Asianet Suvarna News Asianet Suvarna News

ಬಂಧನಕ್ಕೂ ಮುನ್ನವೇ ಇನ್ಸುಲಿನ್‌ ಪಡೆಯುವುದು ನಿಲ್ಲಿಸಿದ್ದ ದೆಹಲಿ ಸಿಎಂ ಕೇಜ್ರಿವಾಲ್

ಮಧುಮೇಹ ನಿಯಂತ್ರಣಕ್ಕೆ ಮೌಖಿಕ ಔಷಧಗಳನ್ನು ಬಳಸುತ್ತಿದ್ದಾರೆ ಜೊತೆಗೆ ಕೇಜ್ರವಾಲ್‌ರಿಗೆ ಇನ್ಸುಲಿನ್ ಅಗತ್ಯವಿಲ್ಲವೆಂದು ತಿಳಿಸಿದ ವೈದ್ಯರು 

Delhi CM Arvind Kejriwal had stopped taking Insulin before Arrest grg
Author
First Published Apr 21, 2024, 1:10 PM IST

ನವದೆಹಲಿ(ಏ.21):  ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ತಮ್ಮ ಬಂಧನಕ್ಕೂ ಮೊದಲೇ ಮಧುಮೇಹಕ್ಕೆ ಬಳಸುವ ಇನ್ನುಲಿನ್‌ ಪಡೆಯುವುದನ್ನು ನಿಲ್ಲಿಸಿದ್ದರು ಎಂದು ಜೈಲಧಿಕಾರಿಗಳು ದೆಹಲಿಯ ಲೆಫ್ಟಿನೆಂಟ್ ಗವರನರ್‌ಗೆ ಮಾಹಿತಿ ನೀಡಿದ್ದಾರೆ. 

ಕೇಜ್ರಿವಾಲ್ ರಕ್ತದಲ್ಲಿ ಸಕ್ಕರೆ ಅಂಶ ಹೆಚ್ಚಾಗಿದ್ದರೂ ಅವರಿಗೆ ಇನ್ಸುಲಿನ್ ನೀಡದೇ ಹತ್ಯೆಗೆ ಸಂಚು ರೂಪಿಸಲಾಗಿದೆ ಎಂಬ ಆಮ್ ಆದ್ಮ ಪಕ್ಷದ ನಾಯಕರ ಆರೋಪದ ಹಿನ್ನೆಲೆಯಲ್ಲಿ ಈ ಕುರಿತು 24 ಗಂಟೆಗಳಲ್ಲಿ ವರದಿ ನೀಡುವಂತೆ ಲೆಫ್ಟಿನೆಂಟ್ ಗವರ್ನರ್ ಸೂಚಿಸಿದ್ದರು. ಈ ಹಿನ್ನೆಲೆಯಲ್ಲಿ ವರದಿ ಸಲ್ಲಿಸಿರುವ ಅಧಿಕಾರಿಗಳು, ಬಂಧನಕ್ಕೂತಿಂಗಳ ಮೊದಲೇ ಕೇಬ್ರಿವಾಲ್ ಇನ್ಸುಲಿನ್ ತೆಗೆದುಕೊಳ್ಳುವುದನ್ನು ನಿಲ್ಲಿಸಿದ್ದರು. 

ಜೈಲಿನಲ್ಲೇ ಅರವಿಂದ್ ಕೇಜ್ರಿವಾಲ್‌ ಹತ್ಯೆಗೆ ಸಂಚು: ಆಪ್‌ ಆರೋಪ

ಮಧುಮೇಹ ನಿಯಂತ್ರಣಕ್ಕೆ ಮೌಖಿಕ ಔಷಧಗಳನ್ನು ಬಳಸುತ್ತಿದ್ದಾರೆಂದು ತಿಳಿಸಿದ್ದಾರೆ. ಜೊತೆಗೆ ಕೇಜ್ರವಾಲ್‌ರಿಗೆ ಇನ್ಸುಲಿನ್ ಅಗತ್ಯವಿಲ್ಲವೆಂದು ವೈದ್ಯರು ತಿಳಿಸಿದ್ದಾರೆ ಎಂದು ಉಲ್ಲೇಖಿಸಿದ್ದಾರೆ.

Follow Us:
Download App:
  • android
  • ios