಸರ್ಕಾರಿ ಕಚೇರಿಗಳು ಉಗ್ರರ ಟಾರ್ಗೆಟ್ ಲಿಸ್ಟ್‌ನಲ್ಲಿದೆ ಅನ್ನೋ ಮಾಹಿತಿಯನ್ನು ಇಂಟಲಿಜೆನ್ಸ್ ನೀಡಿದೆ. ಈ ಮಾಹಿತಿಗಳ ಆಧಾರದಲ್ಲಿ ದೆಹಲಿಯಲ್ಲಿ ಕಟ್ಟೆಚ್ಚರ ವಹಿಸಲು ಸೂಚಿಸಲಾಗಿದೆ. ಇತ್ತ ದೆಹಲಿ ಮಾತ್ರವಲ್ಲ ಇದೀಗ ಕೇಂದ್ರ ಸರ್ಕಾರ ಇತರ ಕೆಲ ನಗರಗಳಲ್ಲೂ ಎಚ್ಚರಿಕೆ ವಹಿಸಲು ಸೂಚಿಸಲಾಗಿದೆ. ಇದೇ ವೇಳೆ ಪಶ್ಚಿಮ ಬಂಗಾಳದಲ್ಲಿ ತೀವ್ರ ನಿಗಾವಹಿಸಲು ಸೂಚನೆ ನೀಡಲಾಗಿದೆ. ಪಶ್ಚಿಮ ಬಂಗಾಳ ಹಾಗೂ ಬಾಂಗ್ಲಾದೇಶ ಗಡಿಯಲ್ಲಿ ತೀವ್ರ ಕಟ್ಟೆಚ್ಚರ ವಹಿಸಲಾಗುತ್ತಿದೆ.