ಪಶ್ಚಿಮ ಬಂಗಾಳದ ರಾಜಧಾನಿ ಕೋಲ್ಕತಾದ ದುರ್ಗಾ ಪೂಜೆ ಪೆಂಡಾಲ್‌ವೊಂದರಲ್ಲಿ, ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿ ಅವರನ್ನು ರಾಕ್ಷಸ ಮಹಿಷಾಸುರನಿಗೆ ಹೋಲಿಸುವ ರೀತಿಯಲಿ ಬಿಂಬಿಸಲಾಗಿದ್ದು ಭಾರೀ ವಿವಾದಕ್ಕೆ ಕಾರಣವಾಗಿದೆ.

ಕೋಲ್ಕತಾ: ಪಶ್ಚಿಮ ಬಂಗಾಳದ ರಾಜಧಾನಿ ಕೋಲ್ಕತಾದ ದುರ್ಗಾ ಪೂಜೆ ಪೆಂಡಾಲ್‌ವೊಂದರಲ್ಲಿ, ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿ ಅವರನ್ನು ರಾಕ್ಷಸ ಮಹಿಷಾಸುರನಿಗೆ ಹೋಲಿಸುವ ರೀತಿಯಲಿ ಬಿಂಬಿಸಲಾಗಿದ್ದು ಭಾರೀ ವಿವಾದಕ್ಕೆ ಕಾರಣವಾಗಿದೆ.

Add Asianetnews Kannada as a Preferred SourcegooglePreferred

ಇಲ್ಲಿನ ರೂಬಿ ಕ್ರಾಸಿಂಗ್‌ನಲ್ಲಿ ಅಖಿಲ ಭಾರತೀಯ ಹಿಂದೂ ಮಹಾಸಭಾ (Akhil Bharatiya Hindu Mahasabha) ದುರ್ಗಾ ಪೆಂಡಾಲ್‌(Durga pendal) ಹಾಕಿದೆ. ಇಲ್ಲಿ ದುರ್ಗೆಯ ಕಾಲಿನ ಬಳಿ ತ್ರಿಶೂಲದಿಂದ(Trishool) ಇರಿಯುತ್ತಿರುವ ಮಹಿಷಾಸುರನನ್ನು ಇರಿಸಲಾಗಿದ್ದು, ಈ ಮಹಿಷನನ್ನು(Mahisha) ಗಾಂಧಿಗೆ ಹೋಲಿಸುವಂತೆ ಚಿತ್ರಿಸಲಾಗಿದೆ. ಇದಕ್ಕೆ ತೀವ್ರ ವಿರೋಧ ವ್ಯಕ್ತವಾಗಿದೆ. 

ನವರಾತ್ರಿ ವಿಷಯಕ್ಕೆ ಗುಜರಾತಿಗಳು ಪ್ರತಿಭಟನೆ ಮಾಡ್ಬೋದು; ಆನಂದ್ ಮಹೀಂದ್ರಾ ಹೀಗಂದಿದ್ದೇಕೆ?!

ಇದಾದ ಬಳಿಕ ಸ್ಥಳಕ್ಕೆ ಪೊಲೀಸರು ಆಗಮಿಸಿ ಗಾಂಧೀಜಿಯನ್ನು ಹೋಲುವ ಮೂರ್ತಿ ತೆಗೆಯುವಂತೆ ಸೂಚಿಸಿದ್ದಾರೆ. ಆದರೆ ಪೊಲೀಸರ ಸೂಚನೆ ಬಳಿಕ ಮೂರ್ತಿ ಮುಖಕ್ಕೆ ಮೀಸೆ, ತಲೆಗೆ ಕೂದಲು ಅಂಟಿಸಿ ರೂಪವನ್ನು ಬದಲಾಯಿಸಲಾಗಿದೆ. ಈ ಬೆಳವಣಿಗೆಯನ್ನು ಬಿಜೆಪಿ ಮತ್ತು ಟಿಎಂಸಿ ನಾಯಕರು ಖಂಡಿಸಿದ್ದಾರೆ. ಘಟನೆ ಕುರಿತು ಪ್ರತಿಕ್ರಿಯಿಸಿರುವ ಹಿಂದೂ ಮಹಾಸಭಾದ ಕಾರ್ಯಕರ್ತರು, ಈ ಬಾರಿ ಅಪರೂಪಕ್ಕೆ ಗಾಂಧೀ ಜಯಂತಿಯಂದೇ (Gandhi Birth Anniversary) ದುರ್ಗಾ ಪೂಜೆ ಬಂದಿದೆ. ಹೀಗಾಗಿ ಗಾಂಧೀ ಪ್ರತಿಮೆಯನ್ನು ಸ್ಥಾಪಿಸಲು ನಾವು ಮೊದಲೇ ನಿರ್ಧರಿಸಿದ್ದೆವು ಎಂದು ಹೇಳಿದ್ದಾರೆ.
Navratri 2022 : ದುರ್ಗೆ ಪೂಜೆ ಜೊತೆ ಮನೆ ಮಹಿಳೆ ಮೇಲಿರಲಿ ವಿಶೇಷ ಪ್ರೀತಿ