Asianet Suvarna News Asianet Suvarna News

Goa Elections: ತಂದೆಯನ್ನು ನೆನಪಿಸಿಕೊಳ್ಳಿ, ಬಿಜೆಪಿ ಬಿಡದಂತೆ ಪರಿಕ್ಕರ್ ಪುತ್ರನಿಗೆ ಸಿ. ಟಿ. ರವಿ ಮನವಿ!

* ಗೋವಾ ಚುನಾವಣಾ ಹೊಸ್ತಿಲಲ್ಲಿ ಬಿಜೆಪಿಗೆ ಉತ್ಪಲ್ ಶಾಕ್

* ಪಕ್ಷ ಬಿಟ್ಟ ಮಾಜಿ ಕೇಂದ್ರ ಸಚಿವರ ಪುತ್ರ

* ನಿಮ್ಮ ನಿರ್ಧಾರ ಮತ್ತೆ ಪರಿಧಶೀಲಿಸಿ ಎಂದ ಸಿ. ಟಿ. ರವಿ

Goa polls: Request Utpal Parrikar to reconsider his decision says CT Ravi pod
Author
Bangalore, First Published Jan 24, 2022, 8:36 AM IST

ಪಣಜಿ(ಜ.24): ಗೋವಾದ ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿ ನಾಯಕ ಮನೋಹರ್ ಪರಿಕ್ಕರ್ ಅವರ ಪುತ್ರ ಉತ್ಪಲ್ ಪರಿಕ್ಕರ್ ಅವರು 2022 ರ ಗೋವಾ ವಿಧಾನಸಭಾ ಚುನಾವಣೆಯಲ್ಲಿ ಪಣಜಿ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ನೀಡದ ಕಾರಣ ಪಕ್ಷ ತೊರೆದಿದ್ದಾರೆ. ಉತ್ಪಲ್ ಸ್ವತಂತ್ರ ಅಭ್ಯರ್ಥಿಯಾಗಿ ಚುನಾವಣೆಗೆ ಸ್ಪರ್ಧಿಸಲು ನಿರ್ಧರಿಸಿದ್ದಾರೆ. ಏತನ್ಮಧ್ಯೆ, ಬಿಜೆಪಿ ನಾಯಕರು ಅವರ ನಿರ್ಧಾರವನ್ನು ಪರಿಗಣಿಸುವಂತೆ ಮನವಿ ಮಾಡುತ್ತಿದ್ದಾರೆ. ಇದಕ್ಕಾಗಿ ತಂದೆಯ ವಿಚಾರವನ್ನು ಪ್ರಸ್ತಾಪಿಸಿ, ಅವರನ್ನು ನೆನಪಿಸಿದ್ದಾರೆ.

ಬಿಜೆಪಿ ಪ್ರಧಾನ ಕಾರ್ಯದರ್ಶಿ ಹಾಗೂ ಗೋವಾ ಉಸ್ತುವಾರಿ ಸಿ.ಟಿ.ರವಿ ಉತ್ಪಲ್ ಅವರು ತಮ್ಮ ನಿರ್ಧಾರವನ್ನು ಮರುಪರಿಶೀಲಿಸಿ ತಮ್ಮ ತಂದೆ ಮನೋಹರ್ ಪರಿಕ್ಕರ್ ಅವರ ಕನಸನ್ನು ನನಸಾಗಿಸಬೇಕು ಎಂದು ಮನವಿ ಮಾಡಿದ್ದಾರೆ. ಸಿ.ಟಿ.ರವಿ ಮಾತನಾಡಿ, ಮನೋಹರ್ ಪರಿಕ್ಕರ್ ಯಾವಾಗಲೂ ಬಿಜೆಪಿ ಗೆಲುವಿಗೆ ಶ್ರಮಿಸಿದ್ದಾರೆ. ಅವರ ಪುತ್ರ ಉತ್ಪಲ್ ಪರಿಕ್ಕರ್ ಅವರು ತಮ್ಮ ನಿರ್ಧಾರವನ್ನು ಮರುಪರಿಶೀಲಿಸಿ ತಮ್ಮ ತಂದೆಯ ಕನಸನ್ನು ಈಡೇರಿಸುವಂತೆ ನಾನು ವಿನಂತಿಸುತ್ತೇನೆ ಎಂದಿದ್ದಾರೆ.

ಪಣಜಿಯಿಂದ ಬಿಜೆಪಿ ಟಿಕೆಟ್ ನೀಡಿಲ್ಲ

ಉತ್ಪಾಲ್ ಅವರು ಪಣಜಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಸಿದ್ಧತೆ ನಡೆಸಿದ್ದಾರೆ ಎಂದು ತಿಳಿಸೋಣ. ಇಲ್ಲಿಂದ ಅವರ ತಂದೆ ಮನೋಹರ್ ಪರಿಕ್ಕರ್ ಚುನಾವಣೆಗೆ ಸ್ಪರ್ಧಿಸುತ್ತಿದ್ದರು. ಗೋವಾದ 40 ಸ್ಥಾನಗಳ ಪೈಕಿ 34 ಸ್ಥಾನಗಳಿಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿತು ಆದರೆ ಅದರಲ್ಲಿ ಉತ್ಪಾಲ್ ಹೆಸರು ಇರಲಿಲ್ಲ. ಪಣಜಿ ಕ್ಷೇತ್ರದಿಂದ ಬಿಜೆಪಿ ಅಟನಾಸಿಯೊ ಬಾಬುಷ್ ಮಾನ್ಸೆರೇಟ್ ಅವರನ್ನು ಕಣಕ್ಕಿಳಿಸಿದೆ, ಅವರು ಕಾಂಗ್ರೆಸ್‌ನಿಂದ ಬಿಜೆಪಿಗೆ ಬದಲಾದರು. ಟಿಕೆಟ್ ನಿರಾಕರಿಸಿದ ನಂತರ ಉತ್ಪಾಲ್ ಅವರು ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಘೋಷಿಸಿದ್ದರು.

ನಾನು ಪಣಜಿ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತೇನೆ ಎಂದು ಉತ್ಪಲ್ ಹೇಳಿದ್ದರು. ಮನೋಹರ್ ಪರಿಕ್ಕರ್ ಅವರು ಕೆಲವು ಮೌಲ್ಯಗಳ ಪರವಾಗಿ ನಿಂತಿದ್ದರಿಂದ ಇಲ್ಲಿನ ಜನರು ಇಷ್ಟು ವರ್ಷ ಮತ ಹಾಕಿದ್ದಾರೆ. ನನಗೂ ಆ ಮೌಲ್ಯಗಳಿವೆ. ನಾನು ಕೂಡ ಆ ಮೌಲ್ಯಗಳ ಪರವಾಗಿ ನಿಲ್ಲುವ ಸಮಯ ಬಂದಿದೆ. ಏತನ್ಮಧ್ಯೆ, ಬಿಜೆಪಿ ಕೇಂದ್ರ ನಾಯಕ ಉತ್ಪಲ್ ಪರಿಕ್ಕರ್ ಅವರೊಂದಿಗೆ ಮಾತುಕತೆ ನಡೆಸುತ್ತಿದ್ದಾರೆ ಮತ್ತು ಮುಂಬರುವ ಗೋವಾ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಅವರಿಗೆ ಎರಡು ಕ್ಷೇತ್ರಗಳನ್ನು ನೀಡುವುದಾಗಿ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಗುರುವಾರ ಹೇಳಿದ್ದಾರೆ.

Follow Us:
Download App:
  • android
  • ios