ಜಪಾನ್ ಭೂಕಂಪದ ಆತಂಕ ಮಾಸುವು ಮುನ್ನವೇ ಇದೀಗ ದೆಹಲಿ ಹಾಗೂ ರಾಷ್ಟ್ರ ರಾಜಧಾನಿ ವ್ಯಾಪ್ತಿಯಲ್ಲಿ ಭೂಮಿ ಕಂಪಿಸಿದೆ. ದೆಹಲಿಯಲ್ಲಿ ಜನರು ಆತಂಕಗೊಂಡಿದ್ದಾರೆ. 

ನವದೆಹಲಿ(ಜ.11) ವಿಶ್ವದ ಹಲವು ಭಾಗದಲ್ಲಿ ಇದೀಗ ಭೂಕಂಪದ ಆತಂಕ ಹೆಚ್ಚಾಗುತ್ತಿದೆ. ಜಪಾನ್ ಇತ್ತೀಚೆಗೆ ಭೀಕರ ಭೂಕಂಪಕ್ಕೆ ನಲುಗಿತ್ತು. ಇದೀಗ ಆತಂಕ ಭಾರತದಲ್ಲಿ ಶುರುವಾಗಿದೆ. ದೆಹಲಿ ಹಾಗೂ ರಾಷ್ಟ್ರ ರಾಜಧಾನಿ ವ್ಯಾಪ್ತಿಯಲ್ಲಿ ಭೂಮಿ ಕಂಪಿಸಿದೆ. ಜಮ್ಮು ಮತ್ತು ಕಾಶ್ಮೀರದಲ್ಲೂ ಭೂಕಂಪನದ ಅನುಭವವಾಗಿದೆ ಎಂದು ವರದಿಯಾಗಿದೆ. ಈ ಭೂಕಂಪನದ ಕೇಂದ್ರ ಬಿಂದು ಆಫ್ಘಾನಿಸ್ತಾನ ಎಂದು ಗುರುತಿಸಲಾಗಿದೆ. ಹೀಗಾಗಿ ಭಾರತ ಮಾತ್ರವಲ್ಲ ಪಾಕಿಸ್ತಾನದ ಕೆಲ ಪ್ರದೇಶಗಳಲ್ಲೂ ಭೂಕಂಪನವಾಗಿರುವ ಮಾಹಿತಿ ಲಭ್ಯವಾಗಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಭಾರತದ ಘಾಜಿಯಾದಾಬಾದ್, ಫರಿದಾಬಾದ್, ಗುರುಗ್ರಾಂ ಸೇರಿದಂತೆ ದೆಹಲಿ ವ್ಯಾಪ್ತಿಯಲ್ಲಿ ಭೂಮಿ ಕಂಪಿಸಿದೆ. ಪಾಕಿಸ್ತಾನದ ಲಾಹೋರ್, ಇಸ್ಲಾಮಾಬಾದ್ ಹಾಗೂ ಖೈಬರ್ ಪಖ್ತುಂಕ್ವಾ ಪ್ರಾಂತ್ಯದ ಕೆಲ ನಗರಗಳಲ್ಲೂ ಭೂಕಂಪನ ಅನುಭವವಾಗಿದೆ. ಆಫ್ಘಾನಿಸ್ತಾನದಲ್ಲಿ 220 ಕಿಲೋಮೀಟರ್ ಆಳದಲ್ಲಿ ಭೂಕಂಪನದ ಕೇಂದ್ರ ಬಿಂದು ಎಂದು ಭಾರತೀಯ ಭೂಕಂಪ ಮಾಪನ ಕೇಂದ್ರ ವರದಿ ಮಾಡಿದೆ. 6.4 ರ ತೀವ್ರತೆಯ ಭೂಕಂಪನ ದಾಖಲಾಗಿದೆ. ದೆಹಲಿ ಹಾಗೂ ಪಾಕಿಸ್ತಾನದಲ್ಲಿ ಲಘು ಭೂಕಂಪನದ ಅನುಭವವಾಗಿದೆ.

ಭೂಕಂಪ ಪೀಡಿತ ಜಪಾನ್​ನಿಂದ ಸುರಕ್ಷಿತವಾಗಿ ವಾಪಸಾಗಿರುವೆ: ಕಂಗೆಟ್ಟ ಫ್ಯಾನ್ಸ್​ಗೆ ಜ್ಯೂ.ಎನ್​ಟಿಆರ್ ಮಾಹಿತಿ

2024ರ ಹೊಸ ವರ್ಷದ ಮೊದಲ ದಿನವೇ ಜಪಾನ್ ನಲುಗಿ ಹೋಗಿತ್ತು. ಜಪಾನ್‌ನಲ್ಲಿ 7.6 ತೀವ್ರತೆಯ ಭೂಕಂಪ ಸಭವಿಸಿತ್ತು. ಈ ಭೂಕಂಪದಲ್ಲಿ 126 ಮಂದಿ ಮೃತಪಟ್ಟಿದ್ದರು. 500ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು. ಈ ಪೈಕಿ 27 ಜನರು ತೀರ ಗಂಭೀರ ಸ್ಥಿತಿಯಲ್ಲಿದ್ದಾರೆ ಎಂದು ಜಪಾನ್ ಸರ್ಕಾರ ತಿಳಿಸಿತ್ತು. ಈ ಭೂಕಂಪದಿಂದ 30,000 ಕುಟುಂಬಗಳು ನಿರಾಶ್ರಿತಗೊಂಡಿತ್ತು.

 ಭೂಕಂಪದಿಂದಾಗಿ ಮನೆಗಳ ಜೊತೆಗೆ ರಸ್ತೆಯಲ್ಲಿ ನಿಂತಿದ್ದ ಕಾರುಗಳು ಸಹ ಬುಡಮೇಲಾಗಿತ್ತು. ಮಿನಿ ಸುನಾಮಿ ಕಾರಣ ಉಕ್ಕೇರಿದ್ದ ಸಮುದ್ರದಲ್ಲಿ ಹಡಗುಗಳೂ ಸಹ ಮುಳುಗಡೆಗೊಂಡಿತ್ತು. ಹಲವು ಪ್ರದೇಶಗಳಲ್ಲಿ ವಿದ್ಯುತ್‌, ನೀರು ಮತ್ತು ದೂರವಾಣಿ ಸೇವೆಗಳನ್ನುಸ್ಥಗಿತಗೊಂಡಿತ್ತು. 

ಹೊಸ ವರ್ಷ ಸಂಭ್ರಮಾಚರಣೆಗೂ ಮುನ್ನ ಭಾರತಕ್ಕೆ ಆಘಾತ, ಕಾಶ್ಮೀರದ ಕುಪ್ವಾರದಲ್ಲಿ ಭೂಕಂಪ!