ಚುನಾವಣಾ ಆಯೋಗ ಶುಕ್ರವಾರ ಸಂಜೆ 4.30ಕ್ಕೆ ಸುದ್ದಿಗೋಷ್ಠಿ| ಪಂಚ ರಾಜ್ಯ ಚುನಾವಣೆಗೆ ದಿನಾಂಕ ಘೋಷಣೆ ಸಾಧ್ಯತೆ| ಗರಿಗೆದರಿದ ಕುತೂಹಲ
ನವದೆಹಲಿ(ಫೆ.26): ಚುನಾವಣಾ ಆಯೋಗ ಶುಕ್ರವಾರ ಸಂಜೆ 4.30ಕ್ಕೆ ಸುದ್ದಿಗೋಷ್ಠಿ ಆಯೋಜಿಸಲಿದೆ. ಈ ಸಂದರ್ಭದಲ್ಲಿ ಆಯೋಗವು ತೀವ್ರ ಕುತೂಹಲ ಕೆರಳಿಸಿರುವ ಪಶ್ಚಿಮ ಬಂಗಾಳ, ಅಸ್ಸಾಂ, ತಮಿಳುನಾಡು, ಕೇರಳ ಹಾಗೂ ಪುದುಚೇರಿಯ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಿಸುವ ಸಾಧ್ಯತೆಗಳಿವೆ.
"
Election Commission of India to hold a press conference at 4:30 pm today. pic.twitter.com/3k2Lm93hP8
— ANI (@ANI) February 26, 2021
ಬುಧವಾರದಂದು ಮಹತ್ವದ ಸಭೆ
ಪಶ್ಚಿಮ ಬಂಗಾಳ, ಅಸ್ಸಾಂ, ತಮಿಳುನಾಡು, ಕೇರಳ ಹಾಗೂ ಪುದುಚೇರಿಯಲ್ಲಿ ಏಪ್ರಿಲ್, ಮೇ ತಿಂಗಳಲ್ಲಿ ಚುನಾವಣೆ ನಡೆಯಲಿದೆ. ಹೀಗಿರುವಾಗ ಬುಧವಾರದಂದು ಚುನಾವಣಾ ಆಯೊಗ ಮಹತ್ವದ ಸಭೆಯೊಂದನ್ನು ನಡೆಸಿದೆ. ಮುಖ್ಯ ಚುನಾವಣಾ ಆಯುಕ್ತ ಸುನೀಲ್ ಅರೋರಾ ಅಧ್ಯಕ್ಷತೆಯಲ್ಲಿ ನಡೆದ ಈ ಸಭೆಯಲ್ಲಿ ಪಂಚ ರಾಜ್ಯಗಳ ಚುನಾವಣಾ ದಿನಾಂಕದ ಬಗ್ಗೆಯೂ ಚರ್ಚೆ ನಡೆದಿದೆ ಎನ್ನಲಾಗಿದೆ.
ಚುನಾವಣಾ ಹೊಸ್ತಿಲಲ್ಲಿ ರಾಜ್ಯಗಳಿಗೆ ನಾಯಕರ ಭೇಟಿ
ಇನ್ನು ಚುನಾವಣೆ ದಿನಾಂಕ ಘೋಷಣೆಗೂ ಮೊದಲೇ ರಾಷ್ಟ್ರೀಯ ಪಕ್ಷಗಳು ಈ ಐದು ರಾಜ್ಯಗಳ ಮತದಾರರನ್ನು ಓಲೈಸುವ ಕಾರ್ಯಕ್ಕಿಳಿದಿದ್ದಾರೆ. ರಾಷ್ಟ್ರ ನಾಯಕರು ರಾಜ್ಯಗಳಿಗೆ ಭೇಟಿ ನೀಡಿ ಜನರ ಮನ ಗೆಲ್ಲುವ ಯತ್ನ ನಡೆಸುತ್ತಿದ್ದಾರೆ. ಅಲ್ಲದೇ ಪ್ರತಿಪಕ್ಷಗಳ ವಿರುದ್ಧ ವಾಗ್ದಾಳಿಯೂ ಮುಂದುವರೆದಿದೆ.
Last Updated Feb 26, 2021, 12:57 PM IST