ಪ್ರಚೋದಕ ರಾಜಕಾರಣಿಗಳ ಮೇಲೆ ಎಫ್‌ಐಆರ್‌: ನಾಳೆ ಸುಪ್ರೀಂ ವಿಚಾರಣೆ | ಗಲಭೆ ತಡೆಯುವುದು ಸರ್ಕಾರದ ಕೆಲಸ | ನಾವು ಆ ಕೆಲಸ ಮಾಡಲು ಶಕ್ತರಾಗಿಲ್ಲ: ಕೋರ್ಟ್‌

ನವದೆಹಲಿ ( ಮಾ. 03): ಪ್ರಚೋದಕ ಭಾಷಣ ಮಾಡಿ ದಿಲ್ಲಿ ಗಲಭೆಗೆ ಕಾರಣರಾದ ರಾಜಕಾರಣಿಗಳ ಮೇಲೆ ಎಫ್‌ಐಆರ್‌ ದಾಖಲಿಸಬೇಕು ಎಂದು ಕೋರಲಾದ ಅರ್ಜಿಯನ್ನು ಮಾರ್ಚ್ 04 ರಂದು ವಿಚಾರಣೆ ನಡೆಸಲು ಸರ್ವೋಚ್ಚ ನ್ಯಾಯಾಲಯ ನಿರ್ಧರಿಸಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

200 ರೂ.ನಿಂದ 10 ರೂಪಾಯಿಗಿಳಿದ ಈರುಳ್ಳಿ ಬೆಲೆ, ರಫ್ತಿಗೆ ಅವಕಾಶ

ಗಲಭೆಯ ಸಂತ್ರಸ್ತರು ಈ ಅರ್ಜಿ ಸಲ್ಲಿಸಿ, ತುರ್ತು ವಿಚಾರಣೆಗೆ ಕೋರಿದ್ದರು. ಇದನ್ನು ಕೈಗೆತ್ತಿಕೊಂಡ ಮುಖ್ಯ ನ್ಯಾಯಾಧೀಶ ನ್ಯಾ ಎಸ್‌.ಎ. ಬೋಬ್ಡೆ ಅವರ ಪೀಠ ಬುಧವಾರ ವಿಚಾರಣೆ ನಡೆಸುವುದಾಗಿ ಹೇಳಿತು. ಈ ವೇಳೆ ಅರ್ಜಿದಾರರ ಪರ ವಾದಿಸಿದ ಹಿರಿಯ ವಕೀಲ ಕಾಲಿನ್‌ ಗೊನ್ಸಾಲಿಸ್‌, ‘ಜನರು ಸಾಯುತ್ತಿದ್ದಾರೆ.

ಆದರೂ ಹಿಂಸೆಗೆ ಸಂಬಂಧಿಸಿದ ಅರ್ಜಿಗಳನ್ನು ದಿಲ್ಲಿ ಹೈಕೋರ್ಟ್‌ 4 ವಾರ ಮುಂದೂಡಿದೆ’ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ‘ಹಿಂಸೆ ತಡೆಯುವುದು ಸರ್ಕಾರದ ಕೆಲಸ. ಕೋರ್ಟ್‌ಗಳು ಹಿಂಸೆ ತಡೆಗೆ ಸನ್ನದ್ಧವಾಗಿಲ್ಲ. ನಾವು ಶಾಂತಿ ಬಯಸುತ್ತೇವೆ. ಆದರೆ ನಮಗೂ ಇತಿಮಿತಿ ಇದೆ’ ಎಂದಿತು.