ಭಾರತವು ಆಯೋಜಿಸುತ್ತಿರುವ ಮೊದಲ ಜಿ20 ಶೃಂಗಸಭೆ ಇದಾಗಿದೆ. ಇದು ನಮಗೆ ಸಂತಸ ತರುತ್ತಿದೆ. ಈಗ ಭಾರತಕ್ಕೆ ಬಂದಿರುವ ಅತಿಥಿಗಳು ನಮ್ಮ ಆತಿಥ್ಯವನ್ನು ಆನಂದಿಸುವ ವಿಶ್ವಾಸವಿದೆ’ ಎಂದ ಮೋದಿ. 

ನವದೆಹಲಿ(ಸೆ.09): ಇಂದು(ಶನಿವಾರ) ಹಾಗೂ ನಾಳೆ(ಭಾನುವಾರ) ಭಾರತದ ರಾಜಧಾನಿಯಲ್ಲಿ ನಡೆಯಲಿರುವ ಜಿ20 ಶೃಂಗಸಭೆಯು ಮಾನವ ಕೇಂದ್ರಿತ ಹಾಗೂ ಎಲ್ಲರನ್ನೂ ಒಳಗೊಂಡ ಅಭಿವೃದ್ಧಿಯ (ಅಂತರ್ಗತ ಅಭಿವೃದ್ಧಿಯ) ಹೊಸ ಹಾದಿ ರೂಪಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇದಲ್ಲದೆ ಮಹಾತ್ಮಾ ಗಾಂಧೀಜಿ ಅವರ ಬಡವರ ಉದ್ಧಾರದ ತತ್ವ ಪಠಿಸಿದ್ದಾರೆ.

Add Asianetnews Kannada as a Preferred SourcegooglePreferred

ಶುಕ್ರವಾರ ಸಂಜೆ ಸರಣಿ ಟ್ವೀಟ್‌ ಮಾಡಿರುವ ಮೋದಿ, ‘ಭಾರತವು ಆಯೋಜಿಸುತ್ತಿರುವ ಮೊದಲ ಜಿ20 ಶೃಂಗಸಭೆ ಇದಾಗಿದೆ. ಇದು ನಮಗೆ ಸಂತಸ ತರುತ್ತಿದೆ. ಈಗ ಭಾರತಕ್ಕೆ ಬಂದಿರುವ ಅತಿಥಿಗಳು ನಮ್ಮ ಆತಿಥ್ಯವನ್ನು ಆನಂದಿಸುವ ವಿಶ್ವಾಸವಿದೆ’ ಎಂದಿದ್ದಾರೆ.

ದೇಶಕ್ಕೆ ಬಂದ ಮಗಳು ಅಳಿಯ, ಸಾಂಪ್ರದಾಯಿಕವಾಗಿ ಕಚ್ಚೆ ಪಂಚೆ ಧರಿಸಿ ಸ್ವಾಗತಿಸಿದ ಕೇಂದ್ರ ಸಚಿವ!

‘ಜಿ 20 ಶೃಂಗವು ಮಾನವ ಕೇಂದ್ರಿತ ಮತ್ತು ಅಂತರ್ಗತ ಅಭಿವೃದ್ಧಿಯಲ್ಲಿ ಹೊಸ ಹಾದಿಯನ್ನು ರೂಪಿಸಲಿದೆ. ಮಹಾತ್ಮಾ ಗಾಂಧೀಜಿ ಅವರು ಸರದಿಯಲ್ಲಿನ ಕೊನೆಯ ವ್ಯಕ್ತಿಯಾದ ಹಿಂದುಳಿದವರಿಗೆ ಸೇವೆ ಸಲ್ಲಿಸುವ ಅವರ ಧ್ಯೇಯ ಪಠಿಸಿದ್ದರು. ಅದನ್ನು ಈಗ ಅನುಕರಿಸುವುದು ಮುಖ್ಯ’ ಎಂದು ತಿಳಿಸಿದ್ದಾರೆ.

‘21ನೇ ಶತಮಾನದ ವೇಳೆ ಬಹುಪಕ್ಷೀಯ ಸಂಸ್ಥೆಗಳನ್ನು ಬಲಪಡಿಸಲು ಬಯಸುತ್ತೇವೆ. ನಾವು ತಾಂತ್ರಿಕ ರೂಪಾಂತರ ಮತ್ತು ಡಿಜಿಟಲ್‌ ಸಾರ್ವಜನಿಕ ಮೂಲಸೌಕರ್ಯಗಳಂತಹ ಭವಿಷ್ಯದ ವಲಯಗಳಿಗೆ ಅಪಾರ ಆದ್ಯತೆಯನ್ನು ನೀಡುತ್ತೇವೆ. ನಾವು ಮತ್ತಷ್ಟುಲಿಂಗ ಸಮಾನತೆ, ಮಹಿಳಾ ಸಬಲೀಕರಣ ಮತ್ತು ವಿಶ್ವ ಶಾಂತಿಗಾಗಿ ಒಟ್ಟಾಗಿ ಕೆಲಸ ಮಾಡುತ್ತೇವೆ’ ಎಂದಿದ್ದಾರೆ,

‘ನಮ್ಮ ಸಾಂಸ್ಕೃತಿಕ ನೀತಿಯಲ್ಲಿ ಬೇರೂರಿರುವ ಭಾರತದ ಜಿ20 ಅಧ್ಯಕ್ಷೀಯ ವಿಷಯವಾದ ‘ವಸುಧೈವ ಕುಟುಂಬಕಂ - ಒಂದು ಭೂಮಿ, ಒಂದು ಕುಟುಂಬ, ಒಂದು ಭವಿಷ್ಯ’ ಘೋಷಣೆಯು ಇಡೀ ಜಗತ್ತು ಒಂದೇ ಕುಟುಂಬ ಎಂಬ ನಮ್ಮ ವಿಶ್ವ ದೃಷ್ಟಿಕೋನವನ್ನು ಆಳವಾಗಿ ಅನುರಣಿಸುತ್ತದೆ’ ಎಂದಿದ್ದಾರೆ

‘ಭಾರತದ ಜಿ20 ಅಧ್ಯಕ್ಷ ಸ್ಥಾನವು ಅಂತರ್ಗತ, ಮಹತ್ವಾಕಾಂಕ್ಷೆಯ, ನಿರ್ಣಾಯಕ ಮತ್ತು ಕಾರ್ಯ ಆಧಾರಿತವಾಗಿದೆ. ನಾವು ಹಿಂದುಳಿದ ದೇಶಗಳ ಅಭಿವೃದ್ಧಿಗಾಗಿ ದನಿ ಎತ್ತಿದ್ದೇವೆ. ಸಮತೋಲಿತ ಬೆಳವಣಿಗೆಯ ಇರಾದೆ ನಮ್ಮದಾಗಿದೆ’ ಎಂದಿದ್ದಾರೆ.