ಸೇನೆ ವಿರುದ್ಧವೂ ಫೇಕ್ ನ್ಯೂಸ್: ಸೋಷಿಯಲ್ ಮೀಡಿಯಾದಲ್ಲಿ ಸೇನೆಯ ಬಗ್ಗೆ ಹರಿದಾಡುತ್ತಿದೆ ಈ ಸುಳ್ಳು ಸುದ್ದಿ!
ಖಲಿಸ್ತಾನ್ಗೆ ಸಂಬಂಧಿಸಿದಂತೆ ಭಾರತ ಮತ್ತು ಕೆನಡಾ ನಡುವಿನ ಹದಗೆಟ್ಟ ಸಂಬಂಧಗಳ ಕುರಿತು ಎಲ್ಲಾ ರೀತಿಯ ನಕಲಿ ಪೋಸ್ಟ್ಗಳು ಮತ್ತು ಸುದ್ದಿಗಳನ್ನು ವೈರಲ್ ಮಾಡಲಾಗುತ್ತಿದೆ.
ನವದೆಹಲಿ (ಸೆ.20): ಭಾರತೀಯ ಸೇನೆ ಮತ್ತು ಸೈನಿಕರ ಭದ್ರತಾ ಕಮಾಂಡ್ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಎಲ್ಲಾ ರೀತಿಯ ವದಂತಿಗಳನ್ನು ಹರಡಲಾಗುತ್ತಿದೆ. ಇಂತಹ ವದಂತಿಗಳು ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ಸುಳ್ಳು ಸುದ್ದಿಗಳನ್ನು ನಂಬದೇ ಇರುವಂತೆ ಸೇನೆ ಸಲಹೆ ನೀಡಿದೆ. ಭಾರತೀಯ ಸೇನೆಯು ತನ್ನ ಅಧಿಕೃತ ಸಾಮಾಜಿಕ ಮಾಧ್ಯಮ ಹ್ಯಾಂಡಲ್ನಲ್ಲಿ ಸುಳ್ಳು ಸುದ್ದಿಗಳ ವಿರುದ್ಧ ಜನರಿಗೆ ಎಚ್ಚರಿಕೆ ನೀಡಿದೆ. ಖಲಿಸ್ತಾನ್ಗೆ ಸಂಬಂಧಿಸಿದಂತೆ ಭಾರತ ಮತ್ತು ಕೆನಡಾ ನಡುವಿನ ಹಾಳಾದ ಸಂಬಂಧಗಳ ಕುರಿತು ಎಲ್ಲಾ ರೀತಿಯ ನಕಲಿ ಪೋಸ್ಟ್ಗಳು ಮತ್ತು ಸುದ್ದಿಗಳನ್ನು ವೈರಲ್ ಮಾಡಲಾಗುತ್ತಿದೆ. ಸಿಖ್ ನಾಯಕ ಹರ್ದೀಪ್ ಸಿಂಗ್ ಹತ್ಯೆಯಲ್ಲಿ ಭಾರತ ಸರ್ಕಾರ ಭಾಗಿಯಾಗಿದೆ ಎಂದು ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೊ ಆರೋಪಿಸಿದ ನಂತರ ಸಿಖ್ ಸಮುದಾಯದ ಜನರು ಕೋಪಗೊಂಡಿದ್ದಾರೆ ಎಂದು ಟ್ವಿಟರ್ ಹ್ಯಾಂಡಲ್ ಅನ್ನು ನಡೆಸುತ್ತಿರುವ ಪ್ರಕಾಶ್ ಕುಮಾರ್ ಭಿಲ್ ಎಂಬವರು ನಕಲಿ ಮಾಹಿತಿಯನ್ನು ಪೋಸ್ಟ್ ಮಾಡಿದ್ದಾರೆ. ಈ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ರಾಷ್ಟ್ರಪತಿ ಭವನದಿಂದ ಸಿಖ್ ಭದ್ರತಾ ಸಿಬ್ಬಂದಿಯನ್ನು ತೆಗೆದುಹಾಕಲಾಗಿದೆ ಎಂದು ಟ್ವಿಟರ್ ಪೋಸ್ಟ್ನಲ್ಲಿ ತಿಳಿಸಲಾಗಿದೆ. ಇಷ್ಟೇ ಅಲ್ಲ ಸಿಖ್ ಸೈನಿಕರಿಗೆ ಅರ್ಜಿ ಸಲ್ಲಿಸಿದರೂ ರಜೆ ನೀಡುತ್ತಿಲ್ಲ ಎಂದು ಹೇಳಲಾಗಿದೆ.
ನಕಲಿ ಪೋಸ್ಟ್ಗೆ ಸೇನೆಯ ಉತ್ತರ: ಭಾರತೀಯ ಸೇನೆಯ ವಿರುದ್ಧ ಸುಳ್ಳು ಸುದ್ದಿ ಹಬ್ಬಿಸುತ್ತಿರುವ ಬಗ್ಗೆ ಸೇನೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಸೇನೆಗೆ ಮಾನಹಾನಿ ಮಾಡುವ ಉದ್ದೇಶದಿಂದ ಶತ್ರುಗಳು ಎಲ್ಲಾ ರೀತಿಯ ಸುಳ್ಳು ಸುದ್ದಿ ಮತ್ತು ವದಂತಿಗಳನ್ನು ಹರಡುತ್ತಿದ್ದಾರೆ ಎಂದು ಸೇನೆಯು ಸ್ಪಷ್ಟವಾಗಿ ಹೇಳಿದೆ. ಇಂತಹ ಸುದ್ದಿಗಳ ಬಗ್ಗೆ ಎಚ್ಚರಿಕೆ ಅಗತ್ಯ. ಭಾರತೀಯ ಸೇನೆಯ ಸೈನಿಕರು ಅಂತಹ ಯಾವುದೇ ವದಂತಿಗಳಿಗೆ ತಲೆಕೆಡಿಸಿಕೊಳ್ಳೋದಿಲ್ಲ ಎಂದಿದೆ.
ಖಲಿಸ್ತಾನಿಗಳ ಹೆಡೆಮುರಿ ಕಟ್ಟಿದ ಸರ್ಕಾರ, ಕೆನಡಾದ ನಡುರಸ್ತೆಯಲ್ಲಿಯೇ ಹೆಣವಾದ ಹರ್ದೀಪ್ ಸಿಂಗ್ ನಿಜ್ಜಾರ್!
ಸೇನೆ ಕೂಡ ತನ್ನ ಅಧಿಕೃತ ಹ್ಯಾಂಡಲ್ನಲ್ಲಿ ನಕಲಿ ಸುದ್ದಿಯನ್ನು ಹಂಚಿಕೊಂಡಿದೆ. ಆ ನಕಲಿ ಸುದ್ದಿಯ ಸ್ಕ್ರೀನ್ಶಾಟ್ ಅನ್ನು ಸೇನೆಯ ಅಧಿಕೃತ ಟ್ವಿಟರ್ ಹ್ಯಾಂಡಲ್ನಲ್ಲಿ ಹಂಚಿಕೊಳ್ಳಲಾಗಿದೆ. ಸ್ಕ್ರೀನ್ಶಾಟ್ ಹಂಚಿಕೊಳ್ಳುವ ಮೂಲಕ ಸೇನೆಯು ಸಾಮಾಜಿಕ ಮಾಧ್ಯಮದಲ್ಲಿ ಶತ್ರು ಏಜೆಂಟ್ಗಳಿಂದ ಭಾರತೀಯ ಸೇನೆಯ ಸೈನಿಕರ ಬಗ್ಗೆ ನಕಲಿ ಸಂದೇಶಗಳು, ವದಂತಿಗಳು ಮತ್ತು ದ್ವೇಷವನ್ನು ಹರಡುತ್ತಿದೆ ಎಂದು ಹೇಳಿದೆ. ಇಂತಹ ಸುಳ್ಳು ಸುದ್ದಿಗಳಿಂದ ನಿಮ್ಮನ್ನು ರಕ್ಷಿಸಿಕೊಳ್ಳಿ ಎಂದು ಎಚ್ಚರಿಸಿದೆ.
News Hour: ಖಲಿಸ್ತಾನಿ ಬೆಂಬಲಿಗರ ವೋಟ್ಬ್ಯಾಂಕ್ಗಾಗಿ ಭಾರತದಂಥ ದೇಶದ ಸಂಬಂಧವನ್ನೇ ಕಡಿದ ಕೆನಡಾ!