ತಿರುಪತಿ ಹೋಟೆಲ್‌ಗಳಿಗೆ ಬಾಂಬ್‌ ಬೆದರಿಕೆ, ತಮಿಳುನಾಡು ಸಿಎಂ ಭಾಗಿ ಎಂಬ ಸಂದೇಶ

ತಿರುಪತಿಯ 3 ಹೋಟೆಲ್‌ಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್‌ ಮೂಲಕ ಬಂದಿದ್ದು, ತಮಿಳುನಾಡು ಸಿಎಂ ಕೂಡ ಭಾಗಿಯಾಗಿದ್ದಾರೆ ಎಂದು ಸಂದೇಶದಲ್ಲಿ ಉಲ್ಲೇಖಿಸಲಾಗಿದೆ. ಪೊಲೀಸರು ಶೋಧ ನಡೆಸಿದ್ದು, ಹುಸಿ ಬೆದರಿಕೆ ಎಂದು ಖಚಿತಪಟ್ಟಿದೆ.

Fake Bomb threat Call to Tirupati s 3 hotel mrq

ತಿರುಪತಿ: ವಿಮಾನ ಸ್ಫೋಟದ ಸರಣಿ ಬೆದರಿಕೆ ನಡುವೆಯೇ ಇದೀಗ ಆಂಧ್ರಪ್ರದೇಶದ ತಿರುಪತಿ ದೇವಸ್ಥಾನ ಸಮೀಪದ 3 ಹೋಟೆಲ್‌ಗಳಿಗೆ ಇ-ಮೇಲ್‌ ಮೂಲಕ ಗುರುವಾರ ಬಾಂಬ್‌ ಬೆದರಿಕೆ ಒಡ್ಡಿದ ಘಟನೆ ನಡೆದಿದೆ. ಕೂಡಲೇ ಕಾರ್ಯಪ್ರವೃತ್ತರಾದ ಪೊಲೀಸರು ಶೋಧ ನಡೆಸಿದ್ದು ಬಳಿಕ ಇದೊಂದು ಹುಸಿ ಬೆದರಿಕೆ ಎಂದು ಖಚಿತಪಟ್ಟಿದೆ.

ಲೀಲಾ ಮಹಲ್‌, ಕಪಿಲಾ ತೀರ್ಥಂ ಹಾಗೂ ಅಲೀಪೀರಿ ಪ್ರದೇಶದ 3 ಖಾಸಗಿ ಹೋಟೆಲ್‌ಗಳಿಗೆ, ‘ಈ ಹೋಟೆಲ್‌ಗಳಲ್ಲಿ ಸುಧಾರಿತ ಇಡಿ ಸ್ಫೋಟಕಗಳನ್ನು ಪಾಕ್‌ನ ಐಎಸ್‌ಐ ಸಕ್ರಿಯಗೊಳಿಸಲಿದ್ದು, ರಾತ್ರಿ 11ರೊಳಗೆ ಜಾಗ ಖಾಲಿ ಮಾಡಿ. ತಮಿಳುನಾಡು ಸಿಎಂ ಕೂಡ ಇದರಲ್ಲಿ ಭಾಗಿಯಾಗಿದ್ದಾರೆ’ ಎಂಬ ಸಂದೇಶವನ್ನು ಅ.24ರ ಸಂಜೆ ರವಾನಿಸಲಾಗಿತ್ತು.

ಮತ್ತೆ 79 ವಿಮಾನಗಳಿಗೆ ಹುಸಿಬಾಂಬ್‌ ಬೆದರಿಕೆ: ಕಿಡಿಗೇಡಿಗಳ ಕೃತ್ಯಕ್ಕೆ 600 ಕೋಟಿ ನಷ್ಟ!

ಜೊತೆಗೆ, ‘ಡಿಎಂಕೆಯ ಜಾಫರ್‌ ಸಾದಿಕ್‌ ಬಂಧನದಿಂದ ಅಂತಾರಾಷ್ಟ್ರೀಯ ಒತ್ತಡವೂ ಹೆಚ್ಚಿದ್ದು, ಈ ಪ್ರಕರಣದಲ್ಲಿ ಸಿಎಂ ಸ್ಟಾಲಿನ್‌ ಪರಿವಾರದ ಪಾತ್ರದ ಕಡೆಯಿಂದ ಜನರ ಗಮನವನ್ನು ಬೇರೆಡೆ ಸೆಳೆಯಲು ಇಂತಹ ಸ್ಫೋಟಗಳು ಅಗತ್ಯ’ ಎಂದೂ ಬರೆಯಲಾಗಿತ್ತು. ಡಿಎಂಕೆ ನಾಯಕ ಸಾದಿಕ್‌ನನ್ನು ಮಾದಕವಸ್ತು ಸಾಗಣೆ ಪ್ರಕರಣದಲ್ಲಿ ಫೆಬ್ರವರಿಯಲ್ಲಿ ಬಂಧಿಸಲಾಗಿತ್ತು.

ವಿಮಾನಗಳಿಗೆ ಹುಸಿ ಬಾಂಬ್‌ ಬೆದರಿಕೆ : ಕಠಿಣ ಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ ಸೂಚನೆ

Latest Videos
Follow Us:
Download App:
  • android
  • ios