Asianet Suvarna News Asianet Suvarna News

ಎಣ್ಣೆ ಏಟಿಗೆ ಕುತುಬ್ ಮಿನಾರ್ ಗೋಡೆಗೆ ಡಿಕ್ಕಿ, ಕಾರಿನಲ್ಲಿ ಸ್ಫೋಟ!

ಲಾಕ್‌ಡೌನ್ ಸಡಿಲಿಕೆ  ಮದ್ಯ ಮಾರಾಟ ಆರಂಭ| ಎಣ್ಣೆ ನಶೆಯಲ್ಲಿ ಕಾರು ಚಲಾಯಿಸಿ ಕುತುಬ್ ಮಿನಾರ್ ಗೊಡೆಗೆ ಡಿಕ್ಕಿ ಹೊಡೆದ ಚಾಲಕ| ನಶೆಯಲ್ಲಿ ತೇಲಾಡುತ್ತಿದ್ದ ಚಾಲಕನನ್ನು ಂಧಿಸಿದ ಪೊಲೀಸರು

Drunk man smashes into Qutub Minar perimeter wall in delhi
Author
Bangalore, First Published May 6, 2020, 5:53 PM IST

ನವದೆಹಲಿ(ಮೇ.06): ಮದ್ಯದ ನಶೆಯಲ್ಲಿ ತೇಲಾಡುತ್ತಿದ್ದ ವ್ಯಕ್ತಿಯೊಬ್ಬ ಕಾರು ಚಲಾಯಿಸುತ್ತಿದ್ದಾಗ ದೆಹಲಿಯ ಐತಿಹಾಸಿಕ ಕುತುಬ್ ಮಿನಾರ್ ಗೋಡೆಗೆ ಡಿಕ್ಕಿ ಹೊಡೆದಿರುವ ಪ್ರಕರಣ ಬೆಳಕಿಗೆ ಬಂದಿದೆ. ಕಾರು ಡಿಕ್ಕಿ ಹೊಡೆದ ರಭಸಕ್ಕೆ ಗೋಡೆಗೆ ಭಾರಿ ಹಾನಿಯುಂಟಾಗಿದೆ. ಈ ಅಪಘಾತದ ಬೆನ್ನಲ್ಲೇ ಕಾರಿಗೆ ಬೆಂಕಿ ತಗುಲಿದ್ದು, ಸ್ಫೋಟ ಸಂಭವಿಸಿದೆ. ಈ ಅಪಘಾತ ಮಂಗಳವಾರ ಬೆಳಗ್ಗೆ ಮುಂಜಾನೆ ಸುಮಾರು ಮೂರೂವರೆಗೆ ಸಂಭವಿಸಿದೆ. ಇನ್ನು ಕುತುಬ್ ಮಿನಾರ್ ಭದ್ರತಾ ಸಿಬ್ಬಂದಿ ಕಾರು ಚಾಲಕನನ್ನು ರಕ್ಷಿಸಿದ್ದಾರೆ.

ಗಾಯಗೊಂಡಿದ್ದ ಹಾಗೂ ಸುಟ್ಟ ಸ್ಥಿತಿಯಲ್ಲಿದ್ದ ಚಾಲಕನನ್ನು ಸಫ್ದರ್‌ಗಂಜ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಗೋಡೆಗೆ ಡಿಕ್ಕಿ ಹೊಡೆದ ವ್ಯಕ್ತಿಯನ್ನು ಅರುಣ್ ಚೌಹಾಣ್ ಎಂದು ಗುರುತಿಸಲಾಗಿದ್ದು, ಈತ ದೆಲಿಯ ಮಹಿಪಾಲ್ಪುರ್ ನಿವಾಸಿಯಾಗಿದ್ದಾನೆ. ಈತ ಓರ್ವ ಸೇಳ್ ಪರ್ಚೇಜ್ ಕೆಸಲ ಮಾಡುತ್ತಾನೆ.

ಈಕೆ ವಿದ್ಯಾರ್ಥಿನಿ, ತುಂಬು ಗರ್ಭಿಣಿ... ತಿಹಾರ್ ಜೈಲು ಸೇರಿ ಮೂರು ವಾರ!

ಘಟನೆ ಬೆನ್ನಲ್ಲೇ ಭಾರತೀಯ ಪುರಾತತ್ವ ಇಲಾಖೆ ದೆಹಲಿ ಪೊಲೀಸರಿಗೆ ಪತ್ರವೊಂದನ್ನು ಬರೆದಿದ್ದು, ಐತಿಹಾಸಿಕ ಸ್ಮಾರಕ ಕುತುಬ್ ಮಿನಾರ್ ಗೋಡೆಗೆ ಆಗಿರುವ ಹಾನಿ ಸರಿಪಡಿಸಲು ಬತಗುಲುವ ವೆಚ್ಚವನ್ನು ಆರೋಪಿಯಿಂದ ಪಡೆದುಕೊಳ್ಳುವಂತೆ ಸೂಚಿಸಿದೆ.

ಇನ್ನು ದೆಹಲಿಯಲ್ಲಿ ಮಾರ್ಚ್ 3ರ ಬಳಿಕ ಲಾಕ್‌ಡೌನ್ ಸಡಿಲಗೊಳಿಸಲಾಗಿದ್ದು, ಮದ್ಯ ಮಾರಾಟ ಆರಂಭಿಸಲಾಗಿದೆ. ಕಳೆದ ನಲ್ವತ್ತು ದಿನಗಳಿಂದ ಮದ್ಯವಿಲ್ಲದೇ ಪರದಾಡುತ್ತಿದ್ದ ಎಣ್ಣೆ ಪ್ರಿಯರು ವೈನ್‌ ಶಾಪ್‌ಗಳಿಂದ ಭರ್ಜರಿಯಾಗಿ ಮದ್ಯ ಖರೀದಿಸಿ ನಶೆಯಲ್ಲಿ ತೂರಾಡಲಾರಂಭಿಸಿದ್ದಾರೆ.

Follow Us:
Download App:
  • android
  • ios