* ಚುನಾವಣಾ ಸಿಬ್ಬಂದಿ ಮುಂಚೂಣಿ ಕಾರ‍್ಯಕರ್ತರೆಂದು ಪರಿಗಣಿಸಿ* ಅವರಿಗೆ 3ನೇ ಡೋಸ್‌ ನೀಡಲು ರಾಜ್ಯಗಳಿಗೆ ಆಯೋಗ ಸಲಹೆ* ಚುನಾವಣಾ ರಾಜ್ಯಗಳಲ್ಲಿ ಲಸಿಕಾಕರಣ ತೀವ್ರಗೊಳಿಸಿ: ಚುನಾವಣಾ ಆಯೋಗ

ನವದೆಹಲಿ(ಜ.04): ಉತ್ತರ ಪ್ರದೇಶ, ಪಂಜಾಬ್‌ ಸೇರಿದಂತೆ ಪಂಚರಾಜ್ಯಗಳ ಚುನಾವಣೆಗೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ, ಚುನಾವಣಾ ರಾಜ್ಯಗಳಲ್ಲಿ ಕೋವಿಡ್‌ ಪರಿಸ್ಥಿತಿ ಬಗ್ಗೆ ಪರಿಶೀಲನೆ ನಡೆಸಿರುವ ಕೇಂದ್ರ ಚುನಾವಣಾ ಆಯೋಗ, ಈ ಎಲ್ಲಾ ರಾಜ್ಯಗಳಲ್ಲಿ ಲಸಿಕೆ ಅಭಿಯಾನವನ್ನು ತೀವ್ರಗೊಳಿಸಲು ಸೂಚಿಸಿದೆ. ಅಲ್ಲದೆ ಚುನಾವಣಾ ಕಾರ್ಯಗಳಿಗೆ ನಿಯೋಜಿತರಾಗುವ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಎರಡೂ ಡೋಸ್‌ ಲಸಿಕೆ ನೀಡಿರಬೇಕು ಎಂದು ತಿಳಿಸಿದೆ.

Add Asianetnews Kannada as a Preferred SourcegooglePreferred

ಇದೇ ತಿಂಗಳ 2ನೇ ವಾರದಲ್ಲಿ ಉತ್ತರ ಪ್ರದೇಶ, ಪಂಜಾಬ್‌, ಗೋವಾ, ಮಣಿಪುರ ಮತ್ತು ಉತ್ತರಾಖಂಡ್‌ ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕವನ್ನು ಆಯೋಗ ಘೋಷಣೆ ಮಾಡುವ ಸಾಧ್ಯತೆಯಿದೆ. ಹೀಗಾಗಿ ಇತ್ತೀಚೆಗೆ ಈ ಎಲ್ಲಾ ರಾಜ್ಯಗಳ ಕಾರ್ಯದರ್ಶಿಗಳಿಗೆ ಪತ್ರ ಬರೆದಿದ್ದ ಆಯೋಗ, ಚುನಾವಣೆ ಸಿಬ್ಬಂದಿಯನ್ನು ಕೊರೋನಾ ನಿಯಂತ್ರಣದ ಮುಂಚೂಣಿ ಕಾರ್ಯಕರ್ತರೆಂದು ಪರಿಗಣಿಸಿ, ಅಗತ್ಯವಿರುವವರಿಗೆ ಬೂಸ್ಟರ್‌ ಡೋಸ್‌ ನೀಡಬೇಕು ಎಂದು ಸೂಚನೆ ನೀಡಿತ್ತು.

ಉತ್ತರ ಪ್ರದೇಶದ ವಿಧಾನಸಭೆ ಅವಧಿಯು ಮೇ ತಿಂಗಳಲ್ಲಿ ಅಂತ್ಯವಾಗಲಿದೆ.