Asianet Suvarna News Asianet Suvarna News

ಖಲಿಸ್ತಾನಿಗಳಿಗೆ ಸ್ಥಳ ನೀಡ್ಬೇಡಿ, ಆಪ್ತ ದೇಶಗಳಿಗೆ ಭಾರತದ ಮನವಿ!

ಆಪ್ತದೇಶಗಳಾದ ಅಮೆರಿಕ, ಇಂಗ್ಲೆಂಡ್‌, ಆಸ್ಟ್ರೇಲಿಯಾ ಹಾಗೂ ಕೆನಡಾ ದೇಶಗಳಿಗೆ ಭಾರತ ಮನವಿ ಮಾಡಿದ್ದು, ಯಾವುದೇ ಕಾರಣಕ್ಕೂ ಖಲಿಸ್ತಾನಿಗಳಿಗೆ ನಿಮ್ಮ ನೆಲವನ್ನು ನೀಡಬೇಡಿ ಎಂದಿದೆ. ಕೆನಡಾದಲ್ಲಿ ಭಾರತೀಯ ರಾಜತಾಂತ್ರಿಕ ಅಧಿಕಾರಿಗಳಿಗೆ ಬೆದರಿಕೆ ಬಂದ ಹಿನ್ನಲೆಯಲ್ಲಿ ಈ ಮನವಿ ಮಾಡಲಾಗಿದೆ.

Dont Give Space To Khalistanis External Affairs Minister S Jaishankar To Partner Countries san
Author
First Published Jul 3, 2023, 4:05 PM IST

ನವದೆಹಲಿ (ಜು.3): ಯಾವುದೇ ಕಾರಣಕ್ಕೂ ಖಲಿಸ್ತಾನಿ ಭಯೋತ್ಪಾದಕರು ನಿಮ್ಮ ನೆಲವನ್ನು ಬಳಸಲು ಅವಕಾಶ ನೀಡಬೇಡಿ ಎಂದು ಭಾರತ ತನ್ನ ಪಾಲುದಾರ ರಾಷ್ಟ್ರಗಳಾದ ಅಮೆರಿಕ, ಇಂಗ್ಲೆಂಡ್‌, ಆಸ್ಟ್ರೇಲಿಯಾ ಮತ್ತು ಕೆನಡಾ ದೇಶಗಳಿಗೆ ಮನವಿ ಮಾಡಿದೆ. ಈ ಕುರಿತಾಗಿ ವಿದೇಶಾಂಗ ವ್ಯವಹಾರಗಳ ಸಚಿವ ಎಸ್‌.ಜೈಶಂಕರ್‌ ಸೋಮವಾರ ಮಾಹಿತಿ ನೀಡಿದ್ದಾರ. ಹಾಗೇನಾದರೂ ಖಲಿಸ್ತಾನಿಗಳು ನಿಮ್ಮ ನೆಲದಿಂದ ಕಾರ್ಯನಿರ್ವಹಿಸುತ್ತಿದ್ದರೆ, ಇದು ನಮ್ಮ ಸಂಬಂಧಗಳ ಮೇಲೆ ಪರಿಣಾಮ ಬೀರುತ್ತದೆ. ನಾವು ಈ ದೇಶಗಳ ಸರ್ಕಾರದೊಂದಿಗೆ ಪೋಸ್ಟರ್‌ಗಳನ್ನು ಅಂಟಿಸಿರುವ ವಿಷಯವನ್ನು ಪ್ರಸ್ತಾಪ ಮಾಡುತ್ತೇವೆ ಎಂದು ಅವರು ಹೇಳಿದ್ದಾರೆ. ಕೆನಡಾದಲ್ಲಿ ಖಲಿಸ್ತಾನಿಗಳು ಭಾರತೀಯ ರಾಜತಾಂತ್ರಿಕರ ಹೆಸರುಗಳ  ಪೋಸ್ಟರ್‌ಗಳನ್ನು ಅಂಟಿಸಿರುವ ವಿಷಯಕ್ಕೆ ಜೈಶಂಕರ್ ಪ್ರತಿಕ್ರಿಯಿಸಿದರು. ಜೈಶಂಕರ್ ಅವರು ಖಲಿಸ್ತಾನಿಗಳ ಆಮೂಲಾಗ್ರ ಮನಸ್ಥಿತಿಯು ಭಾರತ ಮತ್ತು ಅವರು ವಾಸ ಮಾಡುತ್ತಿರುವ ಪಾಲುದಾರ ದೇಶಗಳಿಗೆ ಹಾನಿಕಾರಕವಾಗಿದೆ ಎಂದು ಹೇಳಿದ್ದಾರೆ. ಇಂತಹ ಉಗ್ರಗಾಮಿ ಮನಸ್ಥಿತಿ ನಮ್ಮ ದ್ವಿಪಕ್ಷೀಯ ಸಂಬಂಧಗಳಿಗೆ ಧಕ್ಕೆ ತರುತ್ತದೆ ಎಂದರು. ಜುಲೈ 8 ರಂದು ನಡೆಯಲಿರುವ ಮೆರವಣಿಗೆಯ ಕುರಿತಾಗಿ ಖಲಿಸ್ತಾನ್ ಪರ ವ್ಯಕ್ತಿಗಳಿಗೆ ತಿಳಿಸುವ ಪೋಸ್ಟರ್‌ಗಳನ್ನು ಕೆನಡಾದಲ್ಲಿ ಪ್ರಸಾರ ಮಾಡುತ್ತಿರುವ ಸಮಯದಲ್ಲಿ ಜೈಶಂಕರ್‌ ಈ ಹೇಳಿಕೆ ನೀಡಿದ್ದಾರೆ.

ಇತ್ತೀಚೆಗೆ ಕೆನಡಾದ ನಡುಬೀದಿಯಲ್ಲಿ ಅಪರಿಚಿತ ವ್ಯಕ್ತಿಗಳಿಂದ ಹತ್ತೆಯಾದ ಖಲಿಸ್ತಾನಿ ನಾಯಕ ಹರ್ದೀಪ್‌ ಸಿಂಗ್‌ ನಿಜ್ಜರ್‌ನ ನೆನಪಿನಲ್ಲಿ ಈ ಮೆರವಣಿಗೆ ನಡೆಸಲಾಗುತ್ತಿದೆ. ಬ್ರಿಟಿಷ್ ಕೊಲಂಬಿಯಾದ ಸರ್ರೆಯಲ್ಲಿ ಗುರುದ್ವಾರದ ಹೊರಗೆ ಈತನನ್ನು ಅಪರಿಚಿತ ಇಬ್ಬರು ವ್ಯಕ್ತಿಗಳು ಬೈಕ್‌ನಲ್ಲಿ ಬಂದು ಶೂಟ್‌ ಮಾಡಿದ್ದರು. ಒಟ್ಟಾವಾದಲ್ಲಿರುವ ಭಾರತದ ಹೈಕಮಿಷನರ್ ಸಂಜಯ್ ಕುಮಾರ್ ವರ್ಮಾ ಮತ್ತು ಟೊರೊಂಟೊದಲ್ಲಿನ ಕಾನ್ಸುಲೇಟ್ ಜನರಲ್ ಅಪೂರ್ವ ಶ್ರೀವಾಸ್ತವ ಅವರಿಗೆ ಬೆದರಿಕೆ ಹಾಕಿರುವ ಈ  ಪೋಸ್ಟರ್‌ಗಳು ಭಾರತ ಸರ್ಕಾರಕ್ಕೆ ಕಳವಳವನ್ನು ಉಂಟು ಮಾಡಿವೆ ಎಂದಿದ್ದಾರೆ.

ನಿಜ್ಜರ್ ದೀರ್ಘಕಾಲ ಭಾರತ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದ ಮತ್ತು ಬ್ರಾಂಪ್ಟನ್‌ನಲ್ಲಿ ಪ್ರತ್ಯೇಕತಾವಾದಿ ಜನಾಭಿಪ್ರಾಯ ಸಂಗ್ರಹವನ್ನು ಸಹ ಆಯೋಜಿಸಿದ್ದ. ನಿಜ್ಜರ್ ಅವರು ಸರ್ರೆ ಸಿಟಿಯಲ್ಲಿರುವ ಗುರುನಾನಕ್ ಸಿಖ್ ಗುರುದ್ವಾರದ ಅಧ್ಯಕ್ಷರಾಗಿದ್ದರು ಮತ್ತು ಭಾರತದಲ್ಲಿ ನಿಷೇಧಿಸಲ್ಪಟ್ಟಿರುವ ಸಿಖ್ಸ್ ಫಾರ್ ಜಸ್ಟಿಸ್ (SFJ) ಎಂಬ ಪ್ರತ್ಯೇಕತಾವಾದಿ ಸಂಘಟನೆಯೊಂದಿಗೆ ಸಂಬಂಧ ಹೊಂದಿದ್ದರು.

ಸಿಖ್‌ ಫಾರ್‌ ಜಸ್ಟೀಸ್‌ನ ಮುಖ್ಯ ವಕೀಲನಾಗಿರುವ ಹಾಗೂ ಭಾರತದ ಮೋಸ್ಟ್‌ ವಾಂಟೆಡ್‌ ಲಿಸ್ಟ್‌ನಲ್ಲಿರುವ ಗುರುಪತ್ವಂತ್ ಪನ್ನುನ್, ನಿಜ್ಜರ್‌ನ ಸಾವನ್ನು ಹತ್ಯೆ ಎಂದು ಕರೆದಿದ್ದಲ್ಲದೆ, ಇದಕ್ಕೆ ಭಾರತವೇ ಕಾರಣ ಎಂದು ನೇರವಾಗಿ ದೂಷಣೆ ಮಾಡಿದ್ದರು.

 

ಮೋದಿ ಅಮೆರಿಕ ಭೇಟಿ ಬೆನ್ನಲ್ಲೇ, ಖಲಿಸ್ತಾನಿ ನಾಯಕ ಗುರುಪತ್ವಂತ್ ಸಿಂಗ್ ಪನ್ನುನ್ ನಾಪತ್ತೆ?

ಭಾರತದ ರಾಜತಾಂತ್ರಿಕರ ಹೆಸರು ಹಾಗೂ ಚಿತ್ರಗಳಿದ್ದ ಪೋಸ್ಟರ್‌ಗಳು ಕಾಣಿಸಿಕೊಂಡ ಬಳಿಕ ಭಾರತ ಅನೌಪಚಾರಿಕ ಮಾರ್ಗಗಳ ಮೂಲಕ ಗ್ಲೋಬಲ್ ಅಫೇರ್ಸ್ ಕೆನಡಾ (ದೇಶದ ವಿದೇಶಾಂಗ ಸಚಿವಾಲಯ), ರಾಯಲ್ ಕೆನಡಿಯನ್ ಮೌಂಟೆಡ್ ಪೊಲೀಸ್ (RCMP) ಮತ್ತು ಒಟ್ಟಾವಾ ಮತ್ತು ಟೊರೊಂಟೊ ಪೊಲೀಸ್ ಇಲಾಖೆಗಳನ್ನು ಸಂಪರ್ಕಿಸಿದೆ ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ. ಖಲಿಸ್ತಾನ್ ಪರ ಚಟುವಟಿಕೆಗಳು ಆಗಾಗ್ಗೆ ನಡೆಯುವ ದೇಶಗಳ ಸರ್ಕಾರಗಳೊಂದಿಗೆ ಶೀಘ್ರದಲ್ಲೇ ಈ ವಿಷಯವನ್ನು ಔಪಚಾರಿಕವಾಗಿ ಪ್ರಸ್ತಾಪಿಸಲಾಗುವುದು ಎಂದು ಜೈಶಂಕರ್ ಹೇಳಿದರು.

ಭಾರತ ದ್ರೋಹಿಗಳ ನಿಗೂಢ ಸಾವು: ದೇಶದ ವಿರುದ್ಧ ಕತ್ತಿ ಮಸೆದವರು ಇದ್ದಕ್ಕಿದ್ದಂತೆ ಹೆಣವಾದರು !

Latest Videos
Follow Us:
Download App:
  • android
  • ios