ರಸ್ತೆ ಬದಿ ಪಾನಿಪುರಿ ತಿನ್ನುತ್ತಿದ್ದ ಮೂವರು ಸಹೋದರಿಯರ ಮೇಲೆ ಕಾರೊಂದು ಹರಿದ ಪರಿಣಾಮ ತಂಗಿ ಮೃತಪಟ್ಟರು ಅಕ್ಕಂದಿರಿಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಉತ್ತರಪ್ರದೇಶದ ನೋಯ್ಡಾದಲ್ಲಿ ನಡೆದಿದೆ. ಕಾರು ಚಾಲಕ ಪಾನಮತ್ತನಾಗಿ ಕಾರು ಚಾಲಾಯಿಸಿದ ಪರಿಣಾಮ ಈ ಅವಘಡ ಸಂಭವಿಸಿದೆ.

ನೋಯ್ಡಾ: ರಸ್ತೆ ಬದಿ ಪಾನಿಪುರಿ ತಿನ್ನುತ್ತಿದ್ದ ಮೂವರು ಸಹೋದರಿಯರ ಮೇಲೆ ಕಾರೊಂದು ಹರಿದ ಪರಿಣಾಮ ತಂಗಿ ಮೃತಪಟ್ಟರು ಅಕ್ಕಂದಿರಿಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಉತ್ತರಪ್ರದೇಶದ ನೋಯ್ಡಾದಲ್ಲಿ ನಡೆದಿದೆ. ಕಾರು ಚಾಲಕ ಪಾನಮತ್ತನಾಗಿ ಕಾರು ಚಾಲಾಯಿಸಿದ ಪರಿಣಾಮ ಈ ಅವಘಡ ಸಂಭವಿಸಿದೆ. ನೋಯ್ಡಾದ ಸದರ್‌ಪುರ ಪ್ರದೇಶದಲ್ಲಿ ಸೋನಂ ಬಜಾರ್ ಎಂಬಲ್ಲಿ ಭಾನುವಾರ ಸಂಜೆ ಈ ಅವಘಡ ಸಂಭವಿಸಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಪೊಲೀಸರ ಪ್ರಕಾರ ಖಜೂರ್ ಕಾಲೋನಿ (Khajur Colony) ನಿವಾಸಿ ಪುಷ್ಪಾ (Pushpa) ಎಂಬುವವರು ತಮ್ಮ ಮೂವರು ಮಕ್ಕಳಾದ ಆರು ವರ್ಷದ ರಿಯಾ (Riya) 15 ವರ್ಷದ ಅನು (Anu) ಹಾಗೂ 18 ವರ್ಷದ ಅಂಕಿತಾ (Ankita) ಜೊತೆ ಸೋಮ್ ಬಜಾರ್‌ಗೆ (Som Bazar) ತೆರಳುತ್ತಿದ್ದರು. ಈ ವೇಳೆ ಮಕ್ಕಳು ಪಾನಿಪುರಿ (golgappas) ತಿನ್ನಬೇಕು ಎಂದು ಆಸೆ ವ್ಯಕ್ತಪಡಿಸಿದ್ದು, ಅದರಂತೆ ಮಕ್ಕಳು ರಸ್ತೆ ಬದಿ ನಿಂತುಕೊಂಡು ಪಾನಿಪುರಿ ತಿನ್ನುತ್ತಿರುವಾಗ ಈ ಅವಘಡ ಸಂಭವಿಸಿದೆ. ಘಟನೆಯಲ್ಲಿ ಮೂವರು ಸಹೋದರಿಯರು ಗಂಭೀರ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಆರು ವರ್ಷ ಮಗು ರಿಯಾ ಚಿಕಿತ್ಸೆ ಫಲಕಾರಿಯಾಗದೇ ಇಂದು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾಳೆ. 

ಎಣ್ಣೆ ಅಮಲು, ತಡೆದ ಪೊಲೀಸರಿಗೆ ಎಂತೆಂಥಾ ಶಬ್ದ ಬಳಸಿದ ನಿರ್ದೇಶಕಿ

ಮೂವರು ಮಕ್ಕಳನ್ನು ನೋಯ್ಡಾದ ಪೋಸ್ಟ್ ಗ್ರಾಜ್ಯುಯೇಟ್ ಇನ್ಸ್‌ಟಿಟ್ಯೂಟ್‌ ಆಪ್ ಚೈಲ್ಡ್ ಹೆಲ್ತ್ ಆಸ್ಪತ್ರೆಗೆ (Post Graduate Institute of Child Health) ದಾಖಲಿಸಲಾಗಿತ್ತು. ಇನ್ನು ಅಪಘಾತಕ್ಕೊಳಗಾದ ಕಾರಿನಲ್ಲಿ ನಾಲ್ವರು ಯುವಕರಿದ್ದು, ಎಲ್ಲರೂ ಪಾನಮತ್ತರಾಗಿದ್ದರು. ಕಾರು ಚಲಾಯಿಸುತ್ತಿದ್ದವನೂ ಕೂಡ ಪಾನಮತ್ತನಾಗಿದ್ದು, ಇದರಿಂದ ಕಾರು ಆತನ ನಿಯಂತ್ರಣ ತಪ್ಪಿ ಈ ಅನಾಹುತ ಸಂಭವಿಸಿದೆ. 

ಡ್ರಿಂಕ್ & ಡ್ರೈವ್‌ಗಿಂತ ಟಚ್ ಸ್ಕ್ರೀನ್ ಬಳಸುವುದು ಅತ್ಯಂತ ಅಪಾಯಕಾರಿ; ಕಾರಣ ಇಲ್ಲಿದೆ!