ವಯನಾಡ್‌ ಭೂಕುಸಿತದ ವೇಳೆ ಕರ್ನಾಟಕ ಕಾಂಗ್ರೆಸ್‌ ಕಳಿಸಿಕೊಟ್ಟಿದ್ದ ರೇಷನ್‌ ಕಿಟ್‌ಅನ್ನು ವಯನಾಡ್‌ನ ಲೋಕಸಭಾ ಕ್ಷೇತ್ರದ ಉಪಚುನಾವಣೆಯ ವೇಳೆ ಸ್ಥಳೀಯ ಕಾಂಗ್ರೆಸ್‌ ಹಂಚಿಕೆ ಮಾಡುತ್ತಿರುವ ಆರೋಪ ಕೇಳಿ ಬಂದಿದೆ.

ಬೆಂಗಳೂರು (ನ.7): ವಯನಾಡ್‌ ಭೂಕುಸಿತದ ವೇಳೆ ರಾಷ್ಟ್ರವ್ಯಾಪಿಯಿಂದ ಕೇರಳಕ್ಕೆ ನೆರವು ಹರಿದುಬಂದಿದ್ದವು. ಈ ವೇಳೆ ಕರ್ನಾಟಕ ಕಾಂಗ್ರೆಸ್‌ ಕೂಡ ಸಾಕಷ್ಟು ರೇಷನ್‌ ಕಿಟ್‌ಗಳನ್ನು ವಯನಾಡ್‌ಗೆ ಕಳಿಸಿಕೊಟ್ಟಿತ್ತು. ಅದರಲ್ಲಿ ಉಳಿದಿದ್ದ ಕೆಲವು ರೇಷನ್‌ ಕಿಟ್‌ಗಳನ್ನು ವಯನಾಡ್‌ ಲೋಕಸಭಾ ಕ್ಷೇತ್ರದ ಉಪಚುನಾವಣೆಯ ವೇಳೆ ಸ್ಥಳೀಯ ಕಾಂಗ್ರೆಸ್‌ ಹಂಚಿಕೆ ಮಾಡುತ್ತಿದೆ ಎನ್ನುವ ಆರೋಪ ಕೇಳಿ ಬಂದಿದೆ. ಅದಲ್ಲದೆ, ವಯನಾಡ್​​ ಲೋಕಸಭಾ ಕ್ಷೇತ್ರಕ್ಕೆ ಕರ್ನಾಟಕದ ಆಹಾರ ಕಿಟ್ ಹಂಚಿಕೆಯಾಗುತ್ತಿರುವ ಆರೋಪವನ್ನೂ ಮಾಡಲಾಗಿದೆ. ರಾಹುಲ್​, ಪ್ರಿಯಾಂಕಾ, ಸಿದ್ದರಾಮಯ್ಯ, ಡಿಕೆಶಿ ಚಿತ್ರವಿರುವ ಆಹಾರ ಕಿಟ್​ಅನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್​, ರಾಹುಲ್​, ಪ್ರಿಯಾಂಕಾ ಗಾಂಧಿ ಚಿತ್ರವಿರುವ ಆಹಾರ ಕಿಟ್​ ವಶಕ್ಕೆ ಪಡೆದುಕೊಳ್ಳಲಾಗಿದೆ. ಆಹಾರ ಕಿಟ್ ಸಂಗ್ರಹಿಸಿದ್ದ ಮನೆ ಮೇಲೆ ಪೊಲೀಸರು ದಾಳಿ ಮಾಡಿ ಕಿಟ್ಅನ್ನು ತೆಗೆದುಕೊಂಡಿದ್ದಾರೆ. ವಯನಾಡ್‌ನ ತೊಲ್ಪೆಟ್ಟಿಯಲ್ಲಿ ಚುನಾವಣಾ ಫ್ಲೈಯಿಂಗ್ ಸ್ಕ್ವಾಡ್ ರೇಷನ್‌ ಕಿಟ್‌ ಪಡೆದುಕೊಂಡಿದೆ.

ವಯನಾಡ್‌ನ ಭೂಕುಸಿತ ಸಂತ್ರಸ್ಥರಿಗೆ ನೀಡಬೇಕಾಗಿದ್ದ ಕಿಟ್‌ಗಳನ್ನು ಮತದಾರರಿಗೆ ನೀಡಲು ಇದನ್ನು ಸಿದ್ದಮಾಡಿಕೊಳ್ಳಲಾಗಿತ್ತು. ಕಾಂಗ್ರೆಸ್ ಮುಖಂಡ ಶಶಿಕುಮಾರ್ ತೋಳ್ಪೆಟ್ಟಿ ಅವರ ಮನೆಯ ಪಕ್ಕದ ಕೊಠಡಿಯಲ್ಲಿ ಈ ಕಿಟ್‌ಗಳನ್ನು ಇರಿಸಲಾಗಿತ್ತು. ಸುಮಾರು 30 ಆಹಾರ ಕಿಟ್‌ಗಳನ್ನು ಚುನಾವಣಾಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ರೇಷನ್ ಕಿಟ್‌ಗಳ ಮೇಲೆ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಕರ್ನಾಟಕ ಸಿಎಂ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್​ ಫೋಟೋ ಇದೆ. ಅಲ್ಲದೇ ಭೂಕುಸಿತ ಸಂತ್ರಸ್ಥರಿಗೆ ಎಂದೂ ಇದರಲ್ಲಿ ಬರೆಯಲಾಗಿದೆ.

Add Asianetnews Kannada as a Preferred SourcegooglePreferred

ಮೋದಿ ಬಗ್ಗೆ ವಯನಾಡ್‌ ಚುನಾವಣಾ ಪ್ರಚಾರ ವೇಳೆ ರಾಹುಲ್ ಗಾಂಧಿ ಅಚ್ಚರಿ ಹೇಳಿಕೆ

ಮೆಪ್ಪಾಡಿ, ಮುಂಡಕೈ ಮತ್ತು ಚೂರ್ಲಮಾಲ ಸಂತ್ರಸ್ತರಿಗೆ ವಿತರಿಸಲು ಕರ್ನಾಟಕ ಕಾಂಗ್ರೆಸ್‌ ಈ ಕಿಟ್‌ಅನ್ನು ಕಳಿಸಿಕೊಟ್ಟಿತ್ತು. ಕಿಟ್​ ಮೇಲೆ ಭೂಕುಸಿತ ಸಂತ್ರಸ್ತರಿಗೆ ಎಂದು ಕೂಡ ಬರೆಯಲಾಗಿದೆ. ಸಂತ್ರಸ್ತರಿಗೆ ಹಂಚಿಕೆಯಾಗಬೇಕಿದ್ದ ಕಿಟ್ ಚುನಾವಣೆಗೆ ಬಳಕೆಯಾಗಿರುವ ಅನುಮಾನ ವ್ಯಕ್ತವಾಗಿದೆ. ಇವು ಕರ್ನಾಟಕದಿಂದ ಕಳಿಸಲಾಗಿರುವ ಆಹಾರ ಕಿಟ್ ಗಳು ಎಂಬ ಅನುಮಾನ ಕೂಡ ಬಂದಿದೆ.

1.15 ಕೋಟಿ ಮೌಲ್ಯದ ಚಿನ್ನ, 12 ಕೋಟಿ ಆಸ್ತಿ, ಶಿಮ್ಲಾದಲ್ಲಿ ಬಂಗಲೆ: ಇದು ಪ್ರಿಯಾಂಕಾ ವಾದ್ರಾ ಆಸ್ತಿ