ರಾಜ್ಯಸಭೆಯ ಆಪ್ ಉಪನಾಯಕ ಸ್ಥಾನದಿಂದ ವಜಾಗೊಂಡಿರುವ ರಾಘವ್ ಛಡ್ಡಾ, ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ತಮ್ಮ ಮೇಲಿನ ಆರೋಪಗಳು ಸುಳ್ಳು ಎಂದು ಸವಾಲೆಸೆದಿರುವ ಅವರು, ಜನರ ಧ್ವನಿಯಾಗಲು ಸಂಸತ್ತಿಗೆ ಬಂದಿದ್ದೇನೆ ಹೊರತು ಗದ್ದಲ ಸೃಷ್ಟಿಸಲು ಅಲ್ಲ ಎಂದು ತಿರುಗೇಟು ನೀಡಿದ್ದಾರೆ.

ನವದೆಹಲಿ(ಏ.5): ರಾಜ್ಯಸಭೆಯ ಆಮ್‌ ಆದ್ಮಿ ಪಕ್ಷದ (ಆಪ್‌) ಉಪನಾಯಕ ಸ್ಥಾನದಿಂದ ವಜಾಗೊಂಡಿರುವ ಸಂಸದ ರಾಘವ್‌ ಛಡ್ಡಾ ಶನಿವಾರವೂ ಪಕ್ಷದ ವಿರುದ್ಧ ವಾಗ್ದಾಳಿ ಮುಂದುವರಿಸಿದ್ದು, ‘ಘಾಯಲ್‌ ಹೂಂ, ಇಸೀಲಿಯೇ ಘಾತಕ್‌ ಹೂಂ’ (ಗಾಯಗೊಂಡಿದ್ದೇನೆ, ಇದೇ ಕಾರಣಕ್ಕೆ ಘಾತಕನಾಗಿದ್ದೇನೆ) ಎಂದು ಧುರಂಧರ್‌ ಸಿನಿಮಾ ಡೈಲಾಗ್‌ ಮೂಲಕ ಚಾಟಿ ಬೀಸಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಇದನ್ನೂ ಓದಿ:ಮಧ್ಯಪ್ರಾಚ್ಯ ಸಂಘರ್ಷ: ಕೇಂದ್ರದ ನಿಲುವಿಗೆ ರಾಹುಲ್ ಗಾಂಧಿ ಟೀಕೆ, ಪ್ರಧಾನಿ ಮೋದಿ ಬೆಂಬಲಕ್ಕೆ ನಿಂತ ಕಾಂಗ್ರೆಸ್ ಹಿರಿಯ ನಾಯಕರು!

ವಿಡಿಯೋ ಸಂದೇಶ ಬಿಡುಗಡೆ ಮಾಡಿರುವ ಅವರು, ‘ಸದನದಿಂದ ವಿಪಕ್ಷಗಳು ಸಭಾತ್ಯಾಗ ಮಾಡಿದಾಗ ನಾನು ಅವರೊಂದಿಗೆ ಹೊರನಡೆಯಲಿಲ್ಲ ಮತ್ತು ಮುಖ್ಯ ಚುನಾವಣಾ ಆಯುಕ್ತರ ಪದಚ್ಯುತಿಯ ಗೊತ್ತುವಳಿಗೆ ಸಹಿ ಹಾಕಲಿಲ್ಲ ಎಂಬುದು ನನ್ನ ಮೇಲಿನ ಮೊದಲ ಆರೋಪ. ಇದು ಶುದ್ಧ ಸುಳ್ಳು. ವಿಪಕ್ಷದವರು ಸಭಾತ್ಯಾಗ ಮಾಡಿ ನಾನು ಅವರಿಗೆ ಬೆಂಬಲ ನೀಡದ ಒಂದೇ ಒಂದು ಘಟನೆಯ ಉದಾಹರಣೆ ಕೊಡಿ’ ಎಂದು ಪಕ್ಷಕ್ಕೆ ಸವಾಲೆಸೆದರು. ಜೊತೆಗೆ ನಾನು ಸಂಸತ್ತಿಗೆ ಜನರ ವಿಷಯಗಳ ಬಗ್ಗೆ ಧ್ವನಿ ಎತ್ತಲು ಬಂದಿದ್ದೇನೆಯೇ ಹೊರತೂ ಗದ್ದಲ ಸೃಷ್ಟಿಸಲು ಅಲ್ಲ ಎಂದು ಪಕ್ಷದ ನಾಯಕರಿಗೆ ತಿರುಗೇಟು ನೀಡಿದ್ದಾರೆ.