ಮನೆಯಲ್ಲಿ ಮಾಡಿಸಿದ ಸತ್ಯನಾರಾಯಣ ಪೂಜೆ ನಿರೀಕ್ಷಿತ ಫಲ ಕೊಡಲಿಲ್ಲ ಎಂಬ ಕಾರಣಕ್ಕೆ ಪೂಜಾರಿಯನ್ನು ತಂದೆ ಮಕ್ಕಳು ಸೇರಿ ಥಳಿಸಿದ ಘಟನೆ ಮಧ್ಯಪ್ರದೇಶ ಇಂದೋರ್‌ನಲ್ಲಿ ನಡೆದಿದೆ.

ಇಂದೋರ್‌: ಮನೆಯಲ್ಲಿ ಮಾಡಿಸಿದ ಸತ್ಯನಾರಾಯಣ ಪೂಜೆ ನಿರೀಕ್ಷಿತ ಫಲ ಕೊಡಲಿಲ್ಲ ಎಂಬ ಕಾರಣಕ್ಕೆ ಪೂಜಾರಿಯನ್ನು ತಂದೆ ಮಕ್ಕಳು ಸೇರಿ ಥಳಿಸಿದ ಘಟನೆ ಮಧ್ಯಪ್ರದೇಶ ಇಂದೋರ್‌ನಲ್ಲಿ ನಡೆದಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಕುಂಜ್‌ಬಿಹಾರಿ (60) ಥಳಿತಕ್ಕೊಳಗಾದ ವ್ಯಕ್ತಿ. ಲಕ್ಷ್ಮೀಕಾಂತ್‌ ಶರ್ಮಾ (Lakshmikanth sharma) ಅವರ ಮನೆಯಲ್ಲಿ ಸತ್ಯನಾರಾಯಣ ಪೂಜೆ (Sathyanarayana Puja)ನಡೆಸಿ ಮನೆಗೆ ಮರಳಿದ್ದೆ. ಆದರೆ ಪೂಜೆ ಮುಗಿದ ಬಳಿಕ ಶರ್ಮಾ ಅವರ ಪುತ್ರ ವಿಚಿತ್ರವಾಗಿ ಆಡಲು ಆರಂಭಿಸಿದ್ದ. ಹೀಗಾಗಿ ಪೂಜೆಯಲ್ಲಿ ಏನೋ ದೋಷ ಆಗಿದೆ ಎಂದು ಎಣಿಸಿ ಅಪ್ಪ-ಮಕ್ಕಳು ರಾತ್ರಿ ನನ್ನ ಮನೆಗೆ ಆಗಮಿಸಿ ಹಲ್ಲೆ ನಡೆಸಿದ್ದಾರೆ ಎಂದು ಕುಂಜ್‌ ಬಿಹಾರಿ (Kunj bihari) ದೂರಿದ್ದಾರೆ. ಈ ವೇಳೆ ನೆರೆಹೊರೆಯವರು ಅರ್ಚಕರನ್ನು (Priest) ರಕ್ಷಿಸಿದ್ದಾರೆ. ಪ್ರಕರಣ ಸಂಬಂಧ ಲಕ್ಷ್ಮಿಕಾಂತ್‌ ಅವರ ಕುಟುಂಬದ ಮೂವರನ್ನು ಬಂಧಿಸಲಾಗಿದೆ.