ಇಲ್ಲಿನ ಪ್ರತಿಷ್ಠಿತ ಆರ್‌ಜಿ ಕರ್ ಆಸ್ಪತ್ರೆಯಲ್ಲಿ ನಡೆದ ಮಹಿಳಾ ವೈದ್ಯೆ ಮೇಲಿನ ಅತ್ಯಾಚಾರ, ಹತ್ಯೆ ಮೇಲ್ನೋಟಕ್ಕೆ ಕಾಣುವಷ್ಟು ಸರಳವಾಗಿಲ್ಲ. ಅದರ ಹಿಂದೆ ಔಷಧ ಕಳವಿನ ಮಾಫಿಯಾದ ಕೈವಾಡವಿರಬಹುದು ಎಂಬ ಗಂಭೀರ ಆರೋಪ ಕೇಳಿಬಂದಿದೆ. 

ಕೋಲ್ಕತಾ (ಆ.19): ಇಲ್ಲಿನ ಪ್ರತಿಷ್ಠಿತ ಆರ್‌ಜಿ ಕರ್ ಆಸ್ಪತ್ರೆಯಲ್ಲಿ ನಡೆದ ಮಹಿಳಾ ವೈದ್ಯೆ ಮೇಲಿನ ಅತ್ಯಾಚಾರ, ಹತ್ಯೆ ಮೇಲ್ನೋಟಕ್ಕೆ ಕಾಣುವಷ್ಟು ಸರಳವಾಗಿಲ್ಲ. ಅದರ ಹಿಂದೆ ಔಷಧ ಕಳವಿನ ಮಾಫಿಯಾದ ಕೈವಾಡವಿರಬಹುದು ಎಂಬ ಗಂಭೀರ ಆರೋಪ ಕೇಳಿಬಂದಿದೆ. ಒಂದು ವೇಳೆ ಇದು ನಿಜವಾದರೆ ಇಡೀ ಪ್ರಕರಣಕ್ಕೆ ಹೊಸ ತಿರುವು ಸಿಗಲಿದೆ. ಹತ್ಯೆಗೊಳಗಾದ ವೈದ್ಯೆಯು ತನ್ನ ಡೈರಿಯಲ್ಲಿ ದಾಖಲಿಸಿರುವ ಕೆಲ ಅಂಶಗಳು, ವೈದ್ಯೆಯ ಸಹೋದ್ಯೋಗಿಗಳು ಮತ್ತು ಪೋಷಕರು ನೀಡಿರುವ ಹೇಳಿಕೆಗಳು ಇಂಥದ್ದೊಂದು ದಿಕ್ಕಿನತ್ತ ಪ್ರಕರಣವನ್ನು ತಿರುಗಿಸುವ ಸುಳಿವು ನೀಡಿದೆ. 

Add Asianetnews Kannada as a Preferred SourcegooglePreferred

ಇದು ಸರಳವಾದ ಅಪರಾಧ ಪ್ರಕರಣವಲ್ಲ. ಉದ್ದೇಶಪೂರ್ವಕ ಕೃತ್ಯದಂತಿದೆ ಎಂದು ಇವರೆಲ್ಲರೂ ಶಂಕಿಸಿದ್ದಾರೆ. ‘ಆಕೆ 48 ಗಂಟೆಗಳ ನಿರಂತರ ಪಾಳಿ ಸೇರಿದಂತೆ ಭಾರೀ ಕೆಲಸದ ಒತ್ತಡದಲ್ಲಿದ್ದಳು. ಜೊತೆಗೆ ಘಟನೆ ನಡೆದ ದಿನ ಸಂತ್ರಸ್ತೆ ಸೆಮಿನಾರ್ ಹಾಲ್‌ನಲ್ಲಿ ಒಬ್ಬಳೇ ಇರುವುದು ಬಂಧಿತ ಆರೋಪಿ ಸಂಜಯ್ ರಾಯ್‌ಗೆ ಹೇಗೆ ಗೊತ್ತಾಯಿತು. ರಾಯ್‌ ಒಂದು ದೊಡ್ಡ ಜಾಲದಲ್ಲಿನ ಭಾಗವಾಗಿರಬಹುದು ಅಷ್ಟೆ’ ಎಂದು ಒಬ್ಬ ಸಹೋದ್ಯೋಗಿ ಸಂದೇಹಿಸಿದ್ದಾರೆ. 

ದೇಶಾದ್ಯಂತ ವೈದ್ಯರು ಮುಷ್ಕರ ನಡೆಸುತ್ತಿರುವುದೇಕೆ?: ಕೋಲ್ಕತಾ ಆಸ್ಪತ್ರೆಯಲ್ಲಿ ಆ.9 ರಂದು ಆಗಿದ್ದೇನು?

ಇನ್ನೊಬ್ಬ ಸಹೋದ್ಯೋಗಿ ಮಾತನಾಡಿ, ‘ಸಂತ್ರಸ್ತೆಯು ತನ್ನ ಇಲಾಖೆಯಲ್ಲಿ ಸಂಭವನೀಯ ಡ್ರಗ್ಸ್‌ ಜಾಲ ಬಹಿರಂಗಪಡಿಸಲು ಪ್ರಯತ್ನಿಸುತ್ತಿದ್ದಳು. ಆಕೆಗೆ ತುಂಬಾ ತಿಳಿದಿರಬಹುದು. ಹೀಗಾಗಿ ಆಕೆಯನ್ನು ಕೊಂದಿರಬಹುದು’ ಎಂದಿದ್ದಾರೆ. 31ರ ಹರೆಯದ ವೈದ್ಯರ ತಾಯಿ ಮಾತನಾಡಿ, ದಾಳಿಗೆ ಕೆಲವು ದಿನ ಮುನ್ನ ನನ್ನ ಮಗಳು ಆಸ್ಪತ್ರೆಗೆ ಹೋಗುವ ಬಗ್ಗೆ ಇಷ್ಟವಿರಲಿಲ್ಲ ಎಂದಿದ್ದಳು ಎಂದರೆ, ಸಂತ್ರಸ್ತೆಯ ತಂದೆ ತನ್ನ ಮಗಳನ್ನು ಸೆಮಿನಾರ್ ಹಾಲ್‌ನಲ್ಲಿ ಕೊಲ್ಲಲಾಗಿದೆಯೇ ಎಂಬುದೇ ಸಂದೇಹಾಸ್ಪದ. ಅವಳು ಬೇರೆಡೆ ಕೊಲ್ಲಲ್ಪಟ್ಟಿರಬಹುದು ಎಂದು ಶಂಕಿಸಿದ್ದಾರೆ.