ಸಾಮಾಜಿಕ ಕಾರ್ಯಕರ್ತೆ ಹಾಗೂ ನರ್ಮದಾ ಬಚಾವೋ ಆಂದೋಲನದ ನಾಯಕಿ ಮೇಧಾ ಪಾಟ್ಕರ್ ಅವರನ್ನು ಮಾನಹಾನಿ ಪ್ರಕರಣದಲ್ಲಿ ದಿಲ್ಲಿ ನ್ಯಾಯಾಲಯ ದೋಷಿ ಎಂದು ಘೋಷಿಸಿದೆ.

ನವದೆಹಲಿ: ಸಾಮಾಜಿಕ ಕಾರ್ಯಕರ್ತೆ ಹಾಗೂ ನರ್ಮದಾ ಬಚಾವೋ ಆಂದೋಲನದ ನಾಯಕಿ ಮೇಧಾ ಪಾಟ್ಕರ್ ಅವರನ್ನು ಮಾನಹಾನಿ ಪ್ರಕರಣದಲ್ಲಿ ದಿಲ್ಲಿ ನ್ಯಾಯಾಲಯ ದೋಷಿ ಎಂದು ಘೋಷಿಸಿದೆ.

Add Asianetnews Kannada as a Preferred SourcegooglePreferred

2000ನೇ ಇಸವಿಯಲ್ಲಿ ಎನ್‌ಜಿಒ ಒಂದರ ಮುಖ್ಯಸ್ಥರಾಗಿದ್ದ ಈಗಿನ ದೆಹಲಿ ಲೆಫ್ಟಿನೆಂಟ್‌ ಗೌರ್ನರ್‌ (ಉಪರಾಜ್ಯಪಾಲ) ವಿ.ಕೆ. ಸಕ್ಸೇನಾ ಅವರು ಹಾಕಿದ್ದ ಮಾನಹಾನಿ ದಾವೆ ಇದಾಗಿತ್ತು. ಆದೇಶ ಪ್ರಕಟಿಸಿದ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ರಾಘವ್ ಶರ್ಮಾ, ಮೇಧಾಗೆ ಶಿಕ್ಷೆಯನ್ನು ಇನ್ನೂ ಪ್ರಕಟಿಸಿಲ್ಲ. 2 ವರ್ಷ ಜೈಲು ಶಿಕ್ಷೆ ಹಾಗೂ ದಂಡಕ್ಕೆ ಅವರು ಗುರಿಯಾಗುವ ಸಾಧ್ಯತೆ ಇದೆ.

‘2047ರವರೆಗೂ ದೇವರು ನನ್ನನ್ನು ಕರೆಸಿಕೊಳ್ಳಲ್ಲ’ : ಪ್ರಧಾನಿ ಮೋದಿ

ಏನಿದು ಪ್ರಕರಣ?:

2000 ಇಸವಿಯಲ್ಲಿ ಸಕ್ಸೇನಾ ಅವರ ಸಂಸ್ಥೆಯು ಟೀವಿ ಚಾನೆಲ್‌ ಹಾಗೂ ಪತ್ರಿಕೆಗಳಿಗೆ ಸಕ್ಸೇನಾ ಅವರ ನರ್ಮದಾ ಬಚಾವೋ ಆಂದೋಲನದ ವಿರುದ್ಧ ಜಾಹೀರಾತು ಪ್ರಕಟಿಸಿತ್ತು. ಆಗ ಪಾಟ್ಕರ್‌ ಅವರು ತಮ್ಮ ವಿರುದ್ಧ ಮಾನಹಾನಿ ಹೇಳಿಕೆ ನೀಡಿದ್ದರು ಎಂದು ಆಪಾದಿಸಿ ಸಕ್ಸೇನಾ ಮೊಕದ್ದಮೆ ದಾಖಲಿಸಿದ್ದರು